Latest Updates
-
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ!
ಹೊಟ್ಟೆ ನೋವು, ಅಜೀರ್ಣಕ್ಕೆ ಇಲ್ಲಿದೆ ಮನೆಮದ್ದು

* ಸೈಂಧವ ಲವಣ ಮಿಶ್ರಿತ ಬೆಳ್ಳುಳ್ಳಿ ರಸವನ್ನು ಸಿದ್ಧಪಡಿಸಿ, ಏಳೆಂಟು ಚಮಚ ಬಿಸಿ ನೀರಿಗೆ ಅರ್ಧ ಚಮಚದಷ್ಟು ಬೆಳ್ಳುಳ್ಳಿ ರಸ ಸೇರಿಸಿ. ಈ ಮಿಶ್ರಣವನ್ನು ದಿನಕ್ಕೆರಡು ಬಾರಿ ಸೇವಿಸಿ.
* ಒಂದು ದೊಡ್ಡ ಚಮಚದಷ್ಟು ಕೊತ್ತಂಬರಿ ಬೀಜ ಮತ್ತು ಅವರೆಕಾಳಿನಷ್ಟು ಗಾತ್ರದ ಒಣಶುಂಠಿ ಸ್ವಲ್ಪ ಜಜ್ಜಿ ಎರಡು ಬಟ್ಟಲು ನೀರಿಗೆ ಹಾಕಿ ಚೆನ್ನಾಗಿ ಕುದಿಸಿ, ಕಷಾಯ ಶೋಧಿಸಿ, ಜೇನುತುಪ್ಪ ಸೇರಿಸಿ ಸೇವಿಸಿ.
* ಮೇಲಿನ ಕಷಾಯಕ್ಕೆ ಜೇನುತುಪ್ಪ ಬದಲು ಕಲ್ಲು ಸಕ್ಕರೆ ಬಳಸಬಹುದು, ಸಕ್ಕರೆ ಬಳಕೆ ಬೇಡ. ಕೊತ್ತಂಬರಿ ಬೀಜ ಪುಡಿಮಾಡಿಟ್ಟುಕೊಂಡರೆ ತಕ್ಷಣಕ್ಕೆ ಕಷಾಯ ತಯಾರಿಸಲು ಅನುಕೂಲವಾಗುತ್ತದೆ.
* ತುಳಸಿ ರಸ, ಬೆಳ್ಳುಳ್ಳಿ ರಸ, ಜೇನುತುಪ್ಪ ಸಮಭಾಗ ತೆಗೆದುಕೊಂಡು ಮಿಶ್ರಣ ತಯಾರಿಸಿ. ಮೂರು ದಿನಗಳಿಗೊಮ್ಮೆ ಒಂದು ಟೀ ಚಮಚದಷ್ಟು ಸೇವಿಸುತ್ತಿದ್ದರೆ ಹೊಟ್ಟೆ ಉರಿ ಕಮ್ಮಿಯಾಗುತ್ತದೆ.
* ಪ್ರತಿದಿನವೂ ಒಂದು ಎಳನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳಿ. ಇತರೆ ತಂಪು ಪಾನೀಯಗಳನ್ನು ವರ್ಜಿಸಿ.
* ಅಡುಗೆ ಉಪ್ಪು, ಒಣಶುಂಠಿ ಚೂರ್ಣ, ಜೀರಿಗೆ ಮತ್ತು ಸಕ್ಕರೆ ಪ್ರತಿಯೊಂದನ್ನೂ ಒಂದು ಟೀ ಚಮಚದಷ್ಟು ತೆಗೆದುಕೊಂಡು ಒಂದು ಹೋಳು ನಿಂಬೆರಸದೊಂದಿಗೆ ಮಿಶ್ರಮಾಡಿ. ಈ ಮಿಶ್ರಣಕ್ಕೆ ಒಂದು ಬಟ್ಟಲು ಬಿಸಿ ನೀರು ಸೇರಿಸಿ, ಚೆನ್ನಾಗಿ ಕಲಕಿ ಕುಡಿಯಿರಿ.
* ಬಿಸಿ ನೀರಿಗೆ ಜೇನು ತುಪ್ಪ ಬೆರೆಸಿ ಮುಂಜಾನೆ ಬರೀ ಹೊಟ್ಟೆಯಲ್ಲಿ ಸೇವಿಸುವುದು ಉತ್ತಮ.
* ಒಂದು ಬಟ್ಟಲು ನೀರಿಗೆ ಒಂದು ನಿಂಬೆ ಹಣ್ಣಿನ ರಸ ಹಿಂಡಿ, ಅರ್ಧ ಟೀ ಚಮಚ ಅಡಿಗೆ ಸೋಡ ಸೇರಿಸಿ. ಈ ಷರಬತ್ತನ್ನು ಸೇವಿಸಿದಲ್ಲಿ ಅಜೀರ್ಣದ ಹೊಟ್ಟೆನೋವು ನಿವಾರಣೆಯಾಗುವುದು.
* ಅಗತ್ಯವಾದಷ್ಟು ಹುರುಳಿಯನ್ನು ನೀರಿನಲ್ಲಿ ಚೆನ್ನಾಗಿ ಬೇಯಿಸಿ, ಕಟ್ಟು ಬಸಿಯಿರಿ. ಒಂದು ಬಟ್ಟಲು ಬಿಸಿ ಕಟ್ಟಿಗೆ ಸ್ವಲ್ಪ ತುಪ್ಪ ಸೇರಿಸಿ, ಸೇವಿಸಿ. ದಿನದಲ್ಲಿ ಎರಡು ಬಾರಿ ಸೇವಿಸಿದರೆ ಹೊಟ್ಟೆ ನೋವು ಪರಿಹಾರವಾಗುವುದು.
* ನಡಿಗೆ, ಜಾಕಿಂಗ್ ಗೆ ಹೋಗುವ ಪದ್ಧತಿ ಇಟ್ಟುಕೊಳ್ಳಿ. ಆದರೆ, ಹೊಟ್ಟೆ ನೋವಿದ್ದಾಗ ಕಷ್ಟಕರ ದೈಹಿಕ ಕಸರತ್ತು ಮಾಡಲು ಯತ್ನಿಸಬೇಡಿ.
* ಹೊಟ್ಟೆಗೆ ಆಗಾಗ ಏನಾದರೂ ಪೋಷಣೆ ಮಾಡುತ್ತಿರಿ. ಖಾಲಿ ಇದ್ದಷ್ಟೂ ಹೆಚ್ಚು ಶಬ್ದ ಮಾಡುತ್ತದೆ.
* ಸೇಬು, ಕ್ಯಾರೆಟ್, ಬೀಟ್ ರೂಟ್ ಜ್ಯೂಸ್, ಹುರುಳಿಕಾಯಿ, ನಾರು ಬೇರಿನ ತರಕಾರಿ ಉತ್ತಮ
* ದೇಹಕ್ಕೆ ಅಗತ್ಯಕ್ಕಿಂತ ಹೆಚ್ಚು ಎಚ್ ಸಿಎಲ್ ಒದಗಿಸುವ ಮಸಾಲೆ ಪದಾರ್ಥಗಳನ್ನು ಸೇವಿಸಬೇಡಿ.
* ಹೊಟ್ಟೆ ನೋವು, ಉರಿ ಇದ್ದಾಗ ಕಾಫಿ, ಟೀ, ಆಲ್ಕೋಹಾಲ್, ಕೋಕ್, ಧೂಮಪಾನ ಬಿಟ್ಟು ಬಿಡಿ.
* ಕೊಬ್ಬಿನ ಪದಾರ್ಥಗಳು ಕೆನೆ ಮೊಸರು, ಪೇಡಾ, ಮಾಂಸ ಕೂಡಾ ಸೇವನೆಗೆ ಯೋಗ್ಯವಲ್ಲ.
* ಹೆಚ್ಚು ಬಿಗಿ ಉಡುಪುಗಳನ್ನು ಧರಿಸಬೇಡಿ. ರಾತ್ರಿ ಮಲಗುವುದಕ್ಕೂ ಎರಡು ಮೂರು ಗಂಟೆಗಳಿಗೆ ಮುನ್ನ ಆಹಾರ ಸೇವಿಸಿ. ರಾತ್ರಿ ಹೊತ್ತು ಕಾಫಿ, ಚಹಾ ಬೇಡ.
* ಎದೆ ಉರಿ ಇದ್ದಾಗ ಮಲಗುವುದಕ್ಕಿಂತ ಎದ್ದು ಓಡಾಡಿದರೆ ಉತ್ತಮ. ಹೊಚ್ಚು ಹೊತ್ತಿನಿಂದ ತೊಂದರೆ ಅನುಭವಿಸುತ್ತಿದ್ದರೆ ವೈದ್ಯರನ್ನು ಅವಶ್ಯವಾಗಿ ಕಾಣಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications