Latest Updates
-
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ!
ಬಳಲಿದ ಕಣ್ಣಿಗೆ ಸ್ಪೆಷಲ್ ಕೇರ್ ನೀಡೋದು ಹೇಗೆ?

ಆದ್ದರಿಂದ ಕಣ್ಣಿಗೂ ಸ್ಪೆಷಲ್ ಕೇರ್ ಅಗತ್ಯವಿದೆ. ಕೆಲವು ಸಿಂಪಲ್ ಸಲಹೆಗಳನ್ನು ಪಾಲಿಸಿದರೆ ಕಣ್ಣಿನ ಆರೋಗ್ಯವನ್ನು ಸುಲಭವಾಗಿ ಕಾಪಾಡಿಕೊಳ್ಳಬಹುದು.
* ಕಣ್ಣುಗಳು ತುಂಬಾ ಒತ್ತಡದಲ್ಲಿದ್ದಂತೆ ಕಂಡರೆ, ಕಣ್ಣನ್ನು ಮುಚ್ಚಿ ಅಂಗೈಯ್ಯನ್ನು ವೃತ್ತಾಕಾರವಾಗಿ ಕಣ್ಣುಗಳ ಮೇಲೆ ಆಡಿಸಿ ಕೆಲವು ನಿಮಷ ಹಾಗೇ ಅಂಗೈನಿಂದ ಕಣ್ಣನ್ನು ಮುಚ್ಚಿಕೊಳ್ಳಬೇಕು. ಇದು ಆಯಾಸ ಕಡಿಮೆಗೊಳಿಸುತ್ತದೆ.
* ಕಣ್ಣುಗಳನ್ನು ಅಂಗೈನಿಂದ ಮುಚ್ಚಿ ಬೆಚ್ಚಗಿರಿಸಿದರೆ ಆ ಬೆಚ್ಚಗಿನ ಅನುಭವ ನೋವು ನಿವಾರಣೆಗೆ ಸಹಕಾರಿ.
* ಕೆಲಸದ ಮಧ್ಯೆ ಕೆಲವು ನಿಮಿಷ ಬಿಡುವು ಮಾಡಿಕೊಂಡು ಎಲ್ಲಾ ದಿಕ್ಕುಗಳೆಡೆಗೂ ಒಮ್ಮೆ ಕಣ್ಣನ್ನು ಹಾಯಿಸಬೇಕು. ಕೆಲವು ನಿಮಿಷ ಬಿಸಿಲು ಕಣ್ಣಿಗೆ ನೇರವಾಗಿ ಬೀಳುವಂತೆ ನೋಡಿಕೊಂಡರೂ ಕಣ್ಣಿಗೆ ಹೆಚ್ಚು ಆಯಾಸವಾಗದಂತೆ ನೋಡಿಕೊಂಡು ರಕ್ತ ಸಂಚಲನ ಹೆಚ್ಚಿಸುತ್ತದೆ.
* ತುಂಬಾ ತಣ್ಣಗಿನ ನೀರಿನಲ್ಲಿ ಹತ್ತಿಯನ್ನು ಅದ್ದಿ, ಕಣ್ಣಿನ ಮೇಲೆ ಅದನ್ನು ಅರ್ಧ ಗಂಟೆ ಇಟ್ಟುಕೊಳ್ಳುವುದರಿಂದ ಕಣ್ಣುರಿ ಮತ್ತು ಕಣ್ಣು ಕೆಂಪಗಾಗುವ ಸಮಸ್ಯೆ ತಡೆಯಬಹುದು.
* ಸೌತೆಕಾಯಿ ಮತ್ತು ಆಲೂಗಡ್ಡೆ ಹೋಳನ್ನು ಕಣ್ಣುಗಳ ಮೇಲಿರಿಸಿದರೆ ಕಣ್ಣುಗಳ ಒತ್ತಡ ಕಡಿಮೆಗೊಳ್ಳುವುದಲ್ಲದೆ, ಕಣ್ಣಿನ ಸುತ್ತಲ ಚರ್ಮವನ್ನೂ ಕಾಪಾಡುತ್ತದೆ.
* ಕಂಪ್ಯೂಟರ್ ಮುಂದೆ ನಿರಂತರವಾಗಿ ಕೂರದೆ ಆಗಾಗ್ಗೆ ವಿಶ್ರಾಂತಿ ತೆಗೆದುಕೊಳ್ಳಬೇಕು. ದೂರದ ವಸ್ತುಗಳನ್ನು ಕೆಲ ನಿಮಿಷ ನೋಡುವುದು, ಕಣ್ಣನ್ನು ಅತ್ತಿತ್ತ ಹೊರಳಿಸುವುದು ಹೀಗೆ ಮಾಡಿದರೆ ಕಣ್ಣಿನ ಮೇಲೆ ಹೆಚ್ಚು ಒತ್ತಡ ಬೀಳುವುದಿಲ್ಲ.
* ವಿಟಮಿನ್ ಎ ಹೆಚ್ಚಿರುವ ಆಹಾರ ಸೇವನೆ ದೃಷ್ಟಿ ದೋಷ ಮತ್ತು ದೃಷ್ಟಿ ಕೊರತೆಯನ್ನು ನಿವಾರಿಸುತ್ತದೆ. ಹಸಿರು ತರಕಾರಿ, ಟೊಮೆಟೊ, ಸೋಯಾ, ಕಿತ್ತಳೆ, ಪರಂಗಿ, ಸೇಬು, ದ್ರಾಕ್ಷಿ ಕಣ್ಣಿಗೆ ಅಗತ್ಯ ಪೋಷಕಾಂಶವನ್ನು ಒದಗಿಸುತ್ತದೆ. ಇದರಿಂದ ಕಣ್ಣಿಗೆ ಸೋಂಕು ತಗುಲುವುದನ್ನೂ ತಡೆಯಲು ಸಹಕಾರಿಯಾಗುತ್ತದೆ. ಆದರೆ ಈ ಸಮಸ್ಯೆ ನಿರಂತರವಾದರೆ ತಕ್ಷಣವೇ ವೈದ್ಯರನ್ನು ಭೇಟಿ ಮಾಡುವುದು ಅವಶ್ಯಕ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications