Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಅಧಿಕ ದಪ್ಪ ತರುವುದು ನಾನಾ ತರಹದ ರೋಗ

ಕೆಳ ಹೊಟ್ಟೆಮತ್ತು ಸೊಂಟದಲ್ಲಿ ತುಂಬಿಕೊಳ್ಳುವ ಈ ಕೊಬ್ಬು ತುಂಬಾ ಚಟುವಟಿಕೆಯಿಂದ ಕೂಡಿದ್ದು ದೇಹದ ಆರೋಗ್ಯಕ್ಕೆ ಬೇಕಾದ ಹಾರ್ಮೋನ್ ಗಳ ಸಮತೋಲವನ್ನು ತಪ್ಪಿಸುತ್ತದೆ.
ಹೊಟ್ಟೆಯ ಅಧಿಕ ದಪ್ಪದಿಂದ ಈ ಕೆಳಗಿನ ತೊಂದರೆಗಳು ಹೆಚ್ಚಾಗಿ ಕಾಣಿಸುಕೊಳ್ಳುತ್ತವೆ.
1.ಹೃದಯದ ಕಾಯಿಲೆಗಳು: ಇದರಿಂದ ಹೆಚ್ಚಾಗಿ ಕಾಣಿಸಿಕೊಳ್ಳುವ ತೊಂದರೆ ಅಂದರೆ ಹೃದಯದ ಸಮಸ್ಯೆ. ಹೊಟ್ಟೆಯಲ್ಲಿ ಕೊಬ್ಬು ಕೊಲೆಸ್ಟ್ರಾಲ್ ಮತ್ತು ಟ್ರಿಗ್ಲಿ ಸಿರೈಡ್ ಈ ಎರಡು ಅಂಶಗಳು ಪಾರ್ಶ್ವವಾಯು ಬರಲು ಕಾರಣ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.
ಕರಳು ಸಕ್ಕರೆ ಅಂಶವನ್ನು ಕೊಬ್ಬಾಗಿ ಪರಿವರ್ತಿಸುತ್ತದೆ. ಆ ಕೊಬ್ಬು ಹೊಟ್ಟೆಯಲ್ಲಿ ಸಂಗ್ರಹವಾಗುತ್ತದೆ. ಇದರಿಂದ ಹೊಟ್ಟೆ ಮತ್ತು ಸೊಂಟದ ಭಾಗ ದಪ್ಪಗಾಗ ತೊಡುಗುತ್ತದೆ.
ತೂಕ ನಿಯಂತ್ರಣದ ಮಾಹಿತಿ ಜಾಲದ ಪ್ರಕಾರ ಗಂಡಸರ ಸೊಂಟದ ಸುತ್ತಳತೆ 45 ಇಂಚುಗಿಂತ ಜಾಸ್ತಿ ಇರಬಾರದು, ಹೆಂಗಸರ ಸುತ್ತಳತೆ 35 ಇಂಚಿಗಿಂತ ಜಾಸ್ತಿ ಇರಬಾರದು. ಇದಕ್ಕಿಂತ ಜಾಸ್ತಿ ಆಗದಂತೆ ವ್ಯಾಯಾಮವನ್ನು ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ.
2. ಸಕ್ಕರೆ ಕಾಯಿಲೆ: ಇದರಿಂದ ಬರುವ ಮತ್ತೊಂದು ಅಪಾಯಕಾರಿ ಕಾಯಿಲೆ ಅಂದರೆ ಮಧುಮೇಹ. ಈ ಕೊಬ್ಬು ದೇಹದಲ್ಲಿ ಇನ್ಸುಲಿನ್ ಉತ್ಪತ್ತಿಯನ್ನು ಕಡಿಮೆಮಾಡಿ, ಸಕ್ಕರೆ ಅಂಶವನ್ನು ಅಧಿಕ ಮಾಡಿಸುತ್ತದೆ. ಇದರಿಂದಾಗಿ ಸಕ್ಕರೆ ಕಾಯಿಲೆ ಉಂಟಾಗುತ್ತದೆ.
3. ಸ್ತನ ಕ್ಯಾನ್ಸರ್: ಹೊಟ್ಟೆ ಮತ್ತು ದೇಹದಲ್ಲಿ ಕೊಬ್ಬು ತುಂಬಿ ಕೊಂಡರೆ ಅದು ಅಧಿಕ ಈಸ್ಟ್ರೋಜನ್ ಅನ್ನು ಉತ್ಪತ್ತಿ ಮಾಡುತ್ತದೆ. ಇದು ಕ್ಯಾನ್ಸರ್ ಬರಲು ಮುಖ್ಯ ಕಾರಣ ಎಂಬುದಾಗಿ ಇತ್ತೀಚಿಕೆಗೆ ನಡೆಸಿದ ಸಮೀಕ್ಷೆಯಲ್ಲಿ ತಿಳಿದುಬಂದಿದೆ.
4. ನರಗಳು: ಈ ರೀತಿಯ ಕೊಬ್ಬು ನರಗಳಲ್ಲಿ ರಕ್ತ ಸಂಚಲನಕ್ಕೆ ಅಡಚಣೆಯನ್ನು ಉಂಟುಮಾಡುತ್ತದೆ. ಇದರ ನರಗಳಲ್ಲಿ ಶಕ್ತಿ ಕುಂದಲಾರಂಭಿಸುತ್ತವೆ. ಇದರಿಂದಾಗಿ ದೇಹದಲ್ಲಿ ರಕ್ತ ಹೆಪ್ಪುಗಟ್ಟಿ ಅನೇಕ ತೊಂದರೆಗಳನ್ನು ಉಂಟು ಮಾಡುತ್ತದೆ.
ಆದ್ದರಿಂದ ದೇಹದಲ್ಲಿ ಅಧಿಕ ಕೊಬ್ಬು ಸಂಗ್ರಹವಾಗದಂತೆ ಆಹಾರಕ್ರಮ, ವ್ಯಾಯಾಮಗಳನ್ನು ಮಾಡುವುದು ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications