Latest Updates
-
ತೀವ್ರ ಶಾಖದ ಅಲೆ: ಬಿಸಿಲಿನಲ್ಲಿ ವ್ಯಾಯಾಮ ಮಾಡುವ ಮುನ್ನ ಎಚ್ಚರ! -
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ
ಮಳೆಗಾಲದಲ್ಲಿ ಜೀರ್ಣಕ್ರಿಯೆ ಸಮಸ್ಯೆಗೆ ಪರಿಹಾರ ಏನು?

ಮಳೆಗಾಲದಲ್ಲಿ ಜೀರ್ಣಕ್ರಿಯೆ ತೊಂದರೆ ನಿವಾರಿಸುವುದು ಹೇಗೆ?
1. ಒಂದು ಲೋಟ ಬಿಸಿ ನೀರಿಗೆ ಒಂದು ಚಮಚ ಜೇನನ್ನು ಬೆರೆಸಿ ಪ್ರತಿ ದಿನ ಬೆಳಗ್ಗಿನ ಜಾವ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಇದು ದೇಹದಲ್ಲಿನ ಅನಗತ್ಯ ಅಂಶಗಳನ್ನು ಹೊರಗೆ ಹಾಕಿ ದೈಹಿಕ ಕ್ರಿಯೆ ಸರಾಗವಾಗುವಂತೆ ಮಾಡುತ್ತದೆ.
2. ಈ ವಾತಾವರಣದಲ್ಲಿ ಅನ್ನ, ಗೋಧಿಯಿಂದ ತಯಾರಾದ ಆಹಾರ ಮತ್ತು ಹಸಿರು ತರಕಾರಿಗಳಂತಹ ಲಘು ಆಹಾರವಿರಲಿ. ಇದು ಜೀರ್ಣಕ್ರಿಯೆಗೆ ಸಹಾಯಕ.
3. ಶುಂಠಿ ಅನ್ನ ತಿನ್ನುವುದು ಈ ಸಮಸ್ಯೆಗೆ ಸೂಕ್ತ ಪರಿಹಾರ. ಅನ್ನವನ್ನು ಬೇಯಿಸುವಾಗ ಅದರಲ್ಲಿ ಜಜ್ಜಿದ ಶುಂಠಿಯೊಂದಿಗೆ ಉಪ್ಪನ್ನು ಬೆರೆಸಬೇಕು. ನಂತರ ಪ್ರತ್ಯೇಕ ಬಾಣಲೆಯಲ್ಲಿ ತುಪ್ಪ ಹಾಕಿ ಕಾಯಿಸಿ ಬೇಯಿಸಿದ ಅನ್ನದೊಂದಿಗೆ ಮೆಣಸಿನ ಪುಡಿಯನ್ನು ಮೇಲೆ ಉದುರಿಸಬೇಕು. ಬಿಸಿ ಬಿಸಿಯಾಗಿ ಇದನ್ನು ತಿಂದರೆ ಆರೋಗ್ಯಕ್ಕೂ ಒಳ್ಳೆಯದು, ಥಂಡಿಯಿಂದ ದೇಹದಲ್ಲಿ ಉಂಟಾದ ನೋವನ್ನೂ ಕಡಿಮೆಮಾಡುತ್ತದೆ.
4. ಸ್ವಲ್ಪ ಮೆಣಸಿನ ಪುಡಿಯೊಂದಿಗೆ ಕಲ್ಲುಪ್ಪನ್ನು ಬೆರೆಸಿ ಅದನ್ನು ಬಿಸಿ ನೀರಿನೊಂದಿಗೆ ಕುಡಿದರೆ ಶೀತ, ನೆಗಡಿ, ಕೆಮ್ಮು ದೂರಗೊಳಿಸಿ ಜೀರ್ಣಕ್ರಿಯೆಗೆ ಬೆಂಬಲ ನೀಡುತ್ತದೆ.
5. ಮೂಲಂಗಿಯ ರಸವನ್ನು ಕುಡಿದರೆ ಜೀರ್ಣಕ್ರಿಯೆ ಉತ್ತಮಗೊಳ್ಳುವುದರೊಂದಿಗೆ ದೇಹವನ್ನೂ ಸದೃಢಗೊಳಿಸಿ ರೋಗನಿರೋಧಕ ಶಕ್ತಿಯನ್ನು ಹಿಗ್ಗಿಸುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications










