Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಸರ್ವ ರೋಗಗಳಿಗೆ ಡಾಕ್ಟರ್ ಮನೆಯಲ್ಲೇ ಇದ್ದಾರೆ

ತುಳಸಿಯಲ್ಲಿ ಶಾಮ (ಕೃಷ್ಣ) ತುಳಸಿ ಮತ್ತು ರಾಮ ತುಳಸಿ ಎಂಬ ಎರಡು ವಿಧವಿದೆ. ರಾಮ ತುಳಸಿಗಿಂತ ಕೃಷ್ಣ ತುಳಸಿ ಹೆಚ್ಚು ಆರೋಗ್ಯಕರ ಅಂಶ ಪಡೆದುಕೊಂಡಿದೆ.
ತುಳಸಿಯಿಂದ ಆರೋಗ್ಯ ವೃದ್ಧಿ ಹೇಗೆ?
1. ಜ್ಞಾಪಕ ಶಕ್ತಿ ಹೆಚ್ಚುತ್ತದೆ: ಐದು ತುಳಸಿ ಎಲೆಯನ್ನು ಪ್ರತಿದಿನ ತಿಂದರೆ ಹಲವು ಸೋಂಕು ಮತ್ತು ರೋಗವನ್ನು ದೂರವಿರಿಸಬಹುದು. ಇದರ ಸೇವನೆಯಿಂದ ಜ್ಞಾಪಕ ಶಕ್ತಿಯೂ ಹೆಚ್ಚಾಗಿ ಬುದ್ಧಿವಂತಿಕೆಯೂ ಚುರುಕುಗೊಳ್ಳುತ್ತದೆ. ಇದನ್ನು ವಯಸ್ಸಾದವರು ಸೇವಿಸಿದರೆ ಸುಸ್ತು ಕಡಿಮೆಗೊಳ್ಳುತ್ತದೆ.
2. ರಕ್ತ ಶುದ್ಧೀಕರಣ: ತುಳಸಿ ಎಲೆ ರಕ್ತವನ್ನು ಶುದ್ಧೀಕರಣಗೊಳಿಸುತ್ತದೆ. ಇದು ಸೌಂದರ್ಯವನ್ನೂ ವೃದ್ಧಿಸುತ್ತದೆ.
3. ಹೊಳೆವ ತ್ವಚೆ: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ರಸವನ್ನು ನೀರಿನೊಂದಿಗೆ ಬೆರೆಸಿ ಸೇವಿಸಿದರೆ ತ್ವಚೆಯ ಸಾಂದ್ರತೆ ಹೆಚ್ಚಾಗುತ್ತದೆ.
4. ಜೀರ್ಣಕ್ರಿಯೆ: ತುಳಸಿಯನ್ನು ತಿಂದರೆ ಜೀರ್ಣಕ್ರಿಯೆ ಸಮರ್ಪಕವಾಗಿ ನಡೆಯಲು ಅನುವು ಮಾಡಿಕೊಡುತ್ತದೆ.
5. ವಾಂತಿ, ಪಿತ್ತ, ವಾಕರಿಕೆ: ತುಳಸಿ ತಿಂದರೆ ತಕ್ಷಣವೇ ವಾಂತಿ ವಾಕರಿಗೆ ನಿಂತು ಹೋಗುತ್ತದೆ. ಪಿತ್ತದ ಸಮಸ್ಯೆಯಿದ್ದವರೂ ಇದರಿಂದ ಪ್ರಯೋಜನ ಪಡೆದುಕೊಳ್ಳಬಹುದು.
6. ಕಿಡ್ನಿ ಕಲ್ಲಿನ ಸಮಸ್ಯೆ: ತುಳಸಿ ಎಲೆಯನ್ನು ತಿಂದರೆ ಕಿಡ್ನಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. ಕಿಡ್ನಿ ಕಲ್ಲಿನ ಸಮಸ್ಯೆಯಿಂದ ಬಳಲುತ್ತಿದ್ದವರು ತುಳಸಿ ಎಲೆ ಜೊತೆ ಜೇನನ್ನು ಬೆರೆಸಿ 6 ತಿಂಗಳು ನಿರಂತರವಾಗಿ ಕುಡಿದರೆ ಉತ್ತಮ ಫಲಿತಾಂಶ ದೊರೆಯುತ್ತದೆ.
7. ಆಸಿಡಿಟಿ, ಪೈಲ್ಸ್: ಆಸಿಡಿಟಿ ಮತ್ತು ಪೈಲ್ಸ್ ತೊಂದರೆಗೆ ತುತ್ತಾದವರು ತುಳಸಿ ಸೇವಿಸುವುದರಿಂದ ಕ್ರಮೇಣ ತೊಂದರೆಯನ್ನು ನಿವಾರಿಸಿಕೊಳ್ಳಬಹುದು. ಇದರಿಂದ ಚರ್ಮದ ಮೇಲಿನ ಬಿಳಿ ಮಚ್ಚೆಯೂ ಹೋಗುತ್ತದೆ.
8. ಕೊಲೆಸ್ಟ್ರಾಲ್: ತುಳಸಿ ಬೊಜ್ಜನ್ನು ನಿಯಂತ್ರಿಸುವುದಲ್ಲದೆ ರಕ್ತದಲ್ಲಿನ ಕೊಬ್ಬಿನಂಶವನ್ನೂ ನಿಯಂತ್ರಿಸುತ್ತದೆ. ಜ್ವರ, ಕೆಮ್ಮು ಮತ್ತು ಟಿಬಿ ರೋಗಿಗಳೂ 3 ಗ್ರಾಂ ತುಳಸಿಯನ್ನು ಪ್ರತಿನಿತ್ಯ ಸೇವಿಸಿದರೆ ಉಪಯೋಗ ಹೊಂದಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
