Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಕಣ್ಣುಗಳ ಆರೋಗ್ಯಕ್ಕೆ ಏನೇನು ತಿನ್ನಬೇಕು?

ಆರೋಗ್ಯಕರ ಕಣ್ಣುಗಳಿಗೆ ಯಾವ ಆಹಾರ ಸೇವಿಸಬೇಕೆಂದು ತಿಳಿದುಕೊಳ್ಳೋಣ:
*ವಿಟಮಿನ್ಸ್: ಕಣ್ಣಿಗೆ ಅಗತ್ಯವಿರುವ ವಿಟಮಿಮ್ ಎ, ಇ ಮತ್ತು ಸಿ ದಿನನಿತ್ಯ ನಿಮ್ಮ ಆಹಾರದಲ್ಲಿರುವಂತೆ ನೋಡಿಕೊಳ್ಳಿ. ಕ್ಯಾರೆಟ್, ಸೇಬು, ಕಿತ್ತಳೆ, ದ್ರಾಕ್ಷಿ ಹಣ್ಣುಗಳು ಕಣ್ಣಿನ ಪೋಷಣೆಗೆ ಉತ್ತಮ ವಿಟಮಿನ್ ನೀಡುವ ಹಣ್ಣುಗಳು. ಇವುಗಳ ಸೇವನೆ ಕಣ್ಣನ್ನು ದೀರ್ಘಕಾಲ ಬಾಳಿಕೆ ಬರುವಂತೆ ಮಾಡುತ್ತದೆ.
* ಸೌತೆಕಾಯಿ: ನಿಮ್ಮ ಕಣ್ಣು ತುಂಬಾ ಒತ್ತಡದಿಂದ ಬಳಲಿದ್ದರೆ ಅದಕ್ಕೆ ಸೌತೆಕಾಯಿ ರಸ, ಬೂದುಗುಂಬಳಕಾಯಿ ರಸ ಅಥವಾ ಒಂದು ಚಮಚ ಹರಳೆಣ್ಣೆ, ಯಾವುದೂ ಇಲ್ಲವೆಂದರೆ ಐಸ್ ವಾಟರ್ ಅನ್ನು ಕಣ್ಣುಗಳ ಮೇಲಿಟ್ಟರೂ ಬೇಗನೆ ಆಯಾಸ ಕಡಿಮೆಯಾಗುತ್ತದೆ. ಇದು ತಲೆನೋವನ್ನು ಕಡಿಮೆ ಮಾಡಿ ಒತ್ತಡದಿಂದ ಕಣ್ಣಿನ ನೋವು ಕಾಣಿಸಿಕೊಳ್ಳುವುದನ್ನು ತಡೆಯುತ್ತದೆ. ಆಗಾಗ್ಗೆ ಸೌತೆಕಾಯಿ ಅಥವಾ ಅದರ ಜ್ಯೂಸ್ ಸೇವಿಸಿದರೆ ಕಣ್ಣಿಗೆ ತುಂಬಾ ಹಿತ.
* ಬಾದಾಮಿ: ಬಾದಾಮಿ (ನೀರಿನಲ್ಲಿ ಸೋಕಿಸಿ ಸಿಪ್ಪೆ ತೆಗೆದದ್ದು), ಕರ್ಜೂರ, ಸೊಯಾ ಬೀನ್, ಹಸಿರು ಬಟಾಣಿಯಲ್ಲಿ ಹೇರಳವಾಗಿರುವ ವಿಟಮಿನ್ ಎ ಕಣ್ಣಿನ ಪೋಷಣೆಗೆ ಅಗತ್ಯವಾದ ಪೋಷಕಾಂಶ ನೀಡುತ್ತದೆ.
* ಪಾಲಾಕ್ : ಹಸಿರು ಸೊಪ್ಪುಗಳಾದ ಪಾಲಾಕ್ ಸೊಪ್ಪು, ಹೂಕೋಸು, ಟರ್ನಿಪ್ ಮುಂತಾದವು ಕೆಂಪು ರಕ್ತ ಕಣಗಳನ್ನು ಹೆಚ್ಚಿಸಿ ಕಣ್ಣಿನ ದೃಷ್ಠಿ ಚುರುಕುಗೊಳ್ಳುವಂತೆ ಮಾಡುತ್ತದೆ. ಈ ಸೊಪ್ಪುಗಳು ನಿಮ್ಮ ಆಹಾರದಲ್ಲಿದ್ದರೆ ನೀವು ಕಣ್ಣಿನ ಆರೋಗ್ಯದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ.
* ಹಾಲು: ಡೈರಿ ಉತ್ಪನ್ನಗಳಾದ ಹಾಲು, ಬೆಣ್ಣೆ, ಚೀಸ್ ಮುಂತಾದುವು ಕಣ್ಣಿನ ಆರೋಗ್ಯದ ಆಹಾರದ ಲಿಸ್ಟ್ ನಲ್ಲಿರಲಿ. ಕಣ್ಣಿನ ದಣಿವನ್ನು ನೀಗಿಸಿ ರಿಲ್ಯಾಕ್ಸ್ ಆಗುವಂತೆ ಮಾಡುತ್ತದೆ. ಅಷ್ಟೇ ಅಲ್ಲ ಕಣ್ಣಿಗೆ ಅಗತ್ಯವಾದ ಪೋಷಕಾಂಶವನ್ನೂ ಹೆಚ್ಚಾಗಿ ಒದಗಿಸುತ್ತದೆ.
* ತುಳಸಿ: ಆಯುರ್ವೇದ ಚಿಕಿತ್ಸೆಯಲ್ಲಿ ಕಣ್ಣಿನ ಚಿಕಿತ್ಸೆಗೆಂದು ತುಳಸಿ ಮತ್ತು ಬೆಟ್ಟದ ನೆಲ್ಲಿಕಾಯಿಯನ್ನು ಬಳಸಲಾಗುತ್ತದೆ. ಇದರಲ್ಲಿನ ಔಷಧೀಯ ಗುಣ ಕಣ್ಣಿನ ದೃಷ್ಟಿಯನ್ನು ಹೆಚ್ಚಿಸುತ್ತದೆ. ವಯಸ್ಸಾದರೂ ದೃಷ್ಟಿ ಬೇಗ ಮಾಸದಂತೆ ನೋಡಿಕೊಳ್ಳುತ್ತದೆ. ಇದನ್ನು ನೀರು ಮತ್ತು ಜೇನಿನೊಂದಿಗೆ ಬೆರೆಸಿ ಜ್ಯೂಸ್ ಮಾಡಿ ಕುಡಿದರೆ ತುಂಬಾ ಕಣ್ಣುಗಳು ಹೆಚ್ಚು ಕಾಲ ಬಾಳಿಕೆ ಬರುತ್ತದೆ.
ಈ ಸಿಂಪಲ್ ಡಯಟ್ ನೊಂದಿಗೆ ಸರಳವಾದ ಕೆಲವು ಕಣ್ಣಿನ ವ್ಯಾಯಾಮಗಳನ್ನೂ ಮಾಡಿಕೊಂಡರೆ ನೀವು ಜಗತ್ತನ್ನು ಹೆಚ್ಚು ಕಾಲ ನೋಡಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
