Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಹೊಟ್ಟೆ ನೋವು, ಅಜೀರ್ಣಕ್ಕೆ ಇಲ್ಲಿದೆ ಮನೆಮದ್ದು

* ಸೈಂಧವ ಲವಣ ಮಿಶ್ರಿತ ಬೆಳ್ಳುಳ್ಳಿ ರಸವನ್ನು ಸಿದ್ಧಪಡಿಸಿ, ಏಳೆಂಟು ಚಮಚ ಬಿಸಿ ನೀರಿಗೆ ಅರ್ಧ ಚಮಚದಷ್ಟು ಬೆಳ್ಳುಳ್ಳಿ ರಸ ಸೇರಿಸಿ. ಈ ಮಿಶ್ರಣವನ್ನು ದಿನಕ್ಕೆರಡು ಬಾರಿ ಸೇವಿಸಿ.
* ಒಂದು ದೊಡ್ಡ ಚಮಚದಷ್ಟು ಕೊತ್ತಂಬರಿ ಬೀಜ ಮತ್ತು ಅವರೆಕಾಳಿನಷ್ಟು ಗಾತ್ರದ ಒಣಶುಂಠಿ ಸ್ವಲ್ಪ ಜಜ್ಜಿ ಎರಡು ಬಟ್ಟಲು ನೀರಿಗೆ ಹಾಕಿ ಚೆನ್ನಾಗಿ ಕುದಿಸಿ, ಕಷಾಯ ಶೋಧಿಸಿ, ಜೇನುತುಪ್ಪ ಸೇರಿಸಿ ಸೇವಿಸಿ.
* ಮೇಲಿನ ಕಷಾಯಕ್ಕೆ ಜೇನುತುಪ್ಪ ಬದಲು ಕಲ್ಲು ಸಕ್ಕರೆ ಬಳಸಬಹುದು, ಸಕ್ಕರೆ ಬಳಕೆ ಬೇಡ. ಕೊತ್ತಂಬರಿ ಬೀಜ ಪುಡಿಮಾಡಿಟ್ಟುಕೊಂಡರೆ ತಕ್ಷಣಕ್ಕೆ ಕಷಾಯ ತಯಾರಿಸಲು ಅನುಕೂಲವಾಗುತ್ತದೆ.
* ತುಳಸಿ ರಸ, ಬೆಳ್ಳುಳ್ಳಿ ರಸ, ಜೇನುತುಪ್ಪ ಸಮಭಾಗ ತೆಗೆದುಕೊಂಡು ಮಿಶ್ರಣ ತಯಾರಿಸಿ. ಮೂರು ದಿನಗಳಿಗೊಮ್ಮೆ ಒಂದು ಟೀ ಚಮಚದಷ್ಟು ಸೇವಿಸುತ್ತಿದ್ದರೆ ಹೊಟ್ಟೆ ಉರಿ ಕಮ್ಮಿಯಾಗುತ್ತದೆ.
* ಪ್ರತಿದಿನವೂ ಒಂದು ಎಳನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳಿ. ಇತರೆ ತಂಪು ಪಾನೀಯಗಳನ್ನು ವರ್ಜಿಸಿ.
* ಅಡುಗೆ ಉಪ್ಪು, ಒಣಶುಂಠಿ ಚೂರ್ಣ, ಜೀರಿಗೆ ಮತ್ತು ಸಕ್ಕರೆ ಪ್ರತಿಯೊಂದನ್ನೂ ಒಂದು ಟೀ ಚಮಚದಷ್ಟು ತೆಗೆದುಕೊಂಡು ಒಂದು ಹೋಳು ನಿಂಬೆರಸದೊಂದಿಗೆ ಮಿಶ್ರಮಾಡಿ. ಈ ಮಿಶ್ರಣಕ್ಕೆ ಒಂದು ಬಟ್ಟಲು ಬಿಸಿ ನೀರು ಸೇರಿಸಿ, ಚೆನ್ನಾಗಿ ಕಲಕಿ ಕುಡಿಯಿರಿ.
* ಬಿಸಿ ನೀರಿಗೆ ಜೇನು ತುಪ್ಪ ಬೆರೆಸಿ ಮುಂಜಾನೆ ಬರೀ ಹೊಟ್ಟೆಯಲ್ಲಿ ಸೇವಿಸುವುದು ಉತ್ತಮ.
* ಒಂದು ಬಟ್ಟಲು ನೀರಿಗೆ ಒಂದು ನಿಂಬೆ ಹಣ್ಣಿನ ರಸ ಹಿಂಡಿ, ಅರ್ಧ ಟೀ ಚಮಚ ಅಡಿಗೆ ಸೋಡ ಸೇರಿಸಿ. ಈ ಷರಬತ್ತನ್ನು ಸೇವಿಸಿದಲ್ಲಿ ಅಜೀರ್ಣದ ಹೊಟ್ಟೆನೋವು ನಿವಾರಣೆಯಾಗುವುದು.
* ಅಗತ್ಯವಾದಷ್ಟು ಹುರುಳಿಯನ್ನು ನೀರಿನಲ್ಲಿ ಚೆನ್ನಾಗಿ ಬೇಯಿಸಿ, ಕಟ್ಟು ಬಸಿಯಿರಿ. ಒಂದು ಬಟ್ಟಲು ಬಿಸಿ ಕಟ್ಟಿಗೆ ಸ್ವಲ್ಪ ತುಪ್ಪ ಸೇರಿಸಿ, ಸೇವಿಸಿ. ದಿನದಲ್ಲಿ ಎರಡು ಬಾರಿ ಸೇವಿಸಿದರೆ ಹೊಟ್ಟೆ ನೋವು ಪರಿಹಾರವಾಗುವುದು.
* ನಡಿಗೆ, ಜಾಕಿಂಗ್ ಗೆ ಹೋಗುವ ಪದ್ಧತಿ ಇಟ್ಟುಕೊಳ್ಳಿ. ಆದರೆ, ಹೊಟ್ಟೆ ನೋವಿದ್ದಾಗ ಕಷ್ಟಕರ ದೈಹಿಕ ಕಸರತ್ತು ಮಾಡಲು ಯತ್ನಿಸಬೇಡಿ.
* ಹೊಟ್ಟೆಗೆ ಆಗಾಗ ಏನಾದರೂ ಪೋಷಣೆ ಮಾಡುತ್ತಿರಿ. ಖಾಲಿ ಇದ್ದಷ್ಟೂ ಹೆಚ್ಚು ಶಬ್ದ ಮಾಡುತ್ತದೆ.
* ಸೇಬು, ಕ್ಯಾರೆಟ್, ಬೀಟ್ ರೂಟ್ ಜ್ಯೂಸ್, ಹುರುಳಿಕಾಯಿ, ನಾರು ಬೇರಿನ ತರಕಾರಿ ಉತ್ತಮ
* ದೇಹಕ್ಕೆ ಅಗತ್ಯಕ್ಕಿಂತ ಹೆಚ್ಚು ಎಚ್ ಸಿಎಲ್ ಒದಗಿಸುವ ಮಸಾಲೆ ಪದಾರ್ಥಗಳನ್ನು ಸೇವಿಸಬೇಡಿ.
* ಹೊಟ್ಟೆ ನೋವು, ಉರಿ ಇದ್ದಾಗ ಕಾಫಿ, ಟೀ, ಆಲ್ಕೋಹಾಲ್, ಕೋಕ್, ಧೂಮಪಾನ ಬಿಟ್ಟು ಬಿಡಿ.
* ಕೊಬ್ಬಿನ ಪದಾರ್ಥಗಳು ಕೆನೆ ಮೊಸರು, ಪೇಡಾ, ಮಾಂಸ ಕೂಡಾ ಸೇವನೆಗೆ ಯೋಗ್ಯವಲ್ಲ.
* ಹೆಚ್ಚು ಬಿಗಿ ಉಡುಪುಗಳನ್ನು ಧರಿಸಬೇಡಿ. ರಾತ್ರಿ ಮಲಗುವುದಕ್ಕೂ ಎರಡು ಮೂರು ಗಂಟೆಗಳಿಗೆ ಮುನ್ನ ಆಹಾರ ಸೇವಿಸಿ. ರಾತ್ರಿ ಹೊತ್ತು ಕಾಫಿ, ಚಹಾ ಬೇಡ.
* ಎದೆ ಉರಿ ಇದ್ದಾಗ ಮಲಗುವುದಕ್ಕಿಂತ ಎದ್ದು ಓಡಾಡಿದರೆ ಉತ್ತಮ. ಹೊಚ್ಚು ಹೊತ್ತಿನಿಂದ ತೊಂದರೆ ಅನುಭವಿಸುತ್ತಿದ್ದರೆ ವೈದ್ಯರನ್ನು ಅವಶ್ಯವಾಗಿ ಕಾಣಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications