Latest Updates
-
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ!
ಬಳಲಿದ ಕಣ್ಣಿಗೆ ಸ್ಪೆಷಲ್ ಕೇರ್ ನೀಡೋದು ಹೇಗೆ?

ಆದ್ದರಿಂದ ಕಣ್ಣಿಗೂ ಸ್ಪೆಷಲ್ ಕೇರ್ ಅಗತ್ಯವಿದೆ. ಕೆಲವು ಸಿಂಪಲ್ ಸಲಹೆಗಳನ್ನು ಪಾಲಿಸಿದರೆ ಕಣ್ಣಿನ ಆರೋಗ್ಯವನ್ನು ಸುಲಭವಾಗಿ ಕಾಪಾಡಿಕೊಳ್ಳಬಹುದು.
* ಕಣ್ಣುಗಳು ತುಂಬಾ ಒತ್ತಡದಲ್ಲಿದ್ದಂತೆ ಕಂಡರೆ, ಕಣ್ಣನ್ನು ಮುಚ್ಚಿ ಅಂಗೈಯ್ಯನ್ನು ವೃತ್ತಾಕಾರವಾಗಿ ಕಣ್ಣುಗಳ ಮೇಲೆ ಆಡಿಸಿ ಕೆಲವು ನಿಮಷ ಹಾಗೇ ಅಂಗೈನಿಂದ ಕಣ್ಣನ್ನು ಮುಚ್ಚಿಕೊಳ್ಳಬೇಕು. ಇದು ಆಯಾಸ ಕಡಿಮೆಗೊಳಿಸುತ್ತದೆ.
* ಕಣ್ಣುಗಳನ್ನು ಅಂಗೈನಿಂದ ಮುಚ್ಚಿ ಬೆಚ್ಚಗಿರಿಸಿದರೆ ಆ ಬೆಚ್ಚಗಿನ ಅನುಭವ ನೋವು ನಿವಾರಣೆಗೆ ಸಹಕಾರಿ.
* ಕೆಲಸದ ಮಧ್ಯೆ ಕೆಲವು ನಿಮಿಷ ಬಿಡುವು ಮಾಡಿಕೊಂಡು ಎಲ್ಲಾ ದಿಕ್ಕುಗಳೆಡೆಗೂ ಒಮ್ಮೆ ಕಣ್ಣನ್ನು ಹಾಯಿಸಬೇಕು. ಕೆಲವು ನಿಮಿಷ ಬಿಸಿಲು ಕಣ್ಣಿಗೆ ನೇರವಾಗಿ ಬೀಳುವಂತೆ ನೋಡಿಕೊಂಡರೂ ಕಣ್ಣಿಗೆ ಹೆಚ್ಚು ಆಯಾಸವಾಗದಂತೆ ನೋಡಿಕೊಂಡು ರಕ್ತ ಸಂಚಲನ ಹೆಚ್ಚಿಸುತ್ತದೆ.
* ತುಂಬಾ ತಣ್ಣಗಿನ ನೀರಿನಲ್ಲಿ ಹತ್ತಿಯನ್ನು ಅದ್ದಿ, ಕಣ್ಣಿನ ಮೇಲೆ ಅದನ್ನು ಅರ್ಧ ಗಂಟೆ ಇಟ್ಟುಕೊಳ್ಳುವುದರಿಂದ ಕಣ್ಣುರಿ ಮತ್ತು ಕಣ್ಣು ಕೆಂಪಗಾಗುವ ಸಮಸ್ಯೆ ತಡೆಯಬಹುದು.
* ಸೌತೆಕಾಯಿ ಮತ್ತು ಆಲೂಗಡ್ಡೆ ಹೋಳನ್ನು ಕಣ್ಣುಗಳ ಮೇಲಿರಿಸಿದರೆ ಕಣ್ಣುಗಳ ಒತ್ತಡ ಕಡಿಮೆಗೊಳ್ಳುವುದಲ್ಲದೆ, ಕಣ್ಣಿನ ಸುತ್ತಲ ಚರ್ಮವನ್ನೂ ಕಾಪಾಡುತ್ತದೆ.
* ಕಂಪ್ಯೂಟರ್ ಮುಂದೆ ನಿರಂತರವಾಗಿ ಕೂರದೆ ಆಗಾಗ್ಗೆ ವಿಶ್ರಾಂತಿ ತೆಗೆದುಕೊಳ್ಳಬೇಕು. ದೂರದ ವಸ್ತುಗಳನ್ನು ಕೆಲ ನಿಮಿಷ ನೋಡುವುದು, ಕಣ್ಣನ್ನು ಅತ್ತಿತ್ತ ಹೊರಳಿಸುವುದು ಹೀಗೆ ಮಾಡಿದರೆ ಕಣ್ಣಿನ ಮೇಲೆ ಹೆಚ್ಚು ಒತ್ತಡ ಬೀಳುವುದಿಲ್ಲ.
* ವಿಟಮಿನ್ ಎ ಹೆಚ್ಚಿರುವ ಆಹಾರ ಸೇವನೆ ದೃಷ್ಟಿ ದೋಷ ಮತ್ತು ದೃಷ್ಟಿ ಕೊರತೆಯನ್ನು ನಿವಾರಿಸುತ್ತದೆ. ಹಸಿರು ತರಕಾರಿ, ಟೊಮೆಟೊ, ಸೋಯಾ, ಕಿತ್ತಳೆ, ಪರಂಗಿ, ಸೇಬು, ದ್ರಾಕ್ಷಿ ಕಣ್ಣಿಗೆ ಅಗತ್ಯ ಪೋಷಕಾಂಶವನ್ನು ಒದಗಿಸುತ್ತದೆ. ಇದರಿಂದ ಕಣ್ಣಿಗೆ ಸೋಂಕು ತಗುಲುವುದನ್ನೂ ತಡೆಯಲು ಸಹಕಾರಿಯಾಗುತ್ತದೆ. ಆದರೆ ಈ ಸಮಸ್ಯೆ ನಿರಂತರವಾದರೆ ತಕ್ಷಣವೇ ವೈದ್ಯರನ್ನು ಭೇಟಿ ಮಾಡುವುದು ಅವಶ್ಯಕ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications