Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
ಮನೆಮದ್ದು ಮೆಂತ್ಯೆ ಬಗ್ಗೆ ನಿಮಗೆಷ್ಟು ಗೊತ್ತು?

ಇದರ ಇನ್ನಷ್ಟು ಉಪಯೋಗಗಳನ್ನು ತಿಳಿದುಕೊಳ್ಳೋಣ
1. ಬೊಜ್ಜಿನ ಸಮತೋಲನ: ಮೆಂತ್ಯೆಯನ್ನು ಯಾವುದಾದರೂ ರೂಪದಲ್ಲಿ ನಿತ್ಯ ಸೇವಿಸುತ್ತ ಬಂದರೆ ಅದು ದೇಹದ ಕೊಲೆಸ್ಟ್ರಾಲನ್ನು ನಿಯಂತ್ರಿಸುತ್ತದೆ ಅಷ್ಟೇ ಅಲ್ಲ, ಇದರಿಂದ ಹೃದಯ ಸ್ಥಂಭನವಾಗುವ ಅವಕಾಶಗಳನ್ನು ಕಡಿಮೆ ಗೊಳಿಸುತ್ತದೆ. ಇದೀಗ ಮಾತ್ರೆ ರೂಪದಲ್ಲಿ ಕೂಡ ಮೆಂತ್ಯೆ ಲಭ್ಯವಿದೆ.
2. ಸಕ್ಕರೆ ಅಂಶದ ನಿಯಂತ್ರಣ: ಮೆಂತ್ಯೆ ಕಾಳನ್ನು ಮಧುಮೇಹಿಗಳಿಗೆ ಸೇವಿಸಲು ಸಲಹೆ ನೀಡುವುದನ್ನು ಕೇಳಿದ್ದೇವೆ. ಏಕೆಂದರೆ ಮೆಂತ್ಯೆ ರಕ್ತದಲ್ಲಿನ ಸಕ್ಕರೆ ಅಂಶವನ್ನು ಕಡಿಮೆ ಗೊಳಿಸಲು ಹೆಚ್ಚು ಸಹಾಯ ಮಾಡುತ್ತದೆ. ದಿನವೂ 6- 7 ಮೆಂತ್ಯೆ ಕಾಳನ್ನು ಅಥವಾ ಮೆಂತ್ಯೆ ಸೊಪ್ಪನ್ನು ಸೇವಿಸುವುದು ಉತ್ತಮ.
3.ಚರ್ಮ ರೋಗ ನಿಗ್ರಹ: ಮೆಂತ್ಯೆ ಕಾಳನ್ನು ಸೇವಿಸುವುದರಿಂದ ತ್ವಚೆ ಆರೋಗ್ಯವಾಗಿರುವುದಲ್ಲದೆ, ಗುಳ್ಳೆ, ತುರಿಕೆ, ಮೊಡವೆ ಇಂತಹ ಅನೇಕ ಚರ್ಮ ಸಂಬಂಧಿ ರೋಗಗಳಿಗೆ ಮನೆ ಮದ್ದಾಗಿದೆ. ಅದು ಕೂದಲಿನ ಸತ್ವ ಕಾಪಾಡಿಕೊಳ್ಳಲೂ ಉಪಯೋಗಿಸಲಾಗುತ್ತದೆ.
4.ಜೀರ್ಣಕ್ರಿಯೆಗೆ ಹೆಚ್ಚು ಸಹಕಾರಿ: ಜೀರ್ಣಕ್ರಿಯೆಯನ್ನು ಸಮತೋಲನವಾಗಿ ನಡೆಸಿಕೊಂಡು ಹೋಗುವಲ್ಲಿ ಮೆಂತ್ಯೆಯದು ಬಹು ಮುಖ್ಯ ಪಾತ್ರ. ಇದು ಪಚನ ಕ್ರಿಯೆಯನ್ನು ಸರಿದೂಗಿಸಿಕೊಂಡು ಹೋಗುತ್ತದೆ. ಅಲ್ಸರ್ ಮತ್ತು ಆಸಡಿಟಿ ಯಾಗಿದ್ದರೆ ಮೆಂತ್ಯೆಯನ್ನು ಮಜ್ಜಿಗೆಗೆ ಬೆರೆಸಿ ಕುಡಿದರೆ ಅದು ನಿಯಂತ್ರಣಕ್ಕೆ ಬರುತ್ತದೆ. ಬೆಳಗಿನ ಜಾವ ಖಾಲಿ ಹೊಟ್ಟೆಯಲ್ಲಿ ಮೆಂತ್ಯೆ ಕಾಳನ್ನು ಸೇವಿಸಿದರೆ ಹೊಟ್ಟೆಯಲ್ಲಿನ ಕೀಟಾಣುಗಳನ್ನು ಮೆಂತ್ಯೆ ಕೊಂದು ಹಾಕುತ್ತದೆ.
5. ಜ್ವರಕ್ಕೆ ಮೆಂತ್ಯೆ ಮದ್ದು: ಜ್ವರವಿದ್ದರೆ ಮತ್ತು ಸುಸ್ತಿನಿಂದ ಬಳಲುತ್ತಿದ್ದಾಗ ಮೆಂತ್ಯೆ ರಸವನ್ನು ಸೇವನೆ ಮಾಡಿದರೆ ಕಡಿಮೆಯಾಗುತ್ತದೆ.
6. ಮೆದುಳನ್ನು ಚುರುಕುಗೊಳಿಸುತ್ತದೆ: ಮೆಂತ್ಯೆ ಸೊಪ್ಪಿನಿಂದ ಟೀ ಮಾಡಿ ಕುಡಿದರೆ ಮೆದುಳನ್ನು ಚುರುಕುಗೊಳಿಸಿ ಚೈತನ್ಯ ತುಂಬುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications