Latest Updates
-
ಕಾನ್ 2026 ರೆಡ್ ಕಾರ್ಪೆಟ್ನಲ್ಲಿ ಭಾರತೀಯ ತಾರೆಯರ ಮಿಂಚಿನ ಸಂಚಲನ: ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ!
ಮುಂಜಾನೆಯೇ ಕಣ್ ಕತ್ತಲೆ ಬಂದರೆ ನಿರ್ಲಕ್ಷ್ಯ ಬೇಡ!

ಬೆಳಿಗ್ಗೆ ಎದ್ದ ತಕ್ಷಣ ಕಣ್ ಮಂಜಾಗಿ ಬಿದ್ದು ಬಿಡುವುದು. ಸ್ವಲ್ಪ ಹೊತ್ತಿನ ನಂತರ ಎಚ್ಚರ ಆದಾಗ ಏನಾಯಿತು ಎಂದು ಅವರಿಗೇ ಗೊತ್ತಿರುವುದಿಲ್ಲ. ಇದನ್ನೇ ಬ್ಲಾಕ್ಡ್ ಔಟ್ ಅಥವಾ ಕಣ್ ಮಂಜಾಗುವುದು ಅಂತ ಹೇಳುವುದು. ಈ ರೀತಿ ಉಂಟಾಗಲು ಕಾರಣದ ಬಗ್ಗೆ ತಿಳಿಯಲು ಮುಂದೆ ಓದಿ.
1. ಮದ್ಯಪಾನ: ರಾತ್ರಿ ಮಿತಿ ಮೀರಿ ಕುಡಿದರೆ ಬೆಳಗ್ಗೆ ಏಳುವಾಗ ಅದರ ಮಬ್ಬು ಇನ್ನೂ ಇರುತ್ತದೆ. ರಾತ್ರಿಯಲ್ಲಿ ಕುಡಿತದಿಂದ ವಾಂತಿಯಾಗಿದ್ದರೆ ದೇಹದ ಶಕ್ತಿ ಮತ್ತಷ್ಟು ಕಡಿಮೆಯಾಗಿರುತ್ತದೆ. ಈ ರೀತಿಯಾದಾಗ ಬೆಳಗ್ಗೆ ಎದ್ದ ಕೂಡಲೇ ಕಣ್ ಕತ್ತಲೆ ಬರುವುದು, ಹಿಂದಿನ ರಾತ್ರಿಯ ಬಗ್ಗೆ ಏನೂ ತಕ್ಷಣ ನೆನಪಿಗೆ ಬರದೆ ತಾತ್ಕಾಲಿಕ ಮರೆವು ಉಂಟಾಗುತ್ತದೆ.
2. ಕಡಿಮೆ ರಕ್ತದೊತ್ತಡ: ದೇಹದಲ್ಲಿ ರಕ್ತದೊತ್ತಡ ಕಡಿಮೆಯಾದಾಗ ಕಣ್ಣು ಮಂಜಾಗಿ ಪ್ರಜ್ಞಾಹೀನರಾಗುತ್ತಾರೆ. ಊಟ ಸರಿಯಾಗಿ ಮಾಡದಿದ್ದರೆ, ಪೌಷ್ಠಿಕ ಆಹಾರದ ಕೊರತೆಯಿದ್ದರೆ, ಉಪವಾಸ ಇವುಗಳಿಂದ ರಕ್ತಸಂಚಲನದಲ್ಲಿ ವ್ಯತ್ಯಾಸ ಉಂಟಾಗಿ ಕಣ್ಣು ಕತ್ತಲಾಗುವುದು.
3. ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗುವುದು: ದೇಹದಲ್ಲಿ ಸಕ್ಕರೆ ಅಂಶ ಜಾಸ್ತಿಯದರೂ ತೊಂದರೆ, ಕಡಿಮೆಯಾದರೂ ತೊಂದರೆ. ಆರೋಗ್ಯವಾಗಿರಲು ಸಕ್ಕರೆ ಅಂಶ ಸಮಪ್ರಮಾಣದಲ್ಲಿರ ಬೇಕು. ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾದರೂ ತುಂಬಾ ಚಳಿಯಾಗುವುದರ ಜೊತೆಗೆ ಕಣ್ಣಿಗೆ ಕತ್ತಲೆ ಆವರಿಸುತ್ತದೆ. ಮೆದುಳಿಗೆ ಸಕ್ಕರೆ ಅಂಶ ಪೂರೈಕೆಯಾಗದಿದ್ದರೆ ಈ ರೀತಿ ಉಂಟಾಗುತ್ತದೆ. ಆದ್ದರಿಂದ ಈ ರೀತಿ ಲಕ್ಷಣ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.
4. ಒತ್ತಡ: ತುಂಬಾ ಮಾನಸಿಕ ಒತ್ತಡ ಅನುಭವಿಸಿದಾಗ ಹಾರ್ಮೋನ್ ಗಳಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಇದರಿಂದ ಕೂಡ ತಲೆಸುತ್ತು ಬರುತ್ತದೆ.
5. ಬಿಗಿಯಾದ ಉಡುಪು ಧರಿಸುವುದು: ತುಂಬಾ ಬಿಗಿಯಾದ ಉಡುಪು ಧರಿಸಿದಾಗ ದೇಹಕ್ಕೆ ಆಮ್ಲಜನಕದ ಪೂರೈಕೆ ಸರಿಯಾಗಿ ಆಗುವುದಿಲ್ಲ. ಇದರಿಂದ ಕೂಡ ತಲೆಸುತ್ತು ಉಂಟಾಗುವುದು.
ಬೆಳಗ್ಗೆ ಎದ್ದಾಗ ಕಣ್ ಮಂಜಾಗುವ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣ ವೈದ್ಯರ ಸಲಹೆಗಳನ್ನು ಪಡೆಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications