Latest Updates
-
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ?
ಮಳೆಗಾಲದಲ್ಲಿ ಮೈ ಮನ ಮರುಗದಿರಲಿ

ಮಳೆಗಾಲದಲ್ಲಿ ಅನುಸರಿಸಬೇಕಾದ ಆಹಾರ ನಿಯಮಗಳು:
1. ತಾಜಾ ಆಹಾರವನ್ನೇ ಸೇವಿಸಿ. ಹಣ್ಣು ಮತ್ತು ತರಕಾರಿಗಳನ್ನು ಬಿಸಿ ನೀರಿನಲ್ಲಿ ಶುದ್ಧವಾಗಿ ತೊಳೆದ ನಂತರವಷ್ಟೇ ಸೇವನೆ ಮಾಡಿ.
2. ಅತಿಯಾದ ಎಣ್ಣೆಯಿರುವ ಆಹಾರವನ್ನು ಸೇವಿಸಬೇಡಿ. ಹೊಟ್ಟೆಗೆ ಲಘುವಾಗಿ ಮಾತ್ರ ಆಹಾರವಿರಲಿ ಮತ್ತು ಧಾನ್ಯಗಳು ನಿಮ್ಮ ಆಹಾರದಲ್ಲಿ ಭಾಗಿಯಾಗಿರಲಿ.
3. ಕಹಿ ತರಕಾರಿಗಳಾದ ಬೇವು, ಹಾಗಲಕಾಯಿ, ಅರಿಶಿನ, ಪಡುವಲಕಾಯಿ, ಗೋರಿಕಾಯಿ, ಮೆಂತ್ಯೆಯನ್ನು ಆಹಾರದಲ್ಲಿ ಹೆಚ್ಚು ಬೆಳೆಸಿದರೆ ರೋಗಗಳನ್ನು ತಡೆಗಟ್ಟುವ ಮತ್ತು ಅವುಗಳ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ.
4. ಸಾಸಿವೆ, ಕಡಲೆಕಾಯಿ ಮತ್ತು ಎಳ್ಳೆಣ್ಣೆಯನ್ನು ಈ ಕಾಲದಲ್ಲಿ ಆದಷ್ಟು ತ್ಯಜಿಸಿದರೆ ಒಳಿತು.
5. ಅತಿಯಾಗಿಯೂ ತಿನ್ನಬೇಡಿ, ತಿನ್ನದೆಯೂ ಇರಬೇಡಿ. ಸಮತೋಲನವಾಗಿ ಆಹಾರ ಸೇವನೆ ನಿಮ್ಮದಿರಲಿ.
6. ಹೆಚ್ಚು ಕಾಫಿ ಮತ್ತು ಟೀ ಕುಡಿಯದೆ, ಟೀ ನಲ್ಲಿ ವಿಶೇಷವಾಗಿರುವ ಶುಂಠಿ ಮತ್ತು ಮಿಂಟ್ ಟೀ ಸೇವನೆ ಈ ಕಾಲಕ್ಕೆ ನಿಮ್ಮ ಆರೋಗ್ಯವನ್ನು ವೃದ್ದಿಸುತ್ತದೆ.
7. ಬೆಳ್ಳುಳ್ಳಿ, ಮೆಣಸು, ಇಂಗು, ಶುಂಠಿ, ಜೀರಿಗೆ, ಅರಿಶಿನ ಮತ್ತು ಕೊತ್ತಂಬರಿಯನ್ನು ಅಡುಗೆಗೆ ಹೆಚ್ಚು ಬಳಸಿ.
8. ಮಾಂಸಾಹಾರಿಗಳು ಸೂಪ್ ಗಳ ಸೇವನೆ ಮಾಡಿದರೆ ಉತ್ತಮ, ಹುರಿದ ಮಾಂಸ, ಮೀನು ಮಳೆಗಾಲದ ಆಹಾರವಾಗದಿರಲಿ.
9. ತೊಳೆದಿದ್ದರೂ ಕೂಡ ತರಕಾರಿಗಳಲ್ಲಿ ಕೀಟಾಣುಗಳು ಉಳಿದುಕೊಂಡಿರುವ ಸಾಧ್ಯತೆ ಹೆಚ್ಚಿರುವುದರಿಂದ ಬೇಯಿಸಿದ ಆಹಾರವನ್ನೇ ಸೇವಿಸಿ.
10. ಉಪ್ಪಿನಕಾಯಿ, ಹುಣಸೆ, ಚಟ್ನಿ ಇಂತಹವುಗಳ ಸೇವನೆ ಕಡಿಮೆ ಮಾಡಿ. ಇದು ದೇಹವನ್ನು ಭಾರವೆನಿಸುವಂತೆ ಮಾಡುತ್ತದೆ.
11. ಶೀತ ಮತ್ತು ಕೆಮ್ಮಿನ ವಿರುದ್ಧ ಹೋರಾಡಲು ಮೂಲಂಗಿ ರಸ ಸೇವಿನೆ ನಿಮ್ಮದಿರಲಿ.
12. ಮಳೆಗಾಲದಲ್ಲಿ ಬಿಸಿ ನೀರನ್ನು ಕುಡಿಯುವುದೇ ಒಳಿತು. ಹೊರಗೆ ಹೋದಾಗಲೂ ಬಿಸಿ ನೀರು ನಿಮ್ಮೊಂದಿಗಿರಲಿ.
ಆರೋಗ್ಯ ಚೆನ್ನಾಗಿದ್ದರೆ ಮಾತ್ರ ಮಳೆಗಾಲದ ಆನಂದವನ್ನು ಅನುಭವಿಸಲು ಸಾಧ್ಯ. ಆದ್ದರಿಂದ ಆರೋಗ್ಯ ಕೆಡಿಸಿಕೊಳ್ಳದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿ ರೋಗಗಳಿಂದ ದೂರವುಳಿದು ಮಳೆಗಾಲದ ಸಂತಸವನ್ನು ಪಡೆಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











