Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಮುಂಜಾನೆಯೇ ಕಣ್ ಕತ್ತಲೆ ಬಂದರೆ ನಿರ್ಲಕ್ಷ್ಯ ಬೇಡ!

ಬೆಳಿಗ್ಗೆ ಎದ್ದ ತಕ್ಷಣ ಕಣ್ ಮಂಜಾಗಿ ಬಿದ್ದು ಬಿಡುವುದು. ಸ್ವಲ್ಪ ಹೊತ್ತಿನ ನಂತರ ಎಚ್ಚರ ಆದಾಗ ಏನಾಯಿತು ಎಂದು ಅವರಿಗೇ ಗೊತ್ತಿರುವುದಿಲ್ಲ. ಇದನ್ನೇ ಬ್ಲಾಕ್ಡ್ ಔಟ್ ಅಥವಾ ಕಣ್ ಮಂಜಾಗುವುದು ಅಂತ ಹೇಳುವುದು. ಈ ರೀತಿ ಉಂಟಾಗಲು ಕಾರಣದ ಬಗ್ಗೆ ತಿಳಿಯಲು ಮುಂದೆ ಓದಿ.
1. ಮದ್ಯಪಾನ: ರಾತ್ರಿ ಮಿತಿ ಮೀರಿ ಕುಡಿದರೆ ಬೆಳಗ್ಗೆ ಏಳುವಾಗ ಅದರ ಮಬ್ಬು ಇನ್ನೂ ಇರುತ್ತದೆ. ರಾತ್ರಿಯಲ್ಲಿ ಕುಡಿತದಿಂದ ವಾಂತಿಯಾಗಿದ್ದರೆ ದೇಹದ ಶಕ್ತಿ ಮತ್ತಷ್ಟು ಕಡಿಮೆಯಾಗಿರುತ್ತದೆ. ಈ ರೀತಿಯಾದಾಗ ಬೆಳಗ್ಗೆ ಎದ್ದ ಕೂಡಲೇ ಕಣ್ ಕತ್ತಲೆ ಬರುವುದು, ಹಿಂದಿನ ರಾತ್ರಿಯ ಬಗ್ಗೆ ಏನೂ ತಕ್ಷಣ ನೆನಪಿಗೆ ಬರದೆ ತಾತ್ಕಾಲಿಕ ಮರೆವು ಉಂಟಾಗುತ್ತದೆ.
2. ಕಡಿಮೆ ರಕ್ತದೊತ್ತಡ: ದೇಹದಲ್ಲಿ ರಕ್ತದೊತ್ತಡ ಕಡಿಮೆಯಾದಾಗ ಕಣ್ಣು ಮಂಜಾಗಿ ಪ್ರಜ್ಞಾಹೀನರಾಗುತ್ತಾರೆ. ಊಟ ಸರಿಯಾಗಿ ಮಾಡದಿದ್ದರೆ, ಪೌಷ್ಠಿಕ ಆಹಾರದ ಕೊರತೆಯಿದ್ದರೆ, ಉಪವಾಸ ಇವುಗಳಿಂದ ರಕ್ತಸಂಚಲನದಲ್ಲಿ ವ್ಯತ್ಯಾಸ ಉಂಟಾಗಿ ಕಣ್ಣು ಕತ್ತಲಾಗುವುದು.
3. ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗುವುದು: ದೇಹದಲ್ಲಿ ಸಕ್ಕರೆ ಅಂಶ ಜಾಸ್ತಿಯದರೂ ತೊಂದರೆ, ಕಡಿಮೆಯಾದರೂ ತೊಂದರೆ. ಆರೋಗ್ಯವಾಗಿರಲು ಸಕ್ಕರೆ ಅಂಶ ಸಮಪ್ರಮಾಣದಲ್ಲಿರ ಬೇಕು. ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾದರೂ ತುಂಬಾ ಚಳಿಯಾಗುವುದರ ಜೊತೆಗೆ ಕಣ್ಣಿಗೆ ಕತ್ತಲೆ ಆವರಿಸುತ್ತದೆ. ಮೆದುಳಿಗೆ ಸಕ್ಕರೆ ಅಂಶ ಪೂರೈಕೆಯಾಗದಿದ್ದರೆ ಈ ರೀತಿ ಉಂಟಾಗುತ್ತದೆ. ಆದ್ದರಿಂದ ಈ ರೀತಿ ಲಕ್ಷಣ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.
4. ಒತ್ತಡ: ತುಂಬಾ ಮಾನಸಿಕ ಒತ್ತಡ ಅನುಭವಿಸಿದಾಗ ಹಾರ್ಮೋನ್ ಗಳಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಇದರಿಂದ ಕೂಡ ತಲೆಸುತ್ತು ಬರುತ್ತದೆ.
5. ಬಿಗಿಯಾದ ಉಡುಪು ಧರಿಸುವುದು: ತುಂಬಾ ಬಿಗಿಯಾದ ಉಡುಪು ಧರಿಸಿದಾಗ ದೇಹಕ್ಕೆ ಆಮ್ಲಜನಕದ ಪೂರೈಕೆ ಸರಿಯಾಗಿ ಆಗುವುದಿಲ್ಲ. ಇದರಿಂದ ಕೂಡ ತಲೆಸುತ್ತು ಉಂಟಾಗುವುದು.
ಬೆಳಗ್ಗೆ ಎದ್ದಾಗ ಕಣ್ ಮಂಜಾಗುವ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣ ವೈದ್ಯರ ಸಲಹೆಗಳನ್ನು ಪಡೆಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications