Latest Updates
-
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ -
ಹಬ್ಬದ ಸೀಸನ್: ಕಲಬೆರಕೆ ಆಹಾರದಿಂದ ಎಚ್ಚರ! ಮಹಾರಾಷ್ಟ್ರ FDA ಕಠಿಣ ತಪಾಸಣೆ ಆರಂಭ -
ಶಿಕ್ಷಕರ ದಿನಾಚರಣೆ 2026: ನಿಮ್ಮ ಪೋಸ್ಟ್ ಟ್ರೆಂಡ್ ಆಗಲು ಬೆಸ್ಟ್ ಕ್ಯಾಪ್ಷನ್ಸ್ ಮತ್ತು ಗಿಫ್ಟ್ ಐಡಿಯಾಗಳು! -
ಮಳೆಗಾಲದ ಎಚ್ಚರಿಕೆ: ಹೊರಗೆ ವಾಕಿಂಗ್ ಹೋಗುವ ಮುನ್ನ ಈ ವಿಷಯ ಗಮನಿಸಿ, ಮನೆಯಲ್ಲೇ ಫಿಟ್ ಆಗಿರಿ -
ಗೃಹಹಿಂಸೆಯ ಸುಳಿಯಲ್ಲಿ ಸಿಲುಕಿದ್ದೀರಾ? ಸುರಕ್ಷಿತವಾಗಿ ಪಾರಾಗಲು ಈ ಮಾರ್ಗದರ್ಶಿ ಮತ್ತು ತುರ್ತು ಸಹಾಯವಾಣಿಗಳು ನಿಮಗೆ ನೆರವಾಗಲಿವೆ
ಹೊಟ್ಟೆ ನೋವು, ಅಜೀರ್ಣಕ್ಕೆ ಇಲ್ಲಿದೆ ಮನೆಮದ್ದು

* ಸೈಂಧವ ಲವಣ ಮಿಶ್ರಿತ ಬೆಳ್ಳುಳ್ಳಿ ರಸವನ್ನು ಸಿದ್ಧಪಡಿಸಿ, ಏಳೆಂಟು ಚಮಚ ಬಿಸಿ ನೀರಿಗೆ ಅರ್ಧ ಚಮಚದಷ್ಟು ಬೆಳ್ಳುಳ್ಳಿ ರಸ ಸೇರಿಸಿ. ಈ ಮಿಶ್ರಣವನ್ನು ದಿನಕ್ಕೆರಡು ಬಾರಿ ಸೇವಿಸಿ.
* ಒಂದು ದೊಡ್ಡ ಚಮಚದಷ್ಟು ಕೊತ್ತಂಬರಿ ಬೀಜ ಮತ್ತು ಅವರೆಕಾಳಿನಷ್ಟು ಗಾತ್ರದ ಒಣಶುಂಠಿ ಸ್ವಲ್ಪ ಜಜ್ಜಿ ಎರಡು ಬಟ್ಟಲು ನೀರಿಗೆ ಹಾಕಿ ಚೆನ್ನಾಗಿ ಕುದಿಸಿ, ಕಷಾಯ ಶೋಧಿಸಿ, ಜೇನುತುಪ್ಪ ಸೇರಿಸಿ ಸೇವಿಸಿ.
* ಮೇಲಿನ ಕಷಾಯಕ್ಕೆ ಜೇನುತುಪ್ಪ ಬದಲು ಕಲ್ಲು ಸಕ್ಕರೆ ಬಳಸಬಹುದು, ಸಕ್ಕರೆ ಬಳಕೆ ಬೇಡ. ಕೊತ್ತಂಬರಿ ಬೀಜ ಪುಡಿಮಾಡಿಟ್ಟುಕೊಂಡರೆ ತಕ್ಷಣಕ್ಕೆ ಕಷಾಯ ತಯಾರಿಸಲು ಅನುಕೂಲವಾಗುತ್ತದೆ.
* ತುಳಸಿ ರಸ, ಬೆಳ್ಳುಳ್ಳಿ ರಸ, ಜೇನುತುಪ್ಪ ಸಮಭಾಗ ತೆಗೆದುಕೊಂಡು ಮಿಶ್ರಣ ತಯಾರಿಸಿ. ಮೂರು ದಿನಗಳಿಗೊಮ್ಮೆ ಒಂದು ಟೀ ಚಮಚದಷ್ಟು ಸೇವಿಸುತ್ತಿದ್ದರೆ ಹೊಟ್ಟೆ ಉರಿ ಕಮ್ಮಿಯಾಗುತ್ತದೆ.
* ಪ್ರತಿದಿನವೂ ಒಂದು ಎಳನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳಿ. ಇತರೆ ತಂಪು ಪಾನೀಯಗಳನ್ನು ವರ್ಜಿಸಿ.
* ಅಡುಗೆ ಉಪ್ಪು, ಒಣಶುಂಠಿ ಚೂರ್ಣ, ಜೀರಿಗೆ ಮತ್ತು ಸಕ್ಕರೆ ಪ್ರತಿಯೊಂದನ್ನೂ ಒಂದು ಟೀ ಚಮಚದಷ್ಟು ತೆಗೆದುಕೊಂಡು ಒಂದು ಹೋಳು ನಿಂಬೆರಸದೊಂದಿಗೆ ಮಿಶ್ರಮಾಡಿ. ಈ ಮಿಶ್ರಣಕ್ಕೆ ಒಂದು ಬಟ್ಟಲು ಬಿಸಿ ನೀರು ಸೇರಿಸಿ, ಚೆನ್ನಾಗಿ ಕಲಕಿ ಕುಡಿಯಿರಿ.
* ಬಿಸಿ ನೀರಿಗೆ ಜೇನು ತುಪ್ಪ ಬೆರೆಸಿ ಮುಂಜಾನೆ ಬರೀ ಹೊಟ್ಟೆಯಲ್ಲಿ ಸೇವಿಸುವುದು ಉತ್ತಮ.
* ಒಂದು ಬಟ್ಟಲು ನೀರಿಗೆ ಒಂದು ನಿಂಬೆ ಹಣ್ಣಿನ ರಸ ಹಿಂಡಿ, ಅರ್ಧ ಟೀ ಚಮಚ ಅಡಿಗೆ ಸೋಡ ಸೇರಿಸಿ. ಈ ಷರಬತ್ತನ್ನು ಸೇವಿಸಿದಲ್ಲಿ ಅಜೀರ್ಣದ ಹೊಟ್ಟೆನೋವು ನಿವಾರಣೆಯಾಗುವುದು.
* ಅಗತ್ಯವಾದಷ್ಟು ಹುರುಳಿಯನ್ನು ನೀರಿನಲ್ಲಿ ಚೆನ್ನಾಗಿ ಬೇಯಿಸಿ, ಕಟ್ಟು ಬಸಿಯಿರಿ. ಒಂದು ಬಟ್ಟಲು ಬಿಸಿ ಕಟ್ಟಿಗೆ ಸ್ವಲ್ಪ ತುಪ್ಪ ಸೇರಿಸಿ, ಸೇವಿಸಿ. ದಿನದಲ್ಲಿ ಎರಡು ಬಾರಿ ಸೇವಿಸಿದರೆ ಹೊಟ್ಟೆ ನೋವು ಪರಿಹಾರವಾಗುವುದು.
* ನಡಿಗೆ, ಜಾಕಿಂಗ್ ಗೆ ಹೋಗುವ ಪದ್ಧತಿ ಇಟ್ಟುಕೊಳ್ಳಿ. ಆದರೆ, ಹೊಟ್ಟೆ ನೋವಿದ್ದಾಗ ಕಷ್ಟಕರ ದೈಹಿಕ ಕಸರತ್ತು ಮಾಡಲು ಯತ್ನಿಸಬೇಡಿ.
* ಹೊಟ್ಟೆಗೆ ಆಗಾಗ ಏನಾದರೂ ಪೋಷಣೆ ಮಾಡುತ್ತಿರಿ. ಖಾಲಿ ಇದ್ದಷ್ಟೂ ಹೆಚ್ಚು ಶಬ್ದ ಮಾಡುತ್ತದೆ.
* ಸೇಬು, ಕ್ಯಾರೆಟ್, ಬೀಟ್ ರೂಟ್ ಜ್ಯೂಸ್, ಹುರುಳಿಕಾಯಿ, ನಾರು ಬೇರಿನ ತರಕಾರಿ ಉತ್ತಮ
* ದೇಹಕ್ಕೆ ಅಗತ್ಯಕ್ಕಿಂತ ಹೆಚ್ಚು ಎಚ್ ಸಿಎಲ್ ಒದಗಿಸುವ ಮಸಾಲೆ ಪದಾರ್ಥಗಳನ್ನು ಸೇವಿಸಬೇಡಿ.
* ಹೊಟ್ಟೆ ನೋವು, ಉರಿ ಇದ್ದಾಗ ಕಾಫಿ, ಟೀ, ಆಲ್ಕೋಹಾಲ್, ಕೋಕ್, ಧೂಮಪಾನ ಬಿಟ್ಟು ಬಿಡಿ.
* ಕೊಬ್ಬಿನ ಪದಾರ್ಥಗಳು ಕೆನೆ ಮೊಸರು, ಪೇಡಾ, ಮಾಂಸ ಕೂಡಾ ಸೇವನೆಗೆ ಯೋಗ್ಯವಲ್ಲ.
* ಹೆಚ್ಚು ಬಿಗಿ ಉಡುಪುಗಳನ್ನು ಧರಿಸಬೇಡಿ. ರಾತ್ರಿ ಮಲಗುವುದಕ್ಕೂ ಎರಡು ಮೂರು ಗಂಟೆಗಳಿಗೆ ಮುನ್ನ ಆಹಾರ ಸೇವಿಸಿ. ರಾತ್ರಿ ಹೊತ್ತು ಕಾಫಿ, ಚಹಾ ಬೇಡ.
* ಎದೆ ಉರಿ ಇದ್ದಾಗ ಮಲಗುವುದಕ್ಕಿಂತ ಎದ್ದು ಓಡಾಡಿದರೆ ಉತ್ತಮ. ಹೊಚ್ಚು ಹೊತ್ತಿನಿಂದ ತೊಂದರೆ ಅನುಭವಿಸುತ್ತಿದ್ದರೆ ವೈದ್ಯರನ್ನು ಅವಶ್ಯವಾಗಿ ಕಾಣಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications