Latest Updates
-
ದೆಹಲಿ-ಎನ್ಸಿಆರ್ ಮಳೆ ಎಚ್ಚರಿಕೆ: ಹೊರಗೆ ಹೋಗುವ ಬದಲು ಮನೆಯಲ್ಲೇ ಮಾಡಿ 12 ನಿಮಿಷದ ವರ್ಕೌಟ್! -
ಸೆಪ್ಟೆಂಬರ್ 15ರ ಲವ್ ರಾಶಿಫಲ: ನಿಮ್ಮ ಸಂಗಾತಿಯ ಮನ ಗೆಲ್ಲಲು ಈ 2 ನಿಮಿಷದ ಸೂತ್ರ ಬಳಸಿ! -
ಮಳೆಗಾಲದ ಎಚ್ಚರಿಕೆ: ಮುಂಬೈ-ಪುಣೆಯಲ್ಲಿ ಮನೆ ಸೋರಿಕೆ ತಡೆಯಲು 30 ನಿಮಿಷದ ಸಿಂಪಲ್ ಟಿಪ್ಸ್ -
ಅಡುಗೆಮನೆ ಬಜೆಟ್ ಏರಿಕೆ: ₹30 ಕ್ಕಿಂತ ಕಡಿಮೆ ವೆಚ್ಚದಲ್ಲಿ ಆರೋಗ್ಯಕರ ಪ್ರೋಟೀನ್ ಆಹಾರ ಪಡೆಯುವುದು ಹೇಗೆ? -
iOS 27 ಅಪ್ಡೇಟ್ ನಂತರ ಫೋನ್ ಬ್ಯಾಟರಿ ಬೇಗ ಖಾಲಿಯಾಗುತ್ತಿದೆಯೇ? ಗಾಬರಿಯಾಗಬೇಡಿ, ಈ ಟಿಪ್ಸ್ ಫಾಲೋ ಮಾಡಿ! -
ಗಣೇಶ ವಿಸರ್ಜನೆ: ಮೂರ್ತಿ ಹೊರುವಾಗ ಬೆನ್ನು ನೋವು ಕಾಡದಿರಲು ಈ ಸರಳ ಟಿಪ್ಸ್ ಪಾಲಿಸಿ -
ಸಣ್ಣ ಫ್ಲ್ಯಾಟ್ನಲ್ಲಿ ಗಣೇಶೋತ್ಸವ: ಅತಿಥಿಗಳಿಗಾಗಿ ಜಾಗ ಮತ್ತು ಸುರಕ್ಷತೆಗಾಗಿ ಈ 5 ಟಿಪ್ಸ್ ಫಾಲೋ ಮಾಡಿ -
ಗಣೇಶೋತ್ಸವದ ಪ್ರಸಾದ ಬೇಗ ಹಾಳಾಗುತ್ತಿದೆಯೇ? ಮೋದಕ ಮತ್ತು ಸಿಹಿ ತಿಂಡಿಗಳನ್ನು ತಾಜಾವಾಗಿಡಲು ಈ ಟಿಪ್ಸ್ ಪಾಲಿಸಿ! -
ಗಣೇಶೋತ್ಸವ 2026: ಲಾಲ್ಬಾಗ್ಚಾ ರಾಜನ ದರ್ಶನಕ್ಕೆ ಬೆಸ್ಟ್ ಟೈಮ್ ಯಾವುದು? ಮೆಟ್ರೋ ಮತ್ತು ಲೈವ್ ಅಪ್ಡೇಟ್ಸ್ ಇಲ್ಲಿದೆ! -
ಹಬ್ಬದ ಪೂಜೆಯ ವೇಳೆ ಮೊಣಕಾಲು ಮತ್ತು ಬೆನ್ನು ನೋವು ಕಾಡುತ್ತಿದೆಯೇ? ನೋವಿಲ್ಲದೆ ಪೂಜೆ ಮಾಡಲು ಇಲ್ಲಿದೆ 10 ನಿಮಿಷಗಳ ಸಿಂಪಲ್ ಟಿಪ್ಸ್!
ಮುಂಜಾನೆಯೇ ಕಣ್ ಕತ್ತಲೆ ಬಂದರೆ ನಿರ್ಲಕ್ಷ್ಯ ಬೇಡ!

ಬೆಳಿಗ್ಗೆ ಎದ್ದ ತಕ್ಷಣ ಕಣ್ ಮಂಜಾಗಿ ಬಿದ್ದು ಬಿಡುವುದು. ಸ್ವಲ್ಪ ಹೊತ್ತಿನ ನಂತರ ಎಚ್ಚರ ಆದಾಗ ಏನಾಯಿತು ಎಂದು ಅವರಿಗೇ ಗೊತ್ತಿರುವುದಿಲ್ಲ. ಇದನ್ನೇ ಬ್ಲಾಕ್ಡ್ ಔಟ್ ಅಥವಾ ಕಣ್ ಮಂಜಾಗುವುದು ಅಂತ ಹೇಳುವುದು. ಈ ರೀತಿ ಉಂಟಾಗಲು ಕಾರಣದ ಬಗ್ಗೆ ತಿಳಿಯಲು ಮುಂದೆ ಓದಿ.
1. ಮದ್ಯಪಾನ: ರಾತ್ರಿ ಮಿತಿ ಮೀರಿ ಕುಡಿದರೆ ಬೆಳಗ್ಗೆ ಏಳುವಾಗ ಅದರ ಮಬ್ಬು ಇನ್ನೂ ಇರುತ್ತದೆ. ರಾತ್ರಿಯಲ್ಲಿ ಕುಡಿತದಿಂದ ವಾಂತಿಯಾಗಿದ್ದರೆ ದೇಹದ ಶಕ್ತಿ ಮತ್ತಷ್ಟು ಕಡಿಮೆಯಾಗಿರುತ್ತದೆ. ಈ ರೀತಿಯಾದಾಗ ಬೆಳಗ್ಗೆ ಎದ್ದ ಕೂಡಲೇ ಕಣ್ ಕತ್ತಲೆ ಬರುವುದು, ಹಿಂದಿನ ರಾತ್ರಿಯ ಬಗ್ಗೆ ಏನೂ ತಕ್ಷಣ ನೆನಪಿಗೆ ಬರದೆ ತಾತ್ಕಾಲಿಕ ಮರೆವು ಉಂಟಾಗುತ್ತದೆ.
2. ಕಡಿಮೆ ರಕ್ತದೊತ್ತಡ: ದೇಹದಲ್ಲಿ ರಕ್ತದೊತ್ತಡ ಕಡಿಮೆಯಾದಾಗ ಕಣ್ಣು ಮಂಜಾಗಿ ಪ್ರಜ್ಞಾಹೀನರಾಗುತ್ತಾರೆ. ಊಟ ಸರಿಯಾಗಿ ಮಾಡದಿದ್ದರೆ, ಪೌಷ್ಠಿಕ ಆಹಾರದ ಕೊರತೆಯಿದ್ದರೆ, ಉಪವಾಸ ಇವುಗಳಿಂದ ರಕ್ತಸಂಚಲನದಲ್ಲಿ ವ್ಯತ್ಯಾಸ ಉಂಟಾಗಿ ಕಣ್ಣು ಕತ್ತಲಾಗುವುದು.
3. ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗುವುದು: ದೇಹದಲ್ಲಿ ಸಕ್ಕರೆ ಅಂಶ ಜಾಸ್ತಿಯದರೂ ತೊಂದರೆ, ಕಡಿಮೆಯಾದರೂ ತೊಂದರೆ. ಆರೋಗ್ಯವಾಗಿರಲು ಸಕ್ಕರೆ ಅಂಶ ಸಮಪ್ರಮಾಣದಲ್ಲಿರ ಬೇಕು. ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾದರೂ ತುಂಬಾ ಚಳಿಯಾಗುವುದರ ಜೊತೆಗೆ ಕಣ್ಣಿಗೆ ಕತ್ತಲೆ ಆವರಿಸುತ್ತದೆ. ಮೆದುಳಿಗೆ ಸಕ್ಕರೆ ಅಂಶ ಪೂರೈಕೆಯಾಗದಿದ್ದರೆ ಈ ರೀತಿ ಉಂಟಾಗುತ್ತದೆ. ಆದ್ದರಿಂದ ಈ ರೀತಿ ಲಕ್ಷಣ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.
4. ಒತ್ತಡ: ತುಂಬಾ ಮಾನಸಿಕ ಒತ್ತಡ ಅನುಭವಿಸಿದಾಗ ಹಾರ್ಮೋನ್ ಗಳಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಇದರಿಂದ ಕೂಡ ತಲೆಸುತ್ತು ಬರುತ್ತದೆ.
5. ಬಿಗಿಯಾದ ಉಡುಪು ಧರಿಸುವುದು: ತುಂಬಾ ಬಿಗಿಯಾದ ಉಡುಪು ಧರಿಸಿದಾಗ ದೇಹಕ್ಕೆ ಆಮ್ಲಜನಕದ ಪೂರೈಕೆ ಸರಿಯಾಗಿ ಆಗುವುದಿಲ್ಲ. ಇದರಿಂದ ಕೂಡ ತಲೆಸುತ್ತು ಉಂಟಾಗುವುದು.
ಬೆಳಗ್ಗೆ ಎದ್ದಾಗ ಕಣ್ ಮಂಜಾಗುವ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣ ವೈದ್ಯರ ಸಲಹೆಗಳನ್ನು ಪಡೆಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
