Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಬಳಲಿದ ಕಣ್ಣಿಗೆ ಸ್ಪೆಷಲ್ ಕೇರ್ ನೀಡೋದು ಹೇಗೆ?

ಆದ್ದರಿಂದ ಕಣ್ಣಿಗೂ ಸ್ಪೆಷಲ್ ಕೇರ್ ಅಗತ್ಯವಿದೆ. ಕೆಲವು ಸಿಂಪಲ್ ಸಲಹೆಗಳನ್ನು ಪಾಲಿಸಿದರೆ ಕಣ್ಣಿನ ಆರೋಗ್ಯವನ್ನು ಸುಲಭವಾಗಿ ಕಾಪಾಡಿಕೊಳ್ಳಬಹುದು.
* ಕಣ್ಣುಗಳು ತುಂಬಾ ಒತ್ತಡದಲ್ಲಿದ್ದಂತೆ ಕಂಡರೆ, ಕಣ್ಣನ್ನು ಮುಚ್ಚಿ ಅಂಗೈಯ್ಯನ್ನು ವೃತ್ತಾಕಾರವಾಗಿ ಕಣ್ಣುಗಳ ಮೇಲೆ ಆಡಿಸಿ ಕೆಲವು ನಿಮಷ ಹಾಗೇ ಅಂಗೈನಿಂದ ಕಣ್ಣನ್ನು ಮುಚ್ಚಿಕೊಳ್ಳಬೇಕು. ಇದು ಆಯಾಸ ಕಡಿಮೆಗೊಳಿಸುತ್ತದೆ.
* ಕಣ್ಣುಗಳನ್ನು ಅಂಗೈನಿಂದ ಮುಚ್ಚಿ ಬೆಚ್ಚಗಿರಿಸಿದರೆ ಆ ಬೆಚ್ಚಗಿನ ಅನುಭವ ನೋವು ನಿವಾರಣೆಗೆ ಸಹಕಾರಿ.
* ಕೆಲಸದ ಮಧ್ಯೆ ಕೆಲವು ನಿಮಿಷ ಬಿಡುವು ಮಾಡಿಕೊಂಡು ಎಲ್ಲಾ ದಿಕ್ಕುಗಳೆಡೆಗೂ ಒಮ್ಮೆ ಕಣ್ಣನ್ನು ಹಾಯಿಸಬೇಕು. ಕೆಲವು ನಿಮಿಷ ಬಿಸಿಲು ಕಣ್ಣಿಗೆ ನೇರವಾಗಿ ಬೀಳುವಂತೆ ನೋಡಿಕೊಂಡರೂ ಕಣ್ಣಿಗೆ ಹೆಚ್ಚು ಆಯಾಸವಾಗದಂತೆ ನೋಡಿಕೊಂಡು ರಕ್ತ ಸಂಚಲನ ಹೆಚ್ಚಿಸುತ್ತದೆ.
* ತುಂಬಾ ತಣ್ಣಗಿನ ನೀರಿನಲ್ಲಿ ಹತ್ತಿಯನ್ನು ಅದ್ದಿ, ಕಣ್ಣಿನ ಮೇಲೆ ಅದನ್ನು ಅರ್ಧ ಗಂಟೆ ಇಟ್ಟುಕೊಳ್ಳುವುದರಿಂದ ಕಣ್ಣುರಿ ಮತ್ತು ಕಣ್ಣು ಕೆಂಪಗಾಗುವ ಸಮಸ್ಯೆ ತಡೆಯಬಹುದು.
* ಸೌತೆಕಾಯಿ ಮತ್ತು ಆಲೂಗಡ್ಡೆ ಹೋಳನ್ನು ಕಣ್ಣುಗಳ ಮೇಲಿರಿಸಿದರೆ ಕಣ್ಣುಗಳ ಒತ್ತಡ ಕಡಿಮೆಗೊಳ್ಳುವುದಲ್ಲದೆ, ಕಣ್ಣಿನ ಸುತ್ತಲ ಚರ್ಮವನ್ನೂ ಕಾಪಾಡುತ್ತದೆ.
* ಕಂಪ್ಯೂಟರ್ ಮುಂದೆ ನಿರಂತರವಾಗಿ ಕೂರದೆ ಆಗಾಗ್ಗೆ ವಿಶ್ರಾಂತಿ ತೆಗೆದುಕೊಳ್ಳಬೇಕು. ದೂರದ ವಸ್ತುಗಳನ್ನು ಕೆಲ ನಿಮಿಷ ನೋಡುವುದು, ಕಣ್ಣನ್ನು ಅತ್ತಿತ್ತ ಹೊರಳಿಸುವುದು ಹೀಗೆ ಮಾಡಿದರೆ ಕಣ್ಣಿನ ಮೇಲೆ ಹೆಚ್ಚು ಒತ್ತಡ ಬೀಳುವುದಿಲ್ಲ.
* ವಿಟಮಿನ್ ಎ ಹೆಚ್ಚಿರುವ ಆಹಾರ ಸೇವನೆ ದೃಷ್ಟಿ ದೋಷ ಮತ್ತು ದೃಷ್ಟಿ ಕೊರತೆಯನ್ನು ನಿವಾರಿಸುತ್ತದೆ. ಹಸಿರು ತರಕಾರಿ, ಟೊಮೆಟೊ, ಸೋಯಾ, ಕಿತ್ತಳೆ, ಪರಂಗಿ, ಸೇಬು, ದ್ರಾಕ್ಷಿ ಕಣ್ಣಿಗೆ ಅಗತ್ಯ ಪೋಷಕಾಂಶವನ್ನು ಒದಗಿಸುತ್ತದೆ. ಇದರಿಂದ ಕಣ್ಣಿಗೆ ಸೋಂಕು ತಗುಲುವುದನ್ನೂ ತಡೆಯಲು ಸಹಕಾರಿಯಾಗುತ್ತದೆ. ಆದರೆ ಈ ಸಮಸ್ಯೆ ನಿರಂತರವಾದರೆ ತಕ್ಷಣವೇ ವೈದ್ಯರನ್ನು ಭೇಟಿ ಮಾಡುವುದು ಅವಶ್ಯಕ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications