Latest Updates
-
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು!
ಮನೆಮದ್ದು ಮೆಂತ್ಯೆ ಬಗ್ಗೆ ನಿಮಗೆಷ್ಟು ಗೊತ್ತು?

ಇದರ ಇನ್ನಷ್ಟು ಉಪಯೋಗಗಳನ್ನು ತಿಳಿದುಕೊಳ್ಳೋಣ
1. ಬೊಜ್ಜಿನ ಸಮತೋಲನ: ಮೆಂತ್ಯೆಯನ್ನು ಯಾವುದಾದರೂ ರೂಪದಲ್ಲಿ ನಿತ್ಯ ಸೇವಿಸುತ್ತ ಬಂದರೆ ಅದು ದೇಹದ ಕೊಲೆಸ್ಟ್ರಾಲನ್ನು ನಿಯಂತ್ರಿಸುತ್ತದೆ ಅಷ್ಟೇ ಅಲ್ಲ, ಇದರಿಂದ ಹೃದಯ ಸ್ಥಂಭನವಾಗುವ ಅವಕಾಶಗಳನ್ನು ಕಡಿಮೆ ಗೊಳಿಸುತ್ತದೆ. ಇದೀಗ ಮಾತ್ರೆ ರೂಪದಲ್ಲಿ ಕೂಡ ಮೆಂತ್ಯೆ ಲಭ್ಯವಿದೆ.
2. ಸಕ್ಕರೆ ಅಂಶದ ನಿಯಂತ್ರಣ: ಮೆಂತ್ಯೆ ಕಾಳನ್ನು ಮಧುಮೇಹಿಗಳಿಗೆ ಸೇವಿಸಲು ಸಲಹೆ ನೀಡುವುದನ್ನು ಕೇಳಿದ್ದೇವೆ. ಏಕೆಂದರೆ ಮೆಂತ್ಯೆ ರಕ್ತದಲ್ಲಿನ ಸಕ್ಕರೆ ಅಂಶವನ್ನು ಕಡಿಮೆ ಗೊಳಿಸಲು ಹೆಚ್ಚು ಸಹಾಯ ಮಾಡುತ್ತದೆ. ದಿನವೂ 6- 7 ಮೆಂತ್ಯೆ ಕಾಳನ್ನು ಅಥವಾ ಮೆಂತ್ಯೆ ಸೊಪ್ಪನ್ನು ಸೇವಿಸುವುದು ಉತ್ತಮ.
3.ಚರ್ಮ ರೋಗ ನಿಗ್ರಹ: ಮೆಂತ್ಯೆ ಕಾಳನ್ನು ಸೇವಿಸುವುದರಿಂದ ತ್ವಚೆ ಆರೋಗ್ಯವಾಗಿರುವುದಲ್ಲದೆ, ಗುಳ್ಳೆ, ತುರಿಕೆ, ಮೊಡವೆ ಇಂತಹ ಅನೇಕ ಚರ್ಮ ಸಂಬಂಧಿ ರೋಗಗಳಿಗೆ ಮನೆ ಮದ್ದಾಗಿದೆ. ಅದು ಕೂದಲಿನ ಸತ್ವ ಕಾಪಾಡಿಕೊಳ್ಳಲೂ ಉಪಯೋಗಿಸಲಾಗುತ್ತದೆ.
4.ಜೀರ್ಣಕ್ರಿಯೆಗೆ ಹೆಚ್ಚು ಸಹಕಾರಿ: ಜೀರ್ಣಕ್ರಿಯೆಯನ್ನು ಸಮತೋಲನವಾಗಿ ನಡೆಸಿಕೊಂಡು ಹೋಗುವಲ್ಲಿ ಮೆಂತ್ಯೆಯದು ಬಹು ಮುಖ್ಯ ಪಾತ್ರ. ಇದು ಪಚನ ಕ್ರಿಯೆಯನ್ನು ಸರಿದೂಗಿಸಿಕೊಂಡು ಹೋಗುತ್ತದೆ. ಅಲ್ಸರ್ ಮತ್ತು ಆಸಡಿಟಿ ಯಾಗಿದ್ದರೆ ಮೆಂತ್ಯೆಯನ್ನು ಮಜ್ಜಿಗೆಗೆ ಬೆರೆಸಿ ಕುಡಿದರೆ ಅದು ನಿಯಂತ್ರಣಕ್ಕೆ ಬರುತ್ತದೆ. ಬೆಳಗಿನ ಜಾವ ಖಾಲಿ ಹೊಟ್ಟೆಯಲ್ಲಿ ಮೆಂತ್ಯೆ ಕಾಳನ್ನು ಸೇವಿಸಿದರೆ ಹೊಟ್ಟೆಯಲ್ಲಿನ ಕೀಟಾಣುಗಳನ್ನು ಮೆಂತ್ಯೆ ಕೊಂದು ಹಾಕುತ್ತದೆ.
5. ಜ್ವರಕ್ಕೆ ಮೆಂತ್ಯೆ ಮದ್ದು: ಜ್ವರವಿದ್ದರೆ ಮತ್ತು ಸುಸ್ತಿನಿಂದ ಬಳಲುತ್ತಿದ್ದಾಗ ಮೆಂತ್ಯೆ ರಸವನ್ನು ಸೇವನೆ ಮಾಡಿದರೆ ಕಡಿಮೆಯಾಗುತ್ತದೆ.
6. ಮೆದುಳನ್ನು ಚುರುಕುಗೊಳಿಸುತ್ತದೆ: ಮೆಂತ್ಯೆ ಸೊಪ್ಪಿನಿಂದ ಟೀ ಮಾಡಿ ಕುಡಿದರೆ ಮೆದುಳನ್ನು ಚುರುಕುಗೊಳಿಸಿ ಚೈತನ್ಯ ತುಂಬುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications