Just In
- 19 min ago ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- 5 hrs ago ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- 13 hrs ago ಮೀನ ರಾಶಿಯಲ್ಲಿ ರಾಹು-ಮಂಗಳ ಯುತಿಯಿಂದ ಅಂಗಾರಕ ಯೋಗ: 12 ರಾಶಿಗಳ ಮೇಲಿರಲಿದೆ ಈ ನಕರಾತ್ಮಕ ಪರಿಣಾ
- 14 hrs ago ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
Don't Miss
- Movies ತಾತನಿಗೆ ಧನ್ಯಾ ರಾಮ್ಕುಮಾರ್ ಟ್ರಿಬ್ಯೂಟ್; ಕಿಶನ್ ಜೊತೆ ಡ್ಯುಯೆಟ್
- News Summer Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ.. ಇಲ್ಲಿವೆ ಸಲಹೆಗಳು
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Automobiles ಮಾರುತಿ ಸ್ವಿಫ್ಟ್ ಖರೀದಿಸುತ್ತಿದ್ದೀರಾ? ಸ್ವಲ್ಪ ಕಾಯಿರಿ... ಹೊಸ ಸ್ವಿಫ್ಟ್ ಬರುತ್ತಿದೆ! 35 ಕಿ.ಮೀ ಮೈಲೇಜ್
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಂಟಲಿನಲ್ಲಿ ಕಿಚ್ ಕಿಚ್: ಶುಂಠಿ ಇದೆಯಲ್ಲ!
ತುಳಸಿ, ಶುಂಠಿ, ಕೊತ್ತಂಬರಿ ಬೀಜ ಇವು ಕಷಾಯಕ್ಕೆ ಖಾಯಂ ಪದಾರ್ಥಗಳು. ಅಡುಗೆಗೆ ಬಳಕೆಯಾಗುವುದಕ್ಕಿಂತ ಆರೋಗ್ಯ ವರ್ಧನೆಗೂ ಶುಂಠಿ ಹೆಚ್ಚು ಸಹಕಾರಿ ಎನ್ನಲಡ್ಡಿಯಿಲ್ಲ. ಶಾಲೆಯಲ್ಲಿ ಮಾತ್ರ ಮೇಷ್ಟ್ರು ಒಣ ಶುಂಠಿ ಕೊಡ್ಲಾ ಎಂದರೆ ನಡುಕ ಹುಟ್ಟಿಬಿಡುತ್ತಿತ್ತು.
ಪ್ರಪಂಚದೆಲ್ಲೆಡೆ ಸಿಗುವ ಅತ್ಯುತ್ತಮ ಔಷಧಿ ಎಂಬ ಕಾರಣಕ್ಕೆ ಇದನ್ನು 'ಮಹೌಷಧಿ', 'ವಿಷ್ವಬೇಷಜ' ಎಂದು ಕರೆಯುತ್ತಾರೆ. ಜಠರದ ತೊಂದರೆ ನಿವಾರಣೆಗೆ, ಅಜೀರ್ಣ, ವಾಯು, ವಾಕರಿಕೆ, ಮಲಬದ್ಧತೆ, ಹೊಟ್ಟೆಯ ಸೋಂಕು ನಿವಾರಣೆಗೆ ಸಹಕಾರಿ. ಕೊಲೆಸ್ಟ್ರಾಲ್ ಕಮ್ಮಿ ಮಾಡುವುದರಿಂದ ಹೃದಯ ಸಂಬಂಧಿ ರೋಗದಿಂದ ಬಳಲುವವರಿಗೆ ಸಹಕಾರಿ.
ಶುಂಠಿಯ ಸಾಮಾನ್ಯ ಉಪಯೋಗಗಳು:
* ಅರ್ಧ ಟೀ ಚಮಚ ಶುಂಠಿ ರಸ, 1 ಟೀ ಚಮಚ ನಿಂಬೆರಸ, ಅಷ್ಟೇ ಪುದೀನ ಎಲೆಯ ರಸ, 1 ಟೀ ಚಮಚ ಜೇನುತುಪ್ಪ ಸೇರಿಸಿ 3 ಭಾಗ ಮಾಡಿ ದಿನಕ್ಕೆ 3 ಬಾರಿ ಸೇವಿಸಲು ಶ್ವಾಸರೋಗ, ಸ್ವರ ಭೇದ, ಅಜೀರ್ಣ, ಕೆಮ್ಮು ರೋಗಗಳನ್ನು ನಿವಾರಿಸಬಹುದು.
* 1 ಸಣ್ಣ ತುಂಡು ಹಸಿ ಶುಂಠಿಯನ್ನು 1 ಬಟ್ಟಲು ನೀರಿನಲ್ಲಿ 15 ನಿಮಿಷ ಕುದಿಸಿ, ಸ್ವಲ್ಪ ಸಕ್ಕರೆ ಹಾಕಿ ದಿನಕ್ಕೆ 3 ಬಾರಿ ಆಹಾರ ಸೇವನೆ ಮಾಡಿದರೆ ಋತುಸ್ರಾವದ ತೊಂದರೆಗಳು ನಿವಾರಣೆಯಾಗುತ್ತದೆ.
*1 ತುಂಡು ಶುಂಠಿ, 1 ಲವಂಗ, 1 ಹರಳು ಉಪ್ಪು ಇವುಗಳನ್ನು ಬಾಯಿಯಲ್ಲಿಟ್ಟು ಚಪ್ಪರಿಸುವುದರಿಂದ ಕೆಮ್ಮು, ಗಂಟಲು ಕೆರೆತಗಳನ್ನು ಹೋಗಲಾಡಿಸಬಹುದು.
* ಶುಂಠಿಯನ್ನು ನೀರಿನಲ್ಲಿ ಅರೆದು ಬರುವ ಗಂಧವನ್ನು ಹಣೆಗೆ ಲೇಪ ಮಾಡಿ ಹಚ್ಚುವುದರಿಂದ ತಲೆನೋವು ನಿವಾರಣೆಯಾಗುತ್ತದೆ.
* ಒಣ ಶುಂಠಿ ಚೂರ್ಣವನ್ನು ಬೆಲ್ಲದೊಂದಿಗೆ ನೀಡುವುದರಿಂದ ಅಜೀರ್ಣದಿಂದ ಉಂಟಾದ ಭೇದಿ ಹತೋಟಿಗೆ ಬರುತ್ತದೆ.
* ಒಣ ಶುಂಠಿ, ಮೆಣಸು ಮತ್ತು ಹಿಪ್ಪಲಿಗಳನ್ನು ಸಮನಾಗಿ ತೆಗೆದುಕೊಂಡು, ಹುರಿದು , ಪುಡಿ ಮಾಡಿಕೊಂಡು ತೆಳು ಬಟ್ಟೆಯಲ್ಲಿ ಸೋಸಿ, ಬೆಣ್ಣೆಯೊಡನೆ ಸೇವಿಸಿದರೆ ಹೊಟ್ಟೆ ನೋವು ನಿವಾರಣೆಯಾಗುತ್ತದೆ.
ಓದುಗರಲ್ಲಿ ಒಂದು ಅರಿಕೆ: ಔಷಧೀಯ ಸಸ್ಯಗಳ ಬಗ್ಗೆ ಇಲ್ಲಿ ನೀಡಿರುವ ಉಪಯೋಗಗಳು ಮುನ್ನೋಟದಂತೆ ಭಾವಿಸಬಹುದು. ನಿಮಗೆ ಹೆಚ್ಚಿನ ಉಪಯುಕ್ತ ಮಾಹಿತಿ ಲಭ್ಯವಾದರೆ ದಯವಿಟ್ಟು ನಮಗೂ ಕಳಿಸಿಕೊಡಿ. ಅದನ್ನು ಇನ್ನಷ್ಟು ಜನರಿಗೆ ತಲುಪಿಸೋಣ.