Latest Updates
-
ಮಳೆಗಾಲದ ಮದುವೆ: ನಿಮ್ಮ ಸಂಭ್ರಮಕ್ಕೆ ಅಡ್ಡಿಯಾಗದಂತೆ ಪ್ಲಾನ್ ಮಾಡುವುದು ಹೇಗೆ? -
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್
ಸರ್ವ ರೋಗಗಳಿಗೆ ಡಾಕ್ಟರ್ ಮನೆಯಲ್ಲೇ ಇದ್ದಾರೆ

ತುಳಸಿಯಲ್ಲಿ ಶಾಮ (ಕೃಷ್ಣ) ತುಳಸಿ ಮತ್ತು ರಾಮ ತುಳಸಿ ಎಂಬ ಎರಡು ವಿಧವಿದೆ. ರಾಮ ತುಳಸಿಗಿಂತ ಕೃಷ್ಣ ತುಳಸಿ ಹೆಚ್ಚು ಆರೋಗ್ಯಕರ ಅಂಶ ಪಡೆದುಕೊಂಡಿದೆ.
ತುಳಸಿಯಿಂದ ಆರೋಗ್ಯ ವೃದ್ಧಿ ಹೇಗೆ?
1. ಜ್ಞಾಪಕ ಶಕ್ತಿ ಹೆಚ್ಚುತ್ತದೆ: ಐದು ತುಳಸಿ ಎಲೆಯನ್ನು ಪ್ರತಿದಿನ ತಿಂದರೆ ಹಲವು ಸೋಂಕು ಮತ್ತು ರೋಗವನ್ನು ದೂರವಿರಿಸಬಹುದು. ಇದರ ಸೇವನೆಯಿಂದ ಜ್ಞಾಪಕ ಶಕ್ತಿಯೂ ಹೆಚ್ಚಾಗಿ ಬುದ್ಧಿವಂತಿಕೆಯೂ ಚುರುಕುಗೊಳ್ಳುತ್ತದೆ. ಇದನ್ನು ವಯಸ್ಸಾದವರು ಸೇವಿಸಿದರೆ ಸುಸ್ತು ಕಡಿಮೆಗೊಳ್ಳುತ್ತದೆ.
2. ರಕ್ತ ಶುದ್ಧೀಕರಣ: ತುಳಸಿ ಎಲೆ ರಕ್ತವನ್ನು ಶುದ್ಧೀಕರಣಗೊಳಿಸುತ್ತದೆ. ಇದು ಸೌಂದರ್ಯವನ್ನೂ ವೃದ್ಧಿಸುತ್ತದೆ.
3. ಹೊಳೆವ ತ್ವಚೆ: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ರಸವನ್ನು ನೀರಿನೊಂದಿಗೆ ಬೆರೆಸಿ ಸೇವಿಸಿದರೆ ತ್ವಚೆಯ ಸಾಂದ್ರತೆ ಹೆಚ್ಚಾಗುತ್ತದೆ.
4. ಜೀರ್ಣಕ್ರಿಯೆ: ತುಳಸಿಯನ್ನು ತಿಂದರೆ ಜೀರ್ಣಕ್ರಿಯೆ ಸಮರ್ಪಕವಾಗಿ ನಡೆಯಲು ಅನುವು ಮಾಡಿಕೊಡುತ್ತದೆ.
5. ವಾಂತಿ, ಪಿತ್ತ, ವಾಕರಿಕೆ: ತುಳಸಿ ತಿಂದರೆ ತಕ್ಷಣವೇ ವಾಂತಿ ವಾಕರಿಗೆ ನಿಂತು ಹೋಗುತ್ತದೆ. ಪಿತ್ತದ ಸಮಸ್ಯೆಯಿದ್ದವರೂ ಇದರಿಂದ ಪ್ರಯೋಜನ ಪಡೆದುಕೊಳ್ಳಬಹುದು.
6. ಕಿಡ್ನಿ ಕಲ್ಲಿನ ಸಮಸ್ಯೆ: ತುಳಸಿ ಎಲೆಯನ್ನು ತಿಂದರೆ ಕಿಡ್ನಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. ಕಿಡ್ನಿ ಕಲ್ಲಿನ ಸಮಸ್ಯೆಯಿಂದ ಬಳಲುತ್ತಿದ್ದವರು ತುಳಸಿ ಎಲೆ ಜೊತೆ ಜೇನನ್ನು ಬೆರೆಸಿ 6 ತಿಂಗಳು ನಿರಂತರವಾಗಿ ಕುಡಿದರೆ ಉತ್ತಮ ಫಲಿತಾಂಶ ದೊರೆಯುತ್ತದೆ.
7. ಆಸಿಡಿಟಿ, ಪೈಲ್ಸ್: ಆಸಿಡಿಟಿ ಮತ್ತು ಪೈಲ್ಸ್ ತೊಂದರೆಗೆ ತುತ್ತಾದವರು ತುಳಸಿ ಸೇವಿಸುವುದರಿಂದ ಕ್ರಮೇಣ ತೊಂದರೆಯನ್ನು ನಿವಾರಿಸಿಕೊಳ್ಳಬಹುದು. ಇದರಿಂದ ಚರ್ಮದ ಮೇಲಿನ ಬಿಳಿ ಮಚ್ಚೆಯೂ ಹೋಗುತ್ತದೆ.
8. ಕೊಲೆಸ್ಟ್ರಾಲ್: ತುಳಸಿ ಬೊಜ್ಜನ್ನು ನಿಯಂತ್ರಿಸುವುದಲ್ಲದೆ ರಕ್ತದಲ್ಲಿನ ಕೊಬ್ಬಿನಂಶವನ್ನೂ ನಿಯಂತ್ರಿಸುತ್ತದೆ. ಜ್ವರ, ಕೆಮ್ಮು ಮತ್ತು ಟಿಬಿ ರೋಗಿಗಳೂ 3 ಗ್ರಾಂ ತುಳಸಿಯನ್ನು ಪ್ರತಿನಿತ್ಯ ಸೇವಿಸಿದರೆ ಉಪಯೋಗ ಹೊಂದಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications