Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
ಸರ್ವ ರೋಗಗಳಿಗೆ ಡಾಕ್ಟರ್ ಮನೆಯಲ್ಲೇ ಇದ್ದಾರೆ

ತುಳಸಿಯಲ್ಲಿ ಶಾಮ (ಕೃಷ್ಣ) ತುಳಸಿ ಮತ್ತು ರಾಮ ತುಳಸಿ ಎಂಬ ಎರಡು ವಿಧವಿದೆ. ರಾಮ ತುಳಸಿಗಿಂತ ಕೃಷ್ಣ ತುಳಸಿ ಹೆಚ್ಚು ಆರೋಗ್ಯಕರ ಅಂಶ ಪಡೆದುಕೊಂಡಿದೆ.
ತುಳಸಿಯಿಂದ ಆರೋಗ್ಯ ವೃದ್ಧಿ ಹೇಗೆ?
1. ಜ್ಞಾಪಕ ಶಕ್ತಿ ಹೆಚ್ಚುತ್ತದೆ: ಐದು ತುಳಸಿ ಎಲೆಯನ್ನು ಪ್ರತಿದಿನ ತಿಂದರೆ ಹಲವು ಸೋಂಕು ಮತ್ತು ರೋಗವನ್ನು ದೂರವಿರಿಸಬಹುದು. ಇದರ ಸೇವನೆಯಿಂದ ಜ್ಞಾಪಕ ಶಕ್ತಿಯೂ ಹೆಚ್ಚಾಗಿ ಬುದ್ಧಿವಂತಿಕೆಯೂ ಚುರುಕುಗೊಳ್ಳುತ್ತದೆ. ಇದನ್ನು ವಯಸ್ಸಾದವರು ಸೇವಿಸಿದರೆ ಸುಸ್ತು ಕಡಿಮೆಗೊಳ್ಳುತ್ತದೆ.
2. ರಕ್ತ ಶುದ್ಧೀಕರಣ: ತುಳಸಿ ಎಲೆ ರಕ್ತವನ್ನು ಶುದ್ಧೀಕರಣಗೊಳಿಸುತ್ತದೆ. ಇದು ಸೌಂದರ್ಯವನ್ನೂ ವೃದ್ಧಿಸುತ್ತದೆ.
3. ಹೊಳೆವ ತ್ವಚೆ: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ರಸವನ್ನು ನೀರಿನೊಂದಿಗೆ ಬೆರೆಸಿ ಸೇವಿಸಿದರೆ ತ್ವಚೆಯ ಸಾಂದ್ರತೆ ಹೆಚ್ಚಾಗುತ್ತದೆ.
4. ಜೀರ್ಣಕ್ರಿಯೆ: ತುಳಸಿಯನ್ನು ತಿಂದರೆ ಜೀರ್ಣಕ್ರಿಯೆ ಸಮರ್ಪಕವಾಗಿ ನಡೆಯಲು ಅನುವು ಮಾಡಿಕೊಡುತ್ತದೆ.
5. ವಾಂತಿ, ಪಿತ್ತ, ವಾಕರಿಕೆ: ತುಳಸಿ ತಿಂದರೆ ತಕ್ಷಣವೇ ವಾಂತಿ ವಾಕರಿಗೆ ನಿಂತು ಹೋಗುತ್ತದೆ. ಪಿತ್ತದ ಸಮಸ್ಯೆಯಿದ್ದವರೂ ಇದರಿಂದ ಪ್ರಯೋಜನ ಪಡೆದುಕೊಳ್ಳಬಹುದು.
6. ಕಿಡ್ನಿ ಕಲ್ಲಿನ ಸಮಸ್ಯೆ: ತುಳಸಿ ಎಲೆಯನ್ನು ತಿಂದರೆ ಕಿಡ್ನಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. ಕಿಡ್ನಿ ಕಲ್ಲಿನ ಸಮಸ್ಯೆಯಿಂದ ಬಳಲುತ್ತಿದ್ದವರು ತುಳಸಿ ಎಲೆ ಜೊತೆ ಜೇನನ್ನು ಬೆರೆಸಿ 6 ತಿಂಗಳು ನಿರಂತರವಾಗಿ ಕುಡಿದರೆ ಉತ್ತಮ ಫಲಿತಾಂಶ ದೊರೆಯುತ್ತದೆ.
7. ಆಸಿಡಿಟಿ, ಪೈಲ್ಸ್: ಆಸಿಡಿಟಿ ಮತ್ತು ಪೈಲ್ಸ್ ತೊಂದರೆಗೆ ತುತ್ತಾದವರು ತುಳಸಿ ಸೇವಿಸುವುದರಿಂದ ಕ್ರಮೇಣ ತೊಂದರೆಯನ್ನು ನಿವಾರಿಸಿಕೊಳ್ಳಬಹುದು. ಇದರಿಂದ ಚರ್ಮದ ಮೇಲಿನ ಬಿಳಿ ಮಚ್ಚೆಯೂ ಹೋಗುತ್ತದೆ.
8. ಕೊಲೆಸ್ಟ್ರಾಲ್: ತುಳಸಿ ಬೊಜ್ಜನ್ನು ನಿಯಂತ್ರಿಸುವುದಲ್ಲದೆ ರಕ್ತದಲ್ಲಿನ ಕೊಬ್ಬಿನಂಶವನ್ನೂ ನಿಯಂತ್ರಿಸುತ್ತದೆ. ಜ್ವರ, ಕೆಮ್ಮು ಮತ್ತು ಟಿಬಿ ರೋಗಿಗಳೂ 3 ಗ್ರಾಂ ತುಳಸಿಯನ್ನು ಪ್ರತಿನಿತ್ಯ ಸೇವಿಸಿದರೆ ಉಪಯೋಗ ಹೊಂದಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications