Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಇದು ನಿಜ, ಹೃದ್ರೋಗದ ಮೂಲ ಕಿಡ್ನಿಯಲ್ಲಿದೆ!

ಅಂದರೆ ಮಧುಮೇಹ ನೇರವಾಗಿ ರಕ್ತನಾಳಗಳ ಮೇಲೆ ಪರಿಣಾಮ ಬೀರುತ್ತದೆ. ಅದು ಕಿಡ್ನಿ ವೈಫಲ್ಯಕ್ಕೆ ದಾರಿಯಾಗುತ್ತದೆ. ಅದಕ್ಕೂ ಮುನ್ನ ಹೃದಯ ಮತ್ತು ಮೆದುಳಿಮವರೆಗೂ ಹಾದುಹೋಗುವ ರಕ್ತನಾಳಗಳಿಗೆ ಧಕ್ಕೆ ತರುತ್ತದೆ. ಹೀಗೆ ಒಂದಕ್ಕೊಂದು ಅನಪೇಕ್ಷೀಯ ಸಂಬಂಧ ಹೊಂದಿವೆ. ಅಂದರೆ ಕಿಡ್ನಿ ವೈಫಲ್ಯಕ್ಕೊಳಗಾದರೆ ಹೃದ್ರೋಗ ಗ್ಯಾರಂಟಿ ಅಥವಾ ಹೃದ್ರೋಗ ಬಂದರೆ ಕಿಡ್ನಿ ವೈಫಲ್ಯ ಉಚಿತ ಎನ್ನುವಂತಾಗಿದೆ.
ಇನ್ನೂ ಆತಂಕಕಾರಿ ಎಂದರೆ ಕಿಡ್ನಿ ವೈಫಲ್ಯಕ್ಕೀಡಾಗುತ್ತಿದ್ದಂತೆ ವಿಷಕಾರಿ ತ್ಯಾಜ್ಯಗಳು ಶೇಖರಣೆಯಾಗುತ್ತಾ ಸಾಗುತ್ತದೆ. ಕೊನೆಗೆ ಅದು ಹೃದಯದ ಕಾರ್ಯವೈಖರಿ ಮೇಲೆ ಅಡ್ಡಪರಿಣಾಮ ಬೀರುತ್ತದೆ. ಆದ್ದರಿಂದ ಹೃದ್ರೋಗ ಚಿಕಿತ್ಸೆ ಅಥವಾ ಕಿಡ್ನಿ ಚಿಕಿತ್ಸೆ ಎಂದು ಪ್ರತ್ಯೇಕಗೊಳಿಸದೆ ಎರಡರತ್ತಲೂ ಗಮನಹರಿಸುವುದು ಕ್ಷೇಮ. ಅದಕ್ಕೇ ಹೇಳಿದ್ದು ಕಿಡ್ನಿ ಸಮಸ್ಯೆ ಕಾಣಿಸಿಕೊಂಡರೆ ಒಮ್ಮೆ ನಿಮ್ಮ ಹೃದಯವನ್ನು ಮುಟ್ಟಿನೋಡಿಕೊಳ್ಳಿ.
ಪ್ರತಿ ವರ್ಷ ಮಾರ್ಚ್ 10ರಂದು ವಿಶ್ವ ಕಿಡ್ನಿ ದಿನ ಆಚರಿಸಲಾಗುತ್ತದೆ. ಕನಿಷ್ಠ ಈ ಸಂದರ್ಭದಲ್ಲಾದರೂ ಜನ ತಮ್ಮ ಕಿಡ್ನಿಗಳ ಕಡೆ ನೋಡಿಕೊಳ್ಳಲಿ ಎಂದು. ಜತೆಗೆ ಸಂಬಂಧಪಟ್ಟ ವೈದ್ಯರು ಇದರ ಬಗ್ಗೆ ಮತ್ತಷ್ಟು ಅಧ್ಯಯನ ನಡೆಸಿ, ರೋಗಿಗಳ ಪಾಳಿಗೆ ಸಂಜೀವಿನಾಯಗಲಿ ಎಂಬ ಒತ್ತಾಸೆ ಈ ಆಚರಣೆಯದ್ದಾಗಿದೆ.
ಕಿಡ್ನಿ ಕಾಯಿಲೆ ಆರಂಭದಲ್ಲಿಯೇ ಗಮನಕ್ಕೆ ಬಂದರೆ ಸೂಕ್ತ ಚಿಕಿತ್ಸೆಯಿಂದ ಅದನ್ನು ಕ್ರಾನಿಕ್ ಕಿಡ್ನಿ ಡಿಸೀಸ್ (ಸಿಕೆಡಿ) ಆಗಿ ಕಾಡದಂತೆ ತಡೆಗಟ್ಟಬಹುದು. ಅಷ್ಟಕ್ಕೂ ಕಿಡ್ನಿ ಸಮಸ್ಯೆ ಪತ್ತೆ ಹಚ್ಚುವುದು ಕಷ್ಟವೇನೂ ಅಲ್ಲ. ಕೆಲವೊಂದು ಸುಲಭೋಪಾಯಗಳು ಹೀಗಿವೆ:
1. ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಪರೀಕ್ಷಿಸುತ್ತಿರಿ. ಅದಕ್ಕೂ ಮುನ್ನ ನಿಯಮಿತವಾಗಿ ದೈನಂದಿನ ವ್ಯಾಯಾಮದಲ್ಲಿ ತೊಡಗಿ.
2. ರಕ್ತದಲ್ಲಿನ ಸಕ್ಕರೆಮಟ್ಟ ಪರೀಕ್ಷಿಸುತ್ತಿರಿ. ಆರೋಗ್ಯಕರ ಆಹಾರ ಸೇವಿಸಿ.
3. ರಕ್ತದೊತ್ತಡ 140/90ನ್ನು ದಾಟುತ್ತಿದ್ದಂತೆ ವೈದ್ಯರನ್ನು ಕಂಡು ಕಿಡ್ನಿ ಪರೀಕ್ಷೆಯನ್ನೂ ನಡೆಸಿ. ಮಧುಮೇಹ, ಅಧಿಕ ಕೊಲೆಸ್ಟ್ರಾಲ್, ಹೃದಯ ಸಂಬಂಧಿ ಕಾಯಿಲೆಗಳು ಜತೆಜತೆಯಲ್ಲೇ ಇದ್ದರೆ ವಿಳಂಬ ಮಾಡದೆ ವೈದ್ಯರ ಮೊರೆ ಹೋಗಿ.
4. ನಿಮ್ಮ ತೋಕ ಆಯ ತಪ್ಪದಿರಲಿ. ನಿಮ್ಮ ದೇಹವನ್ನು ಹೊತ್ತುಕೊಳ್ಳುವುದು ನಿಮಗೇ ದುಸ್ತರವಾಗಾದಾಗ ತೂಕ ನಿಯಂತ್ರಿಸಿ. ಜತೆಗೆ, ಉಪ್ಪ ತಿನ್ನುವುದನ್ನು ಕಡಿಮೆ ಮಾಡಿ. ಸಂಸ್ಕರಿತ, ದಿಢೀರ್, ಜಂಕ್ ಫುಡ್-ಗೆ ಗುಡ್ ಬೈ ಹೇಳಿ.
5. ಧೂಮಲೀಲೆ ಕಡಿಮೆಯಾಗಲಿ. ಧೂಮಪಾನ ಮಾಡುವುದರಿಂದ ಕಿಡ್ನಿಯತ್ತ ರಕ್ತದ ಹರಿವು ನಿಧಾನಗೊಳ್ಳುತ್ತದೆ. ಕಿಡ್ನಿಯಲ್ಲಿ ರಕ್ತ ಕಡಿಮೆಯಾಗುತ್ತಿದ್ದಂತೆ ಅದರ ಕಾರ್ಯಕ್ಷಮತೆ ತಂತಾನೇ ಕ್ಷೀಣಿಸುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications