Latest Updates
-
ಅಕ್ಷಯ ತೃತೀಯ: ಮದುವೆ ಮತ್ತು ಚಿನ್ನದ ಖರೀದಿಗೆ ಹೀಗೆ ಪ್ಲಾನ್ ಮಾಡಿ -
ಮನೆಯನ್ನು ತಂಪಾಗಿಡಲು ಹೀಟ್ವೇವ್ ಸಮಯದಲ್ಲಿ ಈ ಟ್ರಿಕ್ಸ್ ಫಾಲೋ ಮಾಡಿ -
ಮಾವಿನ ಹಣ್ಣು ಖರೀದಿಸುವ ಮುನ್ನ ಈ ತಪ್ಪು ಮಾಡಬೇಡಿ! -
ಅಕ್ಷಯ ತೃತೀಯ ಚಿನ್ನದ ಖರೀದಿ: ಈ ಆಫರ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಯಲ್ಲೂ ಫಿಟ್ ಆಗಿರಲು ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಷಯ ತೃತೀಯ: ಸಾಲದ ಸುಳಿಯಿಲ್ಲದೆ ಚಿನ್ನ ಖರೀದಿಸುವುದು ಹೇಗೆ? -
ಬಿಸಿಲಿನ ತಾಪ: ನಿಮ್ಮ ಮನೆಯನ್ನು ತಂಪಾಗಿಡಲು ಅದ್ಭುತ ಟಿಪ್ಸ್ -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ತಂಪು ಆಹಾರಗಳೇ ಮದ್ದು -
ಹಬ್ಬದ ಸೀರೆ ಫ್ಯಾಷನ್: ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿ ಎಚ್ಚರಿಕೆ: ಸುಡುವ ಬಿಸಿಲಿನಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಆಲೂಗೆಡ್ಡೆ ಸಿಪ್ಪೆಯಲ್ಲಿ ಏನೇನೇನೋ ಇದೆ

ಆಲೂಗೆಡ್ಡೆ ಸಿಪ್ಪೆಯನ್ನು ತೆಗೆಯದಿದ್ದರೆ ಅದರಲ್ಲಿರುವ ಮಣ್ಣು ಹೊಟ್ಟೆ ಸೇರುತ್ತದೆ ಎಂದು ಭಾವಿಸುವವರು ಗಮನಿಸಬೇಕಾದ ಅಂಶವೆಂದರೆ ಇನ್ನು ಮುಂದೆ ಸಿಪ್ಪೆ ತೆಗೆದು ಆಲೂಗೆಡ್ಡೆಯನ್ನು ತಿನ್ನುವ ಬದಲು, ಚೆನ್ನಾಗಿ ತೊಳೆದು ಸಿಪ್ಪೆ ಸಹಿತ ಬೇಹಿಸಿ ತಿನ್ನಿ. ಈ ರೀತಿ ತಿನ್ನುವುದರಿಂದ ಆಗುವ ಪ್ರಯೋಜನಗಳ ಕುರಿತು ತಿಳಿಯಲು ಮುಂದೆ ಓದಿ.
1.ಆಲೂಗೆಡ್ಡೆಯನ್ನು ಸಿಪ್ಪೆ ಸಹಿತ ಬೇಯಿಸಿ ತಿನ್ನವುದರಿಂದ ಇದರಲ್ಲಿರುವ ಅಧಿಕ ನಾರಿನಂಶ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ, ಇದನ್ನು ಇತರ ತರಕಾರಿ ಜೊತೆ ತಿನ್ನವುದರಿಂದ ಬೇರೆ ತರಕಾರಿಗಳು ಕೂಡ ಸುಲಭವಾಗಿ ಜೀರ್ಣವಾಗುವಂತೆ ಮಾಡುತ್ತದೆ.
2. ಆಲೂಗೆಡ್ಡೆ ಸಿಪ್ಪೆಯಲ್ಲಿ ವಿಟಮಿನ್ ಸಿ, ವಿಟಮಿನ್ ಬಿ6, ಪೊಟಾಷಿಯಂ, ತಾಮ್ರಾಂಶ, ಮ್ಯಾಗ್ನಿಷಿಯಂ ಮತ್ತು ನಾರಿನಂಶ ಅಧಿಕವಿರುತ್ತದೆ.
3. ಆಲೂಗೆಡ್ಡೆ ಸಿಪ್ಪೆಯಲ್ಲಿ 20% ಕಬ್ಬಿಣ ಮತ್ತು 8ಗ್ರಾಂ ಪ್ರೊಟೀನ್ ಇದ್ದು ಇತರ ತರಕಾರಿಗಳಿಗೆ ಹೋಲಿಸಿದರೆ ಆಲೂಗೆಡ್ಡೆ ಸಿಪ್ಪೆಯಲ್ಲಿ ಈ ಅಂಶಗಳು ಅಧಿಕವಿದೆ.
4. ಆಲೂಗೆಡ್ಡೆ ಸಿಪ್ಪೆ ಸೇವಿಸಿದರೆ ಹಾನಿಗೊಳಗಾದ ಜೀವ ಕಣಗಳನ್ನು ಮತ್ತೆ ಸರಿ ಪಡಿಸುವಂತೆ ಮಾಡುತ್ತದೆ.
ಆದರೆ ಆಲೂಗೆಡ್ಡೆ ಎಲ್ಲಾ ಅಹಾರಗಳ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಕರಿದ ಆಲೂಗೆಡ್ಡೆ ಕುರುಕುಲು ತಿಂಡಿ, ಇತರ ಕೊಬ್ಬಿನ ಪದಾರ್ಥಗಳ ಜೊತೆ ಸೇವಿಸುವುದು ಇವೆಲ್ಲವೂ ಹೃದಯ ಸಂಬಂಧಿ ಕಾಯಿಲೆಯನ್ನು ತರುತ್ತದೆ, ಆಲೂಗೆಡ್ಡೆಯನ್ನು ಸಿಪ್ಪೆ ಸಹಿತ ಬೇರೆ ತರೆಕಾರಿಗಳ ಜೊತೆ ಹಾಕಿ ಬೇಯಿಸಿ ತಿನ್ನವುದು ಆರೋಗ್ಯಕ್ಕೆ ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











