Latest Updates
-
ಮಳೆಗಾಲದಲ್ಲಿ ದಂಪತಿಗಳ ಬಾಂಧವ್ಯ ಗಟ್ಟಿಯಾಗಬೇಕೆ? ಮದುವೆ ಮತ್ತು ಬಜೆಟ್ ಪ್ಲಾನಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ದೆಹಲಿ ನೀರಿನ ಬಿಕ್ಕಟ್ಟು: ಮನೆಯಲ್ಲಿ ನೀರು ಉಳಿಸಿ, ಗಿಡಗಳನ್ನು ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಡೈರಿ ಉತ್ಪನ್ನಗಳ ಸ್ಮಾರ್ಟ್ ಆಯ್ಕೆ: ವಿಶ್ವ ಹಾಲು ದಿನದ ವಿಶೇಷ ಸಲಹೆಗಳು -
ಬೆಂಗಳೂರು ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಿ, ಸ್ಟೈಲಿಶ್ ಆಗಿ ಕಾಣಲು ಈ ವೈರಲ್ ಟಿಪ್ಸ್ ಮಿಸ್ ಮಾಡ್ಬೇಡಿ! -
ವಿಶ್ವ ಸೈಕಲ್ ದಿನ: ಫಿಟ್ನೆಸ್ ಕಾಯ್ದುಕೊಳ್ಳಲು ಮತ್ತು ಸುರಕ್ಷಿತ ಸೈಕ್ಲಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
ಲಿವರ್ ಗಟ್ಟಿಗೊಳಿಸುವ ರೀತಿ ಇಲ್ಲಿದೆ ನೋಡಿ

ದೇಹದಲ್ಲಿನ ಕಲ್ಮಶವನ್ನು ಹೊರಹಾಕುವುದು, ಜೀರ್ಣಕ್ರಿಯೆ ಸರಾಗಗೊಳಿಸುವುದು, ಮುಂತಾದ ಅತ್ಯಗತ್ಯ ಕಾರ್ಯ ನಿರ್ವಹಿಸುವ ಲಿವರ್ ಗೂ ಕೆಲವೊಮ್ಮೆ ತೊಂದರೆ ಉಂಟಾಗುತ್ತದೆ. ಹಿಪಟೆಟಿಸ್ ಎ, ಬಿ, ಸಿ ಮತ್ತು ಡಿ ಎಂಬ ಸಮಸ್ಯೆ ಲಿವರ್ ಗೆ ತಗುಲುತ್ತದೆ.
ಆದ್ದರಿಂದ ಪಿತ್ತಜನಕಾಂಗವನ್ನು ಆರೋಗ್ಯವಾಗಿಡಲು ಕೆಲವು ಮಾರ್ಗವನ್ನು ಇಲ್ಲಿ ನೀಡಲಾಗಿದೆ. ಮದ್ಯ ತ್ಯಜನೆ ಮತ್ತು ಸೂಕ್ತ ವ್ಯಾಯಾಮದೊಂದಿಗೆ ಕೆಲವು ಆಹಾರ ವಿಧಾನ ಅನುಸರಿಸಿದರೆ ಲಿವರನ್ನು ಆರೋಗ್ಯವಾಗಿಟ್ಟುಕೊಳ್ಳಬಹುದು. ಆ ಆಹಾರಗಳಾವುದೆಂದು ಇಲ್ಲಿ ತಿಳಿದುಕೊಳ್ಳಿ.
ಲಿವರ್ ಆರೋಗ್ಯವಾಗಿಡಲು ಯಾವ ಆಹಾರ ಸೇವನೆ ಮುಖ್ಯ?
* ಸೇಬು ಮತ್ತು ಬೀಟ್ ರೂಟ್: ಸೇಬಿನಲ್ಲಿರುವ ಪೆಕ್ಟಿನ್ ಎಂಬ ಅಂಶ ದೇಹದಲ್ಲಿನ ವಿಷಕಾರಿ ಅಂಶಗಳನ್ನು ತೊಡೆದುಹಾಕುವಲ್ಲಿ ಹೆಚ್ಚು ಸಹಕಾರಿ. ಇದು ದೊಡ್ಡ ಕರುಳನ್ನು ಶುದ್ಧಗೊಳಿಸಲೂ ಅನುವಾಗುತ್ತದೆ. ಆದ್ದರಿಂದ ಪ್ರತಿ ದಿನ ಸೇಬನ್ನು ತಿಂದರೆ ವಿಷಕಾರಿ ಅಂಶಗಳನ್ನು ದೇಹದಿಂದ ಹೊರಹಾಕಲು ಸಹಾಯ ಮಾಡುತ್ತದೆ ಜೊತೆಗೆ ಲಿವರ್ ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ಬೀಟ್ ರೂಟ್ ನಲ್ಲಿಯೂ ದೇಹದಲ್ಲಿರುವ ವಿಷಕಾರಿ ಅಂಶವನ್ನು ಹೀರಿಕೊಳ್ಳುವ ವಿಶೇಷ ಗುಣವಿದೆ.
* ಕಹಿ ತರಕಾರಿ: ಚಿಕೋರಿ, ಕಾಡು ಸೇವಂತಿ, ಹಾಗಲಕಾಯಿ ಮುಂತಾದ ತರಕಾರಿಗಳು ತೇಗನ್ನು ನಿಯಂತ್ರಿಸಿ ಲಿವರನ್ನು ಆರೋಗ್ಯವಾಗಿಡಲು ಸಹಕಾರಿಯಾಗಿದೆ.
* ಬೆಳ್ಳುಳ್ಳಿ: ಬೆಳ್ಳುಳ್ಳಿಯಲ್ಲಿನ ಅಲಿಸಿನ್ ಅಂಶ ಲಿವರ್ ನಲ್ಲಿ ಸೇರಿಕೊಳ್ಳುವ ವಿಷಕಾರಿ ಪದಾರ್ಥಗಳನ್ನು ನಿವಾರಿಸುತ್ತದೆ. ಆದ್ದರಿಂದ ಬೆಳ್ಳುಳ್ಳಿಯನ್ನು ಆಹಾರದಲ್ಲಿ ಹೆಚ್ಚು ಬಳಸಿದರೆ ಒಳಿತು. ಇದರಿಂದ ದೈಹಿಕ ಸಾಮರ್ಥ್ಯವೂ ಹೆಚ್ಚುತ್ತದೆ ಮತ್ತುರೋಗನಿರೋಧಕ ಶಕ್ತಿಯನ್ನು ದ್ವಿಗುಣಗೊಳಿಸುತ್ತದೆ.
* ನಿಂಬೆ ಪಾನೀಯ: ನಿಂಬೆರಸ ಪಿತ್ತಜನಕಾಂಗವನ್ನು ಆರೋಗ್ಯವಾಗಿಡುವ ಪಾನೀಯ. ಬಿಸಿ ನೀರಿನೊಂದಿಗೆ ನಿಂಬೆ ರಸ ಬೆರೆಸಿ ಬೆಳಗ್ಗಿನ ಜಾವ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಹೊಟ್ಟೆ ಶುದ್ಧವಾಗಿರುತ್ತದೆ ಮತ್ತು ಲಿವರ್ ಕಾರ್ಯ ವೈಖರಿಗೂ ಸಹಾಯ ಮಾಡುತ್ತದೆ.
* ಆಂಟಿಯಾಕ್ಸಿಡಂಟ್: ವಿಷಕಾರಿ ಅಂಶಗಳನ್ನು ದೇಹದಿಂದ ಹೊರಕ್ಕೆ ತೆಗೆದು ಹಾಕುವಲ್ಲಿ ಆಂಟಿಯಾಕ್ಸಿಡಂಟ್ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಆಂಟಿಯಾಕ್ಸಿಡಂಟ್ ಹೇರಳವಾಗಿರುವ ಸೇಬು, ಸ್ಟ್ರಾಬೆರಿ, ದ್ರಾಕ್ಷಿ, ಖರ್ಬೂಜದ ಹಣ್ಣನ್ನು ತಿನ್ನುತ್ತಿರಬೇಕು.
* ಮೊಳಕೆ ಕಾಳು: ಎಲೆ ಕೋಸು, ಹೂ ಕೋಸು, ಮೊಳಕೆ ಒಡೆದ ಕಾಳುಗಳು ಸಿಗರೇಟ್ ಸೇವನೆಯಿಂದ ದೇಹದಲ್ಲಿ ಸೇರಿಕೊಳ್ಳುವ ವಿಷಕಾರಿ ಅಂಶಗಳ ಕೆಟ್ಟ ಪರಿಣಾಮವನ್ನು ಸ್ವಲ್ಪ ಮಟ್ಟಿಗೆ ಕಡಿಮೆಮಾಡುತ್ತದೆ. ತರಕಾರಿಗಳಲ್ಲಿ ಲಿವರ್ ಕಾರ್ಯ ವೈಖರಿಗೆ ಸಹಾಯ ಮಾಡುವ ಗ್ಲೂಕೊಸಿನೋಲೇಟ್ ಇರುವುದರಿಂದ ಆಹಾರದಲ್ಲಿ ಹೆಚ್ಚು ತರಕಾರಿಗಳ ಬಳಕೆಯಿರಬೇಕು.
* ನಾರಿನಂಶದ ಆಹಾರ: ಅನ್ನ, ದವಸ ಧಾನ್ಯಗಳು, ಹಣ್ಣು ಮತ್ತು ಕೆಲವು ತರಕಾರಿಗಳಲ್ಲಿ ನಾರಿನಂಶ ಹೇರಳವಾಗಿದೆ. ಆದ್ದರಿಂದ ಹೆಚ್ಚು ಫೈಬರ್ ಅಂಶವನ್ನು ಒಳಗೊಂಡಿರುವ ಆಹಾರ ಪದಾರ್ಥಗಳನ್ನು ಹೆಚ್ಚು ಸೇವಿಸಿದಷ್ಟೂ ಒಳ್ಳೆಯದು.
ಲಿವರ್ ಕಾರ್ಯ ವೈಖರಿಗೆ ಸಹಾಯಕವಾಗುವ ಈ ಆಹಾರಗಳ ಹೊರತಾಗಿಯೂ ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ಥಿರವಾಗಿರಬೇಕೆಂದರೆ ವ್ಯಾಯಾಮವೂ ತುಂಬಾ ಮುಖ್ಯ. ವ್ಯಾಯಾಮದೊಂದಿಗೆ ಉತ್ತಮ ಆಹಾರ ಪದ್ಧತಿ ಅನುಸರಿಸಿದರೆ ದೇಹ ಸದೃಢವಾಗಿರುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications