Latest Updates
-
ರಾಜಸ್ಥಾನ UCC: ಲಿವ್-ಇನ್ ಮತ್ತು ಮದುವೆ ಜೋಡಿಗಳೇ ಎಚ್ಚರ, ಈ ದಾಖಲೆಗಳು ಸಿದ್ಧವಿರಲಿ! -
ಮಳೆಗಾಲದ ಎಚ್ಚರಿಕೆ: ಅಪಾರ್ಟ್ಮೆಂಟ್ ಸೋರಿಕೆ ತಡೆಯಲು ಮತ್ತು ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಸರಳ ಉಪಾಯಗಳು -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ₹350 ಕ್ಕಿಂತ ಕಡಿಮೆ ವೆಚ್ಚದಲ್ಲಿ 7 ಹೈ-ಪ್ರೋಟೀನ್ ಬ್ರೇಕ್ಫಾಸ್ಟ್ ಐಡಿಯಾಗಳು! -
ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್: PoP ಮೂರ್ತಿ ನಿಷೇಧ, ಅನುಮತಿ ಪಡೆಯುವುದು ಹೇಗೆ? -
ದೆಹಲಿ ಆರೆಂಜ್ ಅಲರ್ಟ್: ಮಳೆಯಲ್ಲಿ ಮನೆಯಲ್ಲೇ ಫಿಟ್ ಆಗಿರಲು ಈ 20 ನಿಮಿಷದ ವರ್ಕೌಟ್ ಟ್ರೈ ಮಾಡಿ -
ಬ್ರೇಕಪ್ ನಂತರ ಸೋಶಿಯಲ್ ಮೀಡಿಯಾ: ನಿಮ್ಮ ಗೌಪ್ಯತೆ ಮತ್ತು ಕಾನೂನು ರಕ್ಷಣೆಗೆ ಈ ಟಿಪ್ಸ್ ಪಾಲಿಸಿ -
ಜನ್ಮಾಷ್ಟಮಿ ಉಪವಾಸ: ಹಬ್ಬದ ಸಂಭ್ರಮದ ನಡುವೆ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಕಜರಿ ತೀಜ್ 2026: ಉಪವಾಸದ ದಿನ ಆರೋಗ್ಯ ಮತ್ತು ಸಂಗಾತಿಯೊಂದಿಗೆ ಸುಗಮ ಸಂವಹನಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಇಂದೇ ಕೊನೆಯ ಅವಕಾಶ: ಎಲ್ಪಿಜಿ ಇ-ಕೆವೈಸಿ ಮಾಡದಿದ್ದರೆ ಸಿಲಿಂಡರ್ ದರ ಏರಿಕೆ ಖಚಿತ! -
ಈರುಳ್ಳಿ ಬೆಲೆ ಏರಿಕೆ: ಅಡುಗೆಮನೆ ಬಜೆಟ್ ಉಳಿಸಿ, ಈರುಳ್ಳಿ ಇಲ್ಲದೆಯೂ ರುಚಿಕರ ಹೈ-ಪ್ರೋಟೀನ್ ಊಟ ಮಾಡಿ!
ಬಳಲಿದ ಕಣ್ಣಿಗೆ ಸ್ಪೆಷಲ್ ಕೇರ್ ನೀಡೋದು ಹೇಗೆ?

ಆದ್ದರಿಂದ ಕಣ್ಣಿಗೂ ಸ್ಪೆಷಲ್ ಕೇರ್ ಅಗತ್ಯವಿದೆ. ಕೆಲವು ಸಿಂಪಲ್ ಸಲಹೆಗಳನ್ನು ಪಾಲಿಸಿದರೆ ಕಣ್ಣಿನ ಆರೋಗ್ಯವನ್ನು ಸುಲಭವಾಗಿ ಕಾಪಾಡಿಕೊಳ್ಳಬಹುದು.
* ಕಣ್ಣುಗಳು ತುಂಬಾ ಒತ್ತಡದಲ್ಲಿದ್ದಂತೆ ಕಂಡರೆ, ಕಣ್ಣನ್ನು ಮುಚ್ಚಿ ಅಂಗೈಯ್ಯನ್ನು ವೃತ್ತಾಕಾರವಾಗಿ ಕಣ್ಣುಗಳ ಮೇಲೆ ಆಡಿಸಿ ಕೆಲವು ನಿಮಷ ಹಾಗೇ ಅಂಗೈನಿಂದ ಕಣ್ಣನ್ನು ಮುಚ್ಚಿಕೊಳ್ಳಬೇಕು. ಇದು ಆಯಾಸ ಕಡಿಮೆಗೊಳಿಸುತ್ತದೆ.
* ಕಣ್ಣುಗಳನ್ನು ಅಂಗೈನಿಂದ ಮುಚ್ಚಿ ಬೆಚ್ಚಗಿರಿಸಿದರೆ ಆ ಬೆಚ್ಚಗಿನ ಅನುಭವ ನೋವು ನಿವಾರಣೆಗೆ ಸಹಕಾರಿ.
* ಕೆಲಸದ ಮಧ್ಯೆ ಕೆಲವು ನಿಮಿಷ ಬಿಡುವು ಮಾಡಿಕೊಂಡು ಎಲ್ಲಾ ದಿಕ್ಕುಗಳೆಡೆಗೂ ಒಮ್ಮೆ ಕಣ್ಣನ್ನು ಹಾಯಿಸಬೇಕು. ಕೆಲವು ನಿಮಿಷ ಬಿಸಿಲು ಕಣ್ಣಿಗೆ ನೇರವಾಗಿ ಬೀಳುವಂತೆ ನೋಡಿಕೊಂಡರೂ ಕಣ್ಣಿಗೆ ಹೆಚ್ಚು ಆಯಾಸವಾಗದಂತೆ ನೋಡಿಕೊಂಡು ರಕ್ತ ಸಂಚಲನ ಹೆಚ್ಚಿಸುತ್ತದೆ.
* ತುಂಬಾ ತಣ್ಣಗಿನ ನೀರಿನಲ್ಲಿ ಹತ್ತಿಯನ್ನು ಅದ್ದಿ, ಕಣ್ಣಿನ ಮೇಲೆ ಅದನ್ನು ಅರ್ಧ ಗಂಟೆ ಇಟ್ಟುಕೊಳ್ಳುವುದರಿಂದ ಕಣ್ಣುರಿ ಮತ್ತು ಕಣ್ಣು ಕೆಂಪಗಾಗುವ ಸಮಸ್ಯೆ ತಡೆಯಬಹುದು.
* ಸೌತೆಕಾಯಿ ಮತ್ತು ಆಲೂಗಡ್ಡೆ ಹೋಳನ್ನು ಕಣ್ಣುಗಳ ಮೇಲಿರಿಸಿದರೆ ಕಣ್ಣುಗಳ ಒತ್ತಡ ಕಡಿಮೆಗೊಳ್ಳುವುದಲ್ಲದೆ, ಕಣ್ಣಿನ ಸುತ್ತಲ ಚರ್ಮವನ್ನೂ ಕಾಪಾಡುತ್ತದೆ.
* ಕಂಪ್ಯೂಟರ್ ಮುಂದೆ ನಿರಂತರವಾಗಿ ಕೂರದೆ ಆಗಾಗ್ಗೆ ವಿಶ್ರಾಂತಿ ತೆಗೆದುಕೊಳ್ಳಬೇಕು. ದೂರದ ವಸ್ತುಗಳನ್ನು ಕೆಲ ನಿಮಿಷ ನೋಡುವುದು, ಕಣ್ಣನ್ನು ಅತ್ತಿತ್ತ ಹೊರಳಿಸುವುದು ಹೀಗೆ ಮಾಡಿದರೆ ಕಣ್ಣಿನ ಮೇಲೆ ಹೆಚ್ಚು ಒತ್ತಡ ಬೀಳುವುದಿಲ್ಲ.
* ವಿಟಮಿನ್ ಎ ಹೆಚ್ಚಿರುವ ಆಹಾರ ಸೇವನೆ ದೃಷ್ಟಿ ದೋಷ ಮತ್ತು ದೃಷ್ಟಿ ಕೊರತೆಯನ್ನು ನಿವಾರಿಸುತ್ತದೆ. ಹಸಿರು ತರಕಾರಿ, ಟೊಮೆಟೊ, ಸೋಯಾ, ಕಿತ್ತಳೆ, ಪರಂಗಿ, ಸೇಬು, ದ್ರಾಕ್ಷಿ ಕಣ್ಣಿಗೆ ಅಗತ್ಯ ಪೋಷಕಾಂಶವನ್ನು ಒದಗಿಸುತ್ತದೆ. ಇದರಿಂದ ಕಣ್ಣಿಗೆ ಸೋಂಕು ತಗುಲುವುದನ್ನೂ ತಡೆಯಲು ಸಹಕಾರಿಯಾಗುತ್ತದೆ. ಆದರೆ ಈ ಸಮಸ್ಯೆ ನಿರಂತರವಾದರೆ ತಕ್ಷಣವೇ ವೈದ್ಯರನ್ನು ಭೇಟಿ ಮಾಡುವುದು ಅವಶ್ಯಕ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications