Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದೈಹಿಕ ಸಾಮರ್ಥ್ಯ ಹೆಚ್ಚಿಸುವ ನಾಲ್ಕು ಆಹಾರವಿದು

ಆದರೆ ಈ ಸಮಸ್ಯೆಗೆಂದು ಮಾತ್ರೆಗಳ ಮೊರೆಹೋಗುವ ಬದಲು ನೈಸರ್ಗಿಕವಾಗಿ ದೈಹಿಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ ಎಂದು ಇಲ್ಲಿ ತಿಳಿದುಕೊಳ್ಳಿ.
ನೈಸರ್ಗಿಕವಾಗಿ ಶಕ್ತಿ ಹೆಚ್ಚಿಸುವ ನಾಲ್ಕು ರೀತಿಯ ಆಹಾರ:
* ಓಟ್ ಮೀಲ್: ದಿನದ ಆರಂಭದಕ್ಕೆ ಓಟ್ ಮೀಲ್ ಸೂಕ್ತ ಆಹಾರ. ಓಟ್ ಮೀಲ್ ಬ್ರೇಕ್ ಫಾಸ್ಟ್ ನಿಮ್ಮನ್ನು ಹೆಚ್ಚು ಕಾಲ ಚುರುಕಾಗಿರುವಂತೆ ನೋಡಿಕೊಳ್ಳುತ್ತದೆ. ಓಟ್ ಮೀಲ್ ನಲ್ಲಿರುವ ಕಾರ್ಬೊಹೈಡ್ರೇಡ್ ಜೀರ್ಣಕ್ರಿಯೆ ನಿಧಾನಗೊಳಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಅಂಶವನ್ನು ಸಮತೋಲನದಲ್ಲಿರಿಸಿ ಶಕ್ತಿ ಹೆಚ್ಚು ಕಾಲ ದೇಹದಲ್ಲಿ ಉಳಿಯುವಂತೆ ಮಾಡುತ್ತದೆ.
* ಬಾಳೆಹಣ್ಣು: ಬೆಳಗ್ಗೆ 2 ಬಾಳೆಹಣ್ಣನ್ನು ತಿಂದು ಒಂದು ಲೋಟ ಹಾಲು ಕುಡಿದರೆ ಸಾಕು, ನಿಮ್ಮಲ್ಲಿ 8 ಗಂಟೆಗಳ ಕಾಲ ಚೈತನ್ಯ ತುಂಬಿರುವಂತೆ ನೋಡಿಕೊಳ್ಳುತ್ತದೆ. ಇದು ದೈಹಿಕ ಸುಸ್ತನ್ನೂ ಕಡಿಮೆಮಾಡುತ್ತದೆ. ಬಾಳೆಹಣ್ಣಿನಲ್ಲಿ ಸಕ್ಕರೆ ಅಂಶವಿರುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಹೆಚ್ಚಾಗಿ ಶಕ್ತಿ ನೀಡುತ್ತದೆ.
* ಕಡಲೆ ಬೀಜ: ಎಲ್ಲ ರೀತಿಯ ಬೀಜಗಳಲ್ಲಿ ದೇಹಕ್ಕೆ ಅಗತ್ಯವಾದ ಕೊಬ್ಬು, ನಾರಿನಂಶ, ಕ್ಯಾಲೊರಿ, ಪ್ರೊಟೀನ್ ಮತ್ತು ವಿಟಮಿನ್ ಕೊಡುತ್ತವೆ. ಹಸಿವೆನಿಸಿದಾಗಲೆಲ್ಲಾ ಬಾದಾಮಿ, ಕಡಲೆ ಬೀಜಗಳನ್ನು ಬಾಯಿಗೆ ಹಾಕಿಕೊಳ್ಳುತ್ತಿದ್ದರೆ ದೇಹಕ್ಕೆ ಬೇಗನೆ ಶಕ್ತಿ ಬರುತ್ತದೆ. ಇವುಗಳನ್ನು ಮೊಸರಿನೊಂದಿಗೂ ತಿಂದರೆ ತ್ವಚೆಯೂ ಹೆಚ್ಚು ಕಾಲ ಸುಂದರವಾಗಿರುತ್ತೆ.
* ಬೀಟ್ ರೂಟ್ : ಬೀಟ್ ರೂಟ್ ದೇಹಕ್ಕೆ ಶಕ್ತಿ ಒದಗಿಸುವ ಆಹಾರ. ಇದರಲ್ಲಿ ವಿಟಮಿನ್ ಎ, ಸಿ ಹೇರಳವಾಗಿರುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನವಿದೆ. ಇದನ್ನು ಹಸಿಯಾಗೇ ತಿನ್ನಬಹುದು ಅಥವಾ ಜ್ಯೂಸ್ ನಂತೆಯೂ ಸೇವಿಸಬಹುದು. ಇದರಿಂದ ಬಿಪಿ ಕೂಡ ನಿಯಂತ್ರಣಕ್ಕೆ ಬರುತ್ತದೆ.
ಈ ನಾಲ್ಕು ಆಹಾರಗಳನ್ನು ಸೇವಿಸುತ್ತಿದ್ದರೆ ದಿನವಿಡೀ ಚೈತನ್ಯದಿಂದಿರಲು ಸಹಾಯ ಮಾಡುತ್ತದೆ. ಆದರೆ ಅತಿಯಾದರೆ ಅಮೃತವೂ ವಿಷವೆಂಬಂತೆ ಹೆಚ್ಚಾಗಿ ತಿಂದರೆ ಜೀರ್ಣಕ್ರಿಯೆಗೆ ಶಕ್ತಿ ಹೆಚ್ಚು ವ್ಯಯವಾಗಿ ಸೋಮಾರಿಯನ್ನಾಗಿಸುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications