Latest Updates
-
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ!
ಮುಂಜಾನೆಯೇ ಕಣ್ ಕತ್ತಲೆ ಬಂದರೆ ನಿರ್ಲಕ್ಷ್ಯ ಬೇಡ!

ಬೆಳಿಗ್ಗೆ ಎದ್ದ ತಕ್ಷಣ ಕಣ್ ಮಂಜಾಗಿ ಬಿದ್ದು ಬಿಡುವುದು. ಸ್ವಲ್ಪ ಹೊತ್ತಿನ ನಂತರ ಎಚ್ಚರ ಆದಾಗ ಏನಾಯಿತು ಎಂದು ಅವರಿಗೇ ಗೊತ್ತಿರುವುದಿಲ್ಲ. ಇದನ್ನೇ ಬ್ಲಾಕ್ಡ್ ಔಟ್ ಅಥವಾ ಕಣ್ ಮಂಜಾಗುವುದು ಅಂತ ಹೇಳುವುದು. ಈ ರೀತಿ ಉಂಟಾಗಲು ಕಾರಣದ ಬಗ್ಗೆ ತಿಳಿಯಲು ಮುಂದೆ ಓದಿ.
1. ಮದ್ಯಪಾನ: ರಾತ್ರಿ ಮಿತಿ ಮೀರಿ ಕುಡಿದರೆ ಬೆಳಗ್ಗೆ ಏಳುವಾಗ ಅದರ ಮಬ್ಬು ಇನ್ನೂ ಇರುತ್ತದೆ. ರಾತ್ರಿಯಲ್ಲಿ ಕುಡಿತದಿಂದ ವಾಂತಿಯಾಗಿದ್ದರೆ ದೇಹದ ಶಕ್ತಿ ಮತ್ತಷ್ಟು ಕಡಿಮೆಯಾಗಿರುತ್ತದೆ. ಈ ರೀತಿಯಾದಾಗ ಬೆಳಗ್ಗೆ ಎದ್ದ ಕೂಡಲೇ ಕಣ್ ಕತ್ತಲೆ ಬರುವುದು, ಹಿಂದಿನ ರಾತ್ರಿಯ ಬಗ್ಗೆ ಏನೂ ತಕ್ಷಣ ನೆನಪಿಗೆ ಬರದೆ ತಾತ್ಕಾಲಿಕ ಮರೆವು ಉಂಟಾಗುತ್ತದೆ.
2. ಕಡಿಮೆ ರಕ್ತದೊತ್ತಡ: ದೇಹದಲ್ಲಿ ರಕ್ತದೊತ್ತಡ ಕಡಿಮೆಯಾದಾಗ ಕಣ್ಣು ಮಂಜಾಗಿ ಪ್ರಜ್ಞಾಹೀನರಾಗುತ್ತಾರೆ. ಊಟ ಸರಿಯಾಗಿ ಮಾಡದಿದ್ದರೆ, ಪೌಷ್ಠಿಕ ಆಹಾರದ ಕೊರತೆಯಿದ್ದರೆ, ಉಪವಾಸ ಇವುಗಳಿಂದ ರಕ್ತಸಂಚಲನದಲ್ಲಿ ವ್ಯತ್ಯಾಸ ಉಂಟಾಗಿ ಕಣ್ಣು ಕತ್ತಲಾಗುವುದು.
3. ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗುವುದು: ದೇಹದಲ್ಲಿ ಸಕ್ಕರೆ ಅಂಶ ಜಾಸ್ತಿಯದರೂ ತೊಂದರೆ, ಕಡಿಮೆಯಾದರೂ ತೊಂದರೆ. ಆರೋಗ್ಯವಾಗಿರಲು ಸಕ್ಕರೆ ಅಂಶ ಸಮಪ್ರಮಾಣದಲ್ಲಿರ ಬೇಕು. ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾದರೂ ತುಂಬಾ ಚಳಿಯಾಗುವುದರ ಜೊತೆಗೆ ಕಣ್ಣಿಗೆ ಕತ್ತಲೆ ಆವರಿಸುತ್ತದೆ. ಮೆದುಳಿಗೆ ಸಕ್ಕರೆ ಅಂಶ ಪೂರೈಕೆಯಾಗದಿದ್ದರೆ ಈ ರೀತಿ ಉಂಟಾಗುತ್ತದೆ. ಆದ್ದರಿಂದ ಈ ರೀತಿ ಲಕ್ಷಣ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.
4. ಒತ್ತಡ: ತುಂಬಾ ಮಾನಸಿಕ ಒತ್ತಡ ಅನುಭವಿಸಿದಾಗ ಹಾರ್ಮೋನ್ ಗಳಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಇದರಿಂದ ಕೂಡ ತಲೆಸುತ್ತು ಬರುತ್ತದೆ.
5. ಬಿಗಿಯಾದ ಉಡುಪು ಧರಿಸುವುದು: ತುಂಬಾ ಬಿಗಿಯಾದ ಉಡುಪು ಧರಿಸಿದಾಗ ದೇಹಕ್ಕೆ ಆಮ್ಲಜನಕದ ಪೂರೈಕೆ ಸರಿಯಾಗಿ ಆಗುವುದಿಲ್ಲ. ಇದರಿಂದ ಕೂಡ ತಲೆಸುತ್ತು ಉಂಟಾಗುವುದು.
ಬೆಳಗ್ಗೆ ಎದ್ದಾಗ ಕಣ್ ಮಂಜಾಗುವ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣ ವೈದ್ಯರ ಸಲಹೆಗಳನ್ನು ಪಡೆಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications