Latest Updates
-
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ!
ದೈಹಿಕ ಸಾಮರ್ಥ್ಯ ಹೆಚ್ಚಿಸುವ ನಾಲ್ಕು ಆಹಾರವಿದು

ಆದರೆ ಈ ಸಮಸ್ಯೆಗೆಂದು ಮಾತ್ರೆಗಳ ಮೊರೆಹೋಗುವ ಬದಲು ನೈಸರ್ಗಿಕವಾಗಿ ದೈಹಿಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ ಎಂದು ಇಲ್ಲಿ ತಿಳಿದುಕೊಳ್ಳಿ.
ನೈಸರ್ಗಿಕವಾಗಿ ಶಕ್ತಿ ಹೆಚ್ಚಿಸುವ ನಾಲ್ಕು ರೀತಿಯ ಆಹಾರ:
* ಓಟ್ ಮೀಲ್: ದಿನದ ಆರಂಭದಕ್ಕೆ ಓಟ್ ಮೀಲ್ ಸೂಕ್ತ ಆಹಾರ. ಓಟ್ ಮೀಲ್ ಬ್ರೇಕ್ ಫಾಸ್ಟ್ ನಿಮ್ಮನ್ನು ಹೆಚ್ಚು ಕಾಲ ಚುರುಕಾಗಿರುವಂತೆ ನೋಡಿಕೊಳ್ಳುತ್ತದೆ. ಓಟ್ ಮೀಲ್ ನಲ್ಲಿರುವ ಕಾರ್ಬೊಹೈಡ್ರೇಡ್ ಜೀರ್ಣಕ್ರಿಯೆ ನಿಧಾನಗೊಳಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಅಂಶವನ್ನು ಸಮತೋಲನದಲ್ಲಿರಿಸಿ ಶಕ್ತಿ ಹೆಚ್ಚು ಕಾಲ ದೇಹದಲ್ಲಿ ಉಳಿಯುವಂತೆ ಮಾಡುತ್ತದೆ.
* ಬಾಳೆಹಣ್ಣು: ಬೆಳಗ್ಗೆ 2 ಬಾಳೆಹಣ್ಣನ್ನು ತಿಂದು ಒಂದು ಲೋಟ ಹಾಲು ಕುಡಿದರೆ ಸಾಕು, ನಿಮ್ಮಲ್ಲಿ 8 ಗಂಟೆಗಳ ಕಾಲ ಚೈತನ್ಯ ತುಂಬಿರುವಂತೆ ನೋಡಿಕೊಳ್ಳುತ್ತದೆ. ಇದು ದೈಹಿಕ ಸುಸ್ತನ್ನೂ ಕಡಿಮೆಮಾಡುತ್ತದೆ. ಬಾಳೆಹಣ್ಣಿನಲ್ಲಿ ಸಕ್ಕರೆ ಅಂಶವಿರುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಹೆಚ್ಚಾಗಿ ಶಕ್ತಿ ನೀಡುತ್ತದೆ.
* ಕಡಲೆ ಬೀಜ: ಎಲ್ಲ ರೀತಿಯ ಬೀಜಗಳಲ್ಲಿ ದೇಹಕ್ಕೆ ಅಗತ್ಯವಾದ ಕೊಬ್ಬು, ನಾರಿನಂಶ, ಕ್ಯಾಲೊರಿ, ಪ್ರೊಟೀನ್ ಮತ್ತು ವಿಟಮಿನ್ ಕೊಡುತ್ತವೆ. ಹಸಿವೆನಿಸಿದಾಗಲೆಲ್ಲಾ ಬಾದಾಮಿ, ಕಡಲೆ ಬೀಜಗಳನ್ನು ಬಾಯಿಗೆ ಹಾಕಿಕೊಳ್ಳುತ್ತಿದ್ದರೆ ದೇಹಕ್ಕೆ ಬೇಗನೆ ಶಕ್ತಿ ಬರುತ್ತದೆ. ಇವುಗಳನ್ನು ಮೊಸರಿನೊಂದಿಗೂ ತಿಂದರೆ ತ್ವಚೆಯೂ ಹೆಚ್ಚು ಕಾಲ ಸುಂದರವಾಗಿರುತ್ತೆ.
* ಬೀಟ್ ರೂಟ್ : ಬೀಟ್ ರೂಟ್ ದೇಹಕ್ಕೆ ಶಕ್ತಿ ಒದಗಿಸುವ ಆಹಾರ. ಇದರಲ್ಲಿ ವಿಟಮಿನ್ ಎ, ಸಿ ಹೇರಳವಾಗಿರುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನವಿದೆ. ಇದನ್ನು ಹಸಿಯಾಗೇ ತಿನ್ನಬಹುದು ಅಥವಾ ಜ್ಯೂಸ್ ನಂತೆಯೂ ಸೇವಿಸಬಹುದು. ಇದರಿಂದ ಬಿಪಿ ಕೂಡ ನಿಯಂತ್ರಣಕ್ಕೆ ಬರುತ್ತದೆ.
ಈ ನಾಲ್ಕು ಆಹಾರಗಳನ್ನು ಸೇವಿಸುತ್ತಿದ್ದರೆ ದಿನವಿಡೀ ಚೈತನ್ಯದಿಂದಿರಲು ಸಹಾಯ ಮಾಡುತ್ತದೆ. ಆದರೆ ಅತಿಯಾದರೆ ಅಮೃತವೂ ವಿಷವೆಂಬಂತೆ ಹೆಚ್ಚಾಗಿ ತಿಂದರೆ ಜೀರ್ಣಕ್ರಿಯೆಗೆ ಶಕ್ತಿ ಹೆಚ್ಚು ವ್ಯಯವಾಗಿ ಸೋಮಾರಿಯನ್ನಾಗಿಸುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications