Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಕಣ್ಣುಗಳ ಆರೋಗ್ಯಕ್ಕೆ ಏನೇನು ತಿನ್ನಬೇಕು?

ಆರೋಗ್ಯಕರ ಕಣ್ಣುಗಳಿಗೆ ಯಾವ ಆಹಾರ ಸೇವಿಸಬೇಕೆಂದು ತಿಳಿದುಕೊಳ್ಳೋಣ:
*ವಿಟಮಿನ್ಸ್: ಕಣ್ಣಿಗೆ ಅಗತ್ಯವಿರುವ ವಿಟಮಿಮ್ ಎ, ಇ ಮತ್ತು ಸಿ ದಿನನಿತ್ಯ ನಿಮ್ಮ ಆಹಾರದಲ್ಲಿರುವಂತೆ ನೋಡಿಕೊಳ್ಳಿ. ಕ್ಯಾರೆಟ್, ಸೇಬು, ಕಿತ್ತಳೆ, ದ್ರಾಕ್ಷಿ ಹಣ್ಣುಗಳು ಕಣ್ಣಿನ ಪೋಷಣೆಗೆ ಉತ್ತಮ ವಿಟಮಿನ್ ನೀಡುವ ಹಣ್ಣುಗಳು. ಇವುಗಳ ಸೇವನೆ ಕಣ್ಣನ್ನು ದೀರ್ಘಕಾಲ ಬಾಳಿಕೆ ಬರುವಂತೆ ಮಾಡುತ್ತದೆ.
* ಸೌತೆಕಾಯಿ: ನಿಮ್ಮ ಕಣ್ಣು ತುಂಬಾ ಒತ್ತಡದಿಂದ ಬಳಲಿದ್ದರೆ ಅದಕ್ಕೆ ಸೌತೆಕಾಯಿ ರಸ, ಬೂದುಗುಂಬಳಕಾಯಿ ರಸ ಅಥವಾ ಒಂದು ಚಮಚ ಹರಳೆಣ್ಣೆ, ಯಾವುದೂ ಇಲ್ಲವೆಂದರೆ ಐಸ್ ವಾಟರ್ ಅನ್ನು ಕಣ್ಣುಗಳ ಮೇಲಿಟ್ಟರೂ ಬೇಗನೆ ಆಯಾಸ ಕಡಿಮೆಯಾಗುತ್ತದೆ. ಇದು ತಲೆನೋವನ್ನು ಕಡಿಮೆ ಮಾಡಿ ಒತ್ತಡದಿಂದ ಕಣ್ಣಿನ ನೋವು ಕಾಣಿಸಿಕೊಳ್ಳುವುದನ್ನು ತಡೆಯುತ್ತದೆ. ಆಗಾಗ್ಗೆ ಸೌತೆಕಾಯಿ ಅಥವಾ ಅದರ ಜ್ಯೂಸ್ ಸೇವಿಸಿದರೆ ಕಣ್ಣಿಗೆ ತುಂಬಾ ಹಿತ.
* ಬಾದಾಮಿ: ಬಾದಾಮಿ (ನೀರಿನಲ್ಲಿ ಸೋಕಿಸಿ ಸಿಪ್ಪೆ ತೆಗೆದದ್ದು), ಕರ್ಜೂರ, ಸೊಯಾ ಬೀನ್, ಹಸಿರು ಬಟಾಣಿಯಲ್ಲಿ ಹೇರಳವಾಗಿರುವ ವಿಟಮಿನ್ ಎ ಕಣ್ಣಿನ ಪೋಷಣೆಗೆ ಅಗತ್ಯವಾದ ಪೋಷಕಾಂಶ ನೀಡುತ್ತದೆ.
* ಪಾಲಾಕ್ : ಹಸಿರು ಸೊಪ್ಪುಗಳಾದ ಪಾಲಾಕ್ ಸೊಪ್ಪು, ಹೂಕೋಸು, ಟರ್ನಿಪ್ ಮುಂತಾದವು ಕೆಂಪು ರಕ್ತ ಕಣಗಳನ್ನು ಹೆಚ್ಚಿಸಿ ಕಣ್ಣಿನ ದೃಷ್ಠಿ ಚುರುಕುಗೊಳ್ಳುವಂತೆ ಮಾಡುತ್ತದೆ. ಈ ಸೊಪ್ಪುಗಳು ನಿಮ್ಮ ಆಹಾರದಲ್ಲಿದ್ದರೆ ನೀವು ಕಣ್ಣಿನ ಆರೋಗ್ಯದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ.
* ಹಾಲು: ಡೈರಿ ಉತ್ಪನ್ನಗಳಾದ ಹಾಲು, ಬೆಣ್ಣೆ, ಚೀಸ್ ಮುಂತಾದುವು ಕಣ್ಣಿನ ಆರೋಗ್ಯದ ಆಹಾರದ ಲಿಸ್ಟ್ ನಲ್ಲಿರಲಿ. ಕಣ್ಣಿನ ದಣಿವನ್ನು ನೀಗಿಸಿ ರಿಲ್ಯಾಕ್ಸ್ ಆಗುವಂತೆ ಮಾಡುತ್ತದೆ. ಅಷ್ಟೇ ಅಲ್ಲ ಕಣ್ಣಿಗೆ ಅಗತ್ಯವಾದ ಪೋಷಕಾಂಶವನ್ನೂ ಹೆಚ್ಚಾಗಿ ಒದಗಿಸುತ್ತದೆ.
* ತುಳಸಿ: ಆಯುರ್ವೇದ ಚಿಕಿತ್ಸೆಯಲ್ಲಿ ಕಣ್ಣಿನ ಚಿಕಿತ್ಸೆಗೆಂದು ತುಳಸಿ ಮತ್ತು ಬೆಟ್ಟದ ನೆಲ್ಲಿಕಾಯಿಯನ್ನು ಬಳಸಲಾಗುತ್ತದೆ. ಇದರಲ್ಲಿನ ಔಷಧೀಯ ಗುಣ ಕಣ್ಣಿನ ದೃಷ್ಟಿಯನ್ನು ಹೆಚ್ಚಿಸುತ್ತದೆ. ವಯಸ್ಸಾದರೂ ದೃಷ್ಟಿ ಬೇಗ ಮಾಸದಂತೆ ನೋಡಿಕೊಳ್ಳುತ್ತದೆ. ಇದನ್ನು ನೀರು ಮತ್ತು ಜೇನಿನೊಂದಿಗೆ ಬೆರೆಸಿ ಜ್ಯೂಸ್ ಮಾಡಿ ಕುಡಿದರೆ ತುಂಬಾ ಕಣ್ಣುಗಳು ಹೆಚ್ಚು ಕಾಲ ಬಾಳಿಕೆ ಬರುತ್ತದೆ.
ಈ ಸಿಂಪಲ್ ಡಯಟ್ ನೊಂದಿಗೆ ಸರಳವಾದ ಕೆಲವು ಕಣ್ಣಿನ ವ್ಯಾಯಾಮಗಳನ್ನೂ ಮಾಡಿಕೊಂಡರೆ ನೀವು ಜಗತ್ತನ್ನು ಹೆಚ್ಚು ಕಾಲ ನೋಡಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications