Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಮಳೆಗಾಲದಲ್ಲಿ ಮೈ ಮನ ಮರುಗದಿರಲಿ

ಮಳೆಗಾಲದಲ್ಲಿ ಅನುಸರಿಸಬೇಕಾದ ಆಹಾರ ನಿಯಮಗಳು:
1. ತಾಜಾ ಆಹಾರವನ್ನೇ ಸೇವಿಸಿ. ಹಣ್ಣು ಮತ್ತು ತರಕಾರಿಗಳನ್ನು ಬಿಸಿ ನೀರಿನಲ್ಲಿ ಶುದ್ಧವಾಗಿ ತೊಳೆದ ನಂತರವಷ್ಟೇ ಸೇವನೆ ಮಾಡಿ.
2. ಅತಿಯಾದ ಎಣ್ಣೆಯಿರುವ ಆಹಾರವನ್ನು ಸೇವಿಸಬೇಡಿ. ಹೊಟ್ಟೆಗೆ ಲಘುವಾಗಿ ಮಾತ್ರ ಆಹಾರವಿರಲಿ ಮತ್ತು ಧಾನ್ಯಗಳು ನಿಮ್ಮ ಆಹಾರದಲ್ಲಿ ಭಾಗಿಯಾಗಿರಲಿ.
3. ಕಹಿ ತರಕಾರಿಗಳಾದ ಬೇವು, ಹಾಗಲಕಾಯಿ, ಅರಿಶಿನ, ಪಡುವಲಕಾಯಿ, ಗೋರಿಕಾಯಿ, ಮೆಂತ್ಯೆಯನ್ನು ಆಹಾರದಲ್ಲಿ ಹೆಚ್ಚು ಬೆಳೆಸಿದರೆ ರೋಗಗಳನ್ನು ತಡೆಗಟ್ಟುವ ಮತ್ತು ಅವುಗಳ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ.
4. ಸಾಸಿವೆ, ಕಡಲೆಕಾಯಿ ಮತ್ತು ಎಳ್ಳೆಣ್ಣೆಯನ್ನು ಈ ಕಾಲದಲ್ಲಿ ಆದಷ್ಟು ತ್ಯಜಿಸಿದರೆ ಒಳಿತು.
5. ಅತಿಯಾಗಿಯೂ ತಿನ್ನಬೇಡಿ, ತಿನ್ನದೆಯೂ ಇರಬೇಡಿ. ಸಮತೋಲನವಾಗಿ ಆಹಾರ ಸೇವನೆ ನಿಮ್ಮದಿರಲಿ.
6. ಹೆಚ್ಚು ಕಾಫಿ ಮತ್ತು ಟೀ ಕುಡಿಯದೆ, ಟೀ ನಲ್ಲಿ ವಿಶೇಷವಾಗಿರುವ ಶುಂಠಿ ಮತ್ತು ಮಿಂಟ್ ಟೀ ಸೇವನೆ ಈ ಕಾಲಕ್ಕೆ ನಿಮ್ಮ ಆರೋಗ್ಯವನ್ನು ವೃದ್ದಿಸುತ್ತದೆ.
7. ಬೆಳ್ಳುಳ್ಳಿ, ಮೆಣಸು, ಇಂಗು, ಶುಂಠಿ, ಜೀರಿಗೆ, ಅರಿಶಿನ ಮತ್ತು ಕೊತ್ತಂಬರಿಯನ್ನು ಅಡುಗೆಗೆ ಹೆಚ್ಚು ಬಳಸಿ.
8. ಮಾಂಸಾಹಾರಿಗಳು ಸೂಪ್ ಗಳ ಸೇವನೆ ಮಾಡಿದರೆ ಉತ್ತಮ, ಹುರಿದ ಮಾಂಸ, ಮೀನು ಮಳೆಗಾಲದ ಆಹಾರವಾಗದಿರಲಿ.
9. ತೊಳೆದಿದ್ದರೂ ಕೂಡ ತರಕಾರಿಗಳಲ್ಲಿ ಕೀಟಾಣುಗಳು ಉಳಿದುಕೊಂಡಿರುವ ಸಾಧ್ಯತೆ ಹೆಚ್ಚಿರುವುದರಿಂದ ಬೇಯಿಸಿದ ಆಹಾರವನ್ನೇ ಸೇವಿಸಿ.
10. ಉಪ್ಪಿನಕಾಯಿ, ಹುಣಸೆ, ಚಟ್ನಿ ಇಂತಹವುಗಳ ಸೇವನೆ ಕಡಿಮೆ ಮಾಡಿ. ಇದು ದೇಹವನ್ನು ಭಾರವೆನಿಸುವಂತೆ ಮಾಡುತ್ತದೆ.
11. ಶೀತ ಮತ್ತು ಕೆಮ್ಮಿನ ವಿರುದ್ಧ ಹೋರಾಡಲು ಮೂಲಂಗಿ ರಸ ಸೇವಿನೆ ನಿಮ್ಮದಿರಲಿ.
12. ಮಳೆಗಾಲದಲ್ಲಿ ಬಿಸಿ ನೀರನ್ನು ಕುಡಿಯುವುದೇ ಒಳಿತು. ಹೊರಗೆ ಹೋದಾಗಲೂ ಬಿಸಿ ನೀರು ನಿಮ್ಮೊಂದಿಗಿರಲಿ.
ಆರೋಗ್ಯ ಚೆನ್ನಾಗಿದ್ದರೆ ಮಾತ್ರ ಮಳೆಗಾಲದ ಆನಂದವನ್ನು ಅನುಭವಿಸಲು ಸಾಧ್ಯ. ಆದ್ದರಿಂದ ಆರೋಗ್ಯ ಕೆಡಿಸಿಕೊಳ್ಳದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿ ರೋಗಗಳಿಂದ ದೂರವುಳಿದು ಮಳೆಗಾಲದ ಸಂತಸವನ್ನು ಪಡೆಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications