Latest Updates
-
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ? -
ಬೇಕರಿ ಸ್ಟೈಲ್ ಕಚೋರಿ ರೆಸಿಪಿ.. ಮನೆಯಲ್ಲೇ ಈ 4 ಟೇಸ್ಟಿ ಕಚೋರಿ ಮಾಡಿ! ಹೊಸಬರಿಗೆ ಕೂಡ ಸುಲಭ -
ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರ! ಪ್ರಣಯ ಜೀವನವು ಸುಖಮಯ -
March 11 Horoscope: ಪ್ರಯಾಣಗಳಲ್ಲಿ ನಿಮಗೆ ಶುಭವಿಲ್ಲ! ಅಪಾಯದ ಮುನ್ಸೂಚನೆ! -
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ!
ಕತ್ತೆ ತರಹ ದುಡಿದರೆ ಕೆಟ್ಟು ಹೋದಿರಿ ಜೋಕೆ

ಕಾಲಿಗೆ ಚಕ್ರ ಕಟ್ಟಿದಂತಹ ಜೀವನದಿಂದಾಗಿ ಅವನು ಜೀವನದ ಅನೇಕ ಸಂತೋಷದ ಕ್ಷಣಗಳನ್ನು ಕಳೆದುಕೊಳ್ಳುತ್ತಿದ್ದಾನೆ ಅನಿಸುತ್ತದೆ. ಇತ್ತೀಚಿಗೆ ಅವನನ್ನು ನೋಡಿದಾಗ ತುಂಬಾ ಸೊರಗಿದಂತೆ ಕಾಣುತ್ತಿದ್ದ, ಕಾರಣ ಕೇಳಿದಾಗ ಕೆಲಸದ ಒತ್ತಡ ಅಂದ. ಯಶಸ್ವಿಗೆ ಕಠಿಣ ಪರಿಶ್ರಮ ಅಗತ್ಯ. ಹಾಗಂತ ವಿಶ್ರಾಂತಿಯಿಲ್ಲದ ಜೀವನ ದೇಹದ ಆರೋಗ್ಯವನ್ನು ಹದಗೆಡುಸುತ್ತದೆ. ಅಧಿಕ ಕೆಲಸದ ಒತ್ತಡದಿಂದ ಆರೋಗ್ಯದ ಮೇಲೆ ಹತ್ತು ಹಲವು ಕೆಟ್ಟ ಪರಿಣಾಮಗಳು ಉಂಟಾಗುತ್ತವೆ.
1. ನಿದ್ರಾ ಹೀನತೆ: ದೇಹದ ಆರೋಗ್ಯಕ್ಕೆ 6 ಗಂಟೆ ನಿದ್ರೆ ಅವಶ್ಯಕ. ಕೆಲಸದ ಒತ್ತಡವಿದ್ದರೆ ಮಲಗಿದ್ದರೂ ನಿದ್ರೆ ಬರುವುದಿಲ್ಲ. ಅಲ್ಲದಿದ್ದರೆ ಅತಿ ಕಡಿಮೆ ನಿದ್ರೆ ಮಾಡುವುದು ಇವುಗಳಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ.
2. ಜ್ಞಾಪಕ ಶಕ್ತಿ ಕುಂದುವುದು: ಅಧಿಕ ಒತ್ತಡದಿಂದ ಮೆದುಳಿನ ನೆನಪಿನ ಶಕ್ತಿ ಕುಂದುತ್ತದೆ. ಜ್ಞಾಪಕ ಶಕ್ತಿ ಹೆಚ್ಚಲು ನಿದ್ರೆ ಅವಶ್ಯಕ. ಇಲ್ಲದಿದ್ದರೆ ಮೆದುಳಿನ ಗ್ರಹಿಸುವ ಮತ್ತು ನೆನಪಿನ ಶಕ್ತಿ ಕುಂದುವುದು.
3. ಅಜಾಗರೂಕತೆ: ಬೆಲೆಬಾಳುವ ವಸ್ತು ಅಥವಾ ಡಾಕ್ಯೂಮೆಂಟ್ ಮುಂತಾದವುಗಳನ್ನು ಜೋಪಾನವಾಗಿ ತೆಗೆದು ಇಡದಿರುವುದು ಕೆಲವರ ಸ್ವಾಭಾವಿಕ ಗುಣ. ಆದರೆ ವಿಶ್ರಾಂತಿಯಿಲ್ಲದೆ ದುಡಿಯುವವರಿಗೆ ವಸ್ತುಗಳನ್ನು ಎಲ್ಲಿ ಇಟ್ಟದ್ದೇವೆ ಎಂದು ತಕ್ಷಣ ನೆನಪಿಗೆ ಬರುವುದದಿಲ್ಲ. ಅಲ್ಲದೆ ಡೋರ್ ಹಾಗೆ ತೆರೆದಿಟ್ಟು ಹೋಗುವುದು, ಅತ್ಯಾವಶ್ಯಕವಾದ ಡಾಕ್ಯೂಮೆಂಟ್ ಮರೆತು ಹೋಗುವುದು ಅವೆಲ್ಲಾ ಲಕ್ಷಣಗಳು ಕಾಣಿಸಿಕೊಂಡರೆ ದೇಹದ ಆರೋಗ್ಯ ಹದಗೆಟ್ಟಿದೆ ಎಂದು ಅರ್ಥ.
4. ಅಜೀರ್ಣ: ಅಧಿಕ ಕೆಲಸ ಒತ್ತಡದಿಂದಾಗಿ ಸರಿಯಾದ ಹೊತ್ತಿನಲ್ಲಿ ಊಟ ಮಾಡದಿರುವುದರಿಂದ ಜೀರ್ಣಕ್ರಿಯೆಯಲ್ಲಿ ತೊಂದರೆ ಉಂಟಾಗುತ್ತದೆ. ಇದರಿಂದ ಎಷ್ಟೇ ಪ್ರಿಯವಾದ ಆಹಾರ ಕೂಡ ಬೇಡ ಅನಿಸುತ್ತದೆ.
5. ಆರೋಗ್ಯಕರವಲ್ಲದ ತಿಂಡಿಗಳ ಸೇವನೆ: ಕೆಲಸ ಮಾಡುತ್ತಿರುವಾಗ ಏನಾದರೂ ತಿನ್ನಬೇಕೆಂದು ಅನಿಸುವುದು ಸಹಜ. ಆಗ ಕುರುಕಲು ತಿಂಡಿಗಳನ್ನು ಸೇವಿಸುವುದರಿಂದ ದೇಹದ ಆರೋಗ್ಯ ಮತ್ತಷ್ಟು ಹಾಳಾಗುತ್ತದೆ.
6. ಸಂಸಾರದಲ್ಲಿ ಬಿರುಕು: ಅಧಿಕ ಒತ್ತಡದಿಂದಾಗಿ ತೀವ್ರ ದಣಿವು ಆಗುವುದರಿಂದ ದಾಂಪತ್ಯ ಜೀವನದಲ್ಲೂ ಆಸಕ್ತಿ ಕುಂದಲಾರಂಭಿಸುತ್ತದೆ. ಇದರಿಂದ ದಂಪತಿಗಳ ನಡುವೆ ಭಾಂದವ್ಯ ಕಡಿಮೆಯಾಗಲು ಕೂಡ ಒಂದು ಕಾರಣವಾಗಿದೆ.
7. ರಕ್ತದೊತ್ತಡ: ವಿಶ್ರಾಂತಿಯಿಲ್ಲದೆ ಕೆಲಸ ಮಾಡುವುದರಿಂದ ರಕ್ತದೊತ್ತಡದಲ್ಲಿ ವ್ಯತ್ಯಾಸ ಉಂಟಾಗುತ್ತದೆ. ರಕ್ತದೊತ್ತಡ ಅಧಿಕವಾದಷ್ಟು ತಾಳ್ಮೆ ಕಡಿಮೆಯಾಗಿ ಸಣ್ಣ-ಪುಟ್ಟ ವಿಷಯಕ್ಕೂ ಕೋಪ ಬರುತ್ತದೆ. ಇದರಿಂದಾಗಿ ಮನ ನೆಮ್ಮದಿ ಕೂಡ ಹಾಳಾಗುತ್ತದೆ.
ಟೆನ್ಷನ್ ಮಾಡಿಕೊಂಡು ಕೆಲಸ ಮಾಡುವುದಕ್ಕಿಂತ ಸಾವಧಾನವಾಗಿ ಕೆಲಸ ಮಾಡುವುದು ಮುಖ್ಯ. ಮನಸ್ಸಿಗೂ ದೇಹಕ್ಕೂ ಆಗಾಗ ವಿಶ್ರಾಂತಿ ಕೊಡುತ್ತ ಕೆಲಸ ಮಾಡಬೇಕು. ಇದರಿಂದ ಕೆಲಸದ ದಕ್ಷತೆಯೂ ಹೆಚ್ಚುತ್ತದೆ. ಆರೋಗ್ಯವೂ ಉಳಿಯುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











