Latest Updates
-
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ! -
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು! -
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ! -
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ?
ಗಂಟಲಿನಲ್ಲಿ ಕಿಚ್ ಕಿಚ್: ಶುಂಠಿ ಇದೆಯಲ್ಲ!

ತುಳಸಿ, ಶುಂಠಿ, ಕೊತ್ತಂಬರಿ ಬೀಜ ಇವು ಕಷಾಯಕ್ಕೆ ಖಾಯಂ ಪದಾರ್ಥಗಳು. ಅಡುಗೆಗೆ ಬಳಕೆಯಾಗುವುದಕ್ಕಿಂತ ಆರೋಗ್ಯ ವರ್ಧನೆಗೂ ಶುಂಠಿ ಹೆಚ್ಚು ಸಹಕಾರಿ ಎನ್ನಲಡ್ಡಿಯಿಲ್ಲ. ಶಾಲೆಯಲ್ಲಿ ಮಾತ್ರ ಮೇಷ್ಟ್ರು ಒಣ ಶುಂಠಿ ಕೊಡ್ಲಾ ಎಂದರೆ ನಡುಕ ಹುಟ್ಟಿಬಿಡುತ್ತಿತ್ತು.
ಪ್ರಪಂಚದೆಲ್ಲೆಡೆ ಸಿಗುವ ಅತ್ಯುತ್ತಮ ಔಷಧಿ ಎಂಬ ಕಾರಣಕ್ಕೆ ಇದನ್ನು 'ಮಹೌಷಧಿ', 'ವಿಷ್ವಬೇಷಜ' ಎಂದು ಕರೆಯುತ್ತಾರೆ. ಜಠರದ ತೊಂದರೆ ನಿವಾರಣೆಗೆ, ಅಜೀರ್ಣ, ವಾಯು, ವಾಕರಿಕೆ, ಮಲಬದ್ಧತೆ, ಹೊಟ್ಟೆಯ ಸೋಂಕು ನಿವಾರಣೆಗೆ ಸಹಕಾರಿ. ಕೊಲೆಸ್ಟ್ರಾಲ್ ಕಮ್ಮಿ ಮಾಡುವುದರಿಂದ ಹೃದಯ ಸಂಬಂಧಿ ರೋಗದಿಂದ ಬಳಲುವವರಿಗೆ ಸಹಕಾರಿ.
ಶುಂಠಿಯ ಸಾಮಾನ್ಯ ಉಪಯೋಗಗಳು:
* ಅರ್ಧ ಟೀ ಚಮಚ ಶುಂಠಿ ರಸ, 1 ಟೀ ಚಮಚ ನಿಂಬೆರಸ, ಅಷ್ಟೇ ಪುದೀನ ಎಲೆಯ ರಸ, 1 ಟೀ ಚಮಚ ಜೇನುತುಪ್ಪ ಸೇರಿಸಿ 3 ಭಾಗ ಮಾಡಿ ದಿನಕ್ಕೆ 3 ಬಾರಿ ಸೇವಿಸಲು ಶ್ವಾಸರೋಗ, ಸ್ವರ ಭೇದ, ಅಜೀರ್ಣ, ಕೆಮ್ಮು ರೋಗಗಳನ್ನು ನಿವಾರಿಸಬಹುದು.
* 1 ಸಣ್ಣ ತುಂಡು ಹಸಿ ಶುಂಠಿಯನ್ನು 1 ಬಟ್ಟಲು ನೀರಿನಲ್ಲಿ 15 ನಿಮಿಷ ಕುದಿಸಿ, ಸ್ವಲ್ಪ ಸಕ್ಕರೆ ಹಾಕಿ ದಿನಕ್ಕೆ 3 ಬಾರಿ ಆಹಾರ ಸೇವನೆ ಮಾಡಿದರೆ ಋತುಸ್ರಾವದ ತೊಂದರೆಗಳು ನಿವಾರಣೆಯಾಗುತ್ತದೆ.
*1 ತುಂಡು ಶುಂಠಿ, 1 ಲವಂಗ, 1 ಹರಳು ಉಪ್ಪು ಇವುಗಳನ್ನು ಬಾಯಿಯಲ್ಲಿಟ್ಟು ಚಪ್ಪರಿಸುವುದರಿಂದ ಕೆಮ್ಮು, ಗಂಟಲು ಕೆರೆತಗಳನ್ನು ಹೋಗಲಾಡಿಸಬಹುದು.
* ಶುಂಠಿಯನ್ನು ನೀರಿನಲ್ಲಿ ಅರೆದು ಬರುವ ಗಂಧವನ್ನು ಹಣೆಗೆ ಲೇಪ ಮಾಡಿ ಹಚ್ಚುವುದರಿಂದ ತಲೆನೋವು ನಿವಾರಣೆಯಾಗುತ್ತದೆ.
* ಒಣ ಶುಂಠಿ ಚೂರ್ಣವನ್ನು ಬೆಲ್ಲದೊಂದಿಗೆ ನೀಡುವುದರಿಂದ ಅಜೀರ್ಣದಿಂದ ಉಂಟಾದ ಭೇದಿ ಹತೋಟಿಗೆ ಬರುತ್ತದೆ.
* ಒಣ ಶುಂಠಿ, ಮೆಣಸು ಮತ್ತು ಹಿಪ್ಪಲಿಗಳನ್ನು ಸಮನಾಗಿ ತೆಗೆದುಕೊಂಡು, ಹುರಿದು , ಪುಡಿ ಮಾಡಿಕೊಂಡು ತೆಳು ಬಟ್ಟೆಯಲ್ಲಿ ಸೋಸಿ, ಬೆಣ್ಣೆಯೊಡನೆ ಸೇವಿಸಿದರೆ ಹೊಟ್ಟೆ ನೋವು ನಿವಾರಣೆಯಾಗುತ್ತದೆ.
ಓದುಗರಲ್ಲಿ ಒಂದು ಅರಿಕೆ: ಔಷಧೀಯ ಸಸ್ಯಗಳ ಬಗ್ಗೆ ಇಲ್ಲಿ ನೀಡಿರುವ ಉಪಯೋಗಗಳು ಮುನ್ನೋಟದಂತೆ ಭಾವಿಸಬಹುದು. ನಿಮಗೆ ಹೆಚ್ಚಿನ ಉಪಯುಕ್ತ ಮಾಹಿತಿ ಲಭ್ಯವಾದರೆ ದಯವಿಟ್ಟು ನಮಗೂ ಕಳಿಸಿಕೊಡಿ. ಅದನ್ನು ಇನ್ನಷ್ಟು ಜನರಿಗೆ ತಲುಪಿಸೋಣ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications