Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಅಡುಗೆ ಮನೆಯಲ್ಲಿರುವ ಬೆಸ್ಟ್ ಔಷಧಿ ಯಾವುದು?

ಘಮಲು ಮಾತ್ರವಲ್ಲ, ತನ್ನದೇ ಔಷಧೀಯ ಗುಣವನ್ನೂ ಹೊಂದಿರುತ್ತದೆ. ಈ ಮಸಾಲೆ ಪದಾರ್ಥಗಳನ್ನು ಆಯುರ್ವೇದದಲ್ಲೂ ಹೆಚ್ಚು ಖ್ಯಾತಿ ಪಡೆದುಕೊಂಡಿವೆ. ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಔಷಧೀಯ ವಸ್ತುಗಳು ಯಾವುವು ಎಂದು ಇಲ್ಲಿ ತಿಳಿದುಕೊಳ್ಳಿ.
1. ಶುಂಠಿ: ಭಾರತೀಯ ಮಸಾಲೆ ಖಾದ್ಯಗಳಲ್ಲಿ ಶುಂಠಿಯಿಲ್ಲದೆ ರುಚಿಯೇ ಇರುವುದಿಲ್ಲ. ರಕ್ತ ಕಟ್ಟುವಿಕೆ ಮತ್ತು ಜ್ವರಕ್ಕೆ ಇದು ಒಳ್ಳೇ ಮದ್ದು. ತಲೆಸುತ್ತು ಮತ್ತು ಭೇದಿಯನ್ನೂ ಶುಂಠಿ ನಿವಾರಿಸುತ್ತದೆ.
2. ಅರಿಶಿಣ: ಕ್ಯಾನ್ಸರ್ ನಿವಾರಕ ಅಂಶ ಅರಿಶಿಣದಲ್ಲಿದೆ. ಅನೇಕ ರೋಗಗಳಿಗೆ ಅರಿಶಿಣ ಮದ್ದು. ಇದು ಬ್ಯಾಕ್ಟೀರಿಯಾ ಸೋಂಕನ್ನು ನಿವಾರಿಸುವುದಲ್ಲದೆ ಕ್ರಿಮಿಗಳನ್ನು ಕೊಲ್ಲುವ ಶಕ್ತಿ ಹೊಂದಿದೆ. ಅರಿಶಿಣ ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟ ಕಡಿಮೆಗೊಳಿಸಲೂ ಸೇವಿಸಬಹುದು. ಕೆಮ್ಮು, ನೆಗಡಿ ಶೀತಕ್ಕೆ ರಾಮಬಾಣ. ರಕ್ತ ನಾಳಗಳಲ್ಲಿ ಸೇರಿಕೊಳ್ಳುವ ಕ್ರಿಮಿಗಳನ್ನು ಅರಿಶಿಣ ಕೊಲ್ಲುವುದರಿಂದ ಹೊಳೆಯುವ ತ್ವಚೆಯನ್ನೂ ಪಡೆಯಬಹುದು.
3. ಮೆಂತ್ಯೆ: ಮೆಂತ್ಯೆ ಕಾಳಿನಲ್ಲಿ ವಿಟಮಿನ್ ಇ ಹೆಚ್ಚಿದೆ. ಕೂದಲಿನ ಬೆಳವಣಿಗೆಗೆ ಮೆಂತ್ಯೆ ತುಂಬಾ ಸಹಕಾರಿ. ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆಗೊಳಿಸಲು ಇದನ್ನು ಮಧುಮೇಹಿಗಳು ಸೇವಿಸುತ್ತಾರೆ. ಈ ಮೆಂತ್ಯೆ ಮ್ಯುಕೊಸಲ್ ಫ್ಲುಯಿಡ್ ಉತ್ಪಾದಿಸಿ ವಿಷಕಾರಿ ಮತ್ತು ಅಲರ್ಜಿಯನ್ನು ನಿವಾರಿಸುತ್ತದೆ. ಹೊಟ್ಟೆ ಸಂಬಂಧಿ ಸಮಸ್ಯೆಗಳಿಗೂ ಮೆಂತ್ಯೆ ಒಳ್ಳೆಯದು.
4. ಇಂಗು: ಜೀರ್ಣಕ್ರಿಯೆ ಸಮಸ್ಯೆಯಿದ್ದರೆ ಇಂಗು ಪರಿಣಾಮಕಾರಿ. ಉಸಿರಾಟದ ತೊಂದರೆ, ಅಸ್ತಮಾ ಮತ್ತು ಕೆಮ್ಮಿದ್ದವರಿಗೂ ಇಂಗಿನ ಸೇವನೆ ಇರಬೇಕು. ಇಂಗಿನ ಒಗರು ವಾಸನೆ ಬ್ಯಾಕ್ಟೀರಿಯಾ ಕೊಂದುಹಾಕುತ್ತದೆ.
5. ಜೀರಿಗೆ: ಜೀರಿಗೆಯನ್ನು ತಿನ್ನುವುದರಿಂದ ಜೀರ್ಣಕ್ರಿಯೆ ಚೆನ್ನಾಗಿ ನಡೆದು, ಅಸಿಡಿಟಿ ಮತ್ತು ಗ್ಯಾಸ್ ಸಮಸ್ಯೆಯನ್ನು ಹೋಗಿಸುತ್ತದೆ. ಇದರಲ್ಲಿ ಕಬ್ಬಿಣಾಂಶ ಮತ್ತು ಖನಿಕಾಂಶ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಪಿತ್ತವನ್ನೂ ನಿವಾರಿಸುತ್ತದೆ.
6. ಲವಂಗ: ಲವಂಗ ಬಾಯಿಯ ಸ್ವಾಸ್ಥ್ಯಕ್ಕೆ ಹೆಚ್ಚು ಉಪಯೋಗ. ಹಲ್ಲು ನೋವಿಗೆ ಮತ್ತು ಸಂಧಿವಾತಕ್ಕೆ ಲವಂಗದ ಎಣ್ಣೆಗಿಂತ ಬೇರೆ ಮದ್ದಿಲ್ಲ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications