Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಹೆಚ್ಚು ಶಕ್ತಿ ಬೇಕೆಂದರೆ ಈ ಜ್ಯೂಸ್ ಕುಡಿಯಿರಿ

ಮನೆಯಲ್ಲೇ ತಯಾರಿಸಬಹುದಾದ ಶಕ್ತಿ ವರ್ಧಕ ಪಾನೀಯ:
* ಬಾಳೆಹಣ್ಣಿನ ಜ್ಯೂಸ್: ಬಾಳೆಹಣ್ಣು ತಕ್ಷಣವೇ ಶಕ್ತಿ ಒದಗಿಸುವ ಹಣ್ಣು. ಇದು ಹಲವು ಗಂಟೆಗಳ ಕಾಲ ನಿಮ್ಮನ್ನು ಚುರುಕಾಗಿರುವಂತೆ ನೋಡಿಕೊಳ್ಳುತ್ತದೆ. ಬಾಳೆಹಣ್ಣಿನ ಜ್ಯೂಸನ್ನು ಸೇವಿಸಿದರೆ ಸುಸ್ತು ಕಡಿಮೆಯಾಗಿ ಶಕ್ತಿ ತುಂಬುತ್ತದೆ. ಬಾಳೆಹಣ್ಣಿನಲ್ಲಿ ವಿಟಮಿನ್, ಖನಿಜಾಂಶ, ಪೊಟಾಶಿಯಂ, ಫಾಸ್ಪರಸ್ ಮುಂತಾದ ಅಂಶ ದೈಹಿಕ ಶಕ್ತಿಯನ್ನು ದ್ವಿಗುಣಗೊಳಿಸುತ್ತದೆ.
* ಆಪಲ್ ಶೇಕ್: ಸೇಬು ಶಕ್ತಿಯುತ ಹಣ್ಣು. ಇದು ನಿಮ್ಮನ್ನು ಚಟುವಟಿಕೆಯಿಂದ ಕೂಡಿರುವಂತೆ ಮತ್ತು ಆರೋಗ್ಯಕರವಾಗಿರುವಂತೆ ನೋಡಿಕೊಳ್ಳುತ್ತದೆ. ಸೇಬನ್ನು ಹಾಲಿನೊಂದಿಗೆ ಬೆರೆಸಿ ಕುಡಿದರೆ ಇದಕ್ಕಿಂತ ಒಳ್ಳೆಯ ಶಕ್ತಿವರ್ಧಕ ಪಾನೀಯವಿಲ್ಲ. ತಣ್ಣಗಿನ ಆಪಲ್ ಶೇಕ್ ಮನಸ್ಸು ಮತ್ತು ದೇಹವನ್ನು ರಿಲ್ಯಾಕ್ಸ್ ಆಗಿಸಿ ಇಡೀ ದಿನ ಚೈತನ್ಯದಿಂದಿರುವಂತೆ ನೋಡಿಕೊಳ್ಳುತ್ತದೆ.
* ಬಾರ್ಲೆ ಪಾನೀಯ: ಬಾರ್ಲೆಯಲ್ಲಿರುವ ಅಮಿನೊ ಆಸಿಡ್ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದಕ್ಕೆ ಕೆಲವು ಹನಿ ಜೇನು ಮತ್ತು ನಿಂಬೆರಸ ಸೇವಿಸಿದರೆ ದೇಹದ ತೂಕ ಕಡಿಮೆಯಾಗುವುದಲ್ಲದೆ ಅಗತ್ಯ ನೀರಿನಂಶವನ್ನು ನೀಡುತ್ತದೆ. ಮೂಳೆ ನೋವು ಇದ್ದರೆ ಇದರೊಂದಿಗೆ ಶುಂಠಿ ಬೆರೆಸಿ ಕುಡಿದರೆ ನೋವು ನಿವಾರಣೆಯಾಗುತ್ತದೆ.
* ನೀರಿನೊಂದಿಗೆ ಜೇನು: ಸ್ವಲ್ಪ ಬಿಸಿ ನೀರಿನಲ್ಲಿ ಕೆಲವು ಹನಿ ಜೇನು ಬೆರೆಸಿ ಕುಡಿದರೆ ತಕ್ಷಣವೇ ಶಕ್ತಿ ಬರುವುದಲ್ಲದೆ ಬೊಜ್ಜನ್ನೂ ಕರಗಿಸುತ್ತದೆ. ಡಯಟ್ ಮಾಡುವವರಿಗೆ ಈ ಪಾನೀಯ ಹೆಚ್ಚು ಸೂಕ್ತ. ಸೋಯಾ ಹಾಲಿನೊಂದಿಗೆ ಜೇನನ್ನು ಬೆರೆಸಿ ಕುಡಿದರೂ ಶಕ್ತಿಯನ್ನು ಪಡೆಯಬಹುದು.
* ಕ್ಯಾರೆಟ್ ಜ್ಯೂಸ್: ಕ್ಯಾರೆಟ್ ನಲ್ಲಿ ವಿಟಮಿನ್ ಮತ್ತು ಖನಿಜಾಂಶ ಹೇರಳವಾಗಿದೆ. ಕ್ಯಾರೆಟ್ ಜ್ಯೂಸ್ ದೇಹದ ಜೀರ್ಣಕ್ರಿಯೆಯನ್ನು ಸರಾಗಗೊಳಿಸಿ ಸುಸ್ತನ್ನು ನಿವಾರಿಸುತ್ತದೆ. ಇದರೊಂದಿಗೆ ಮೊಟ್ಟೆ ಹಳದಿ ಭಾಗವನ್ನು ಸೇರಿಸಿ ಕುಡಿದರೆ ಸೋಮಾರಿತನ ನಿವಾರಣೆಯಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
