Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಮುಂಜಾನೆಯೇ ಕಣ್ ಕತ್ತಲೆ ಬಂದರೆ ನಿರ್ಲಕ್ಷ್ಯ ಬೇಡ!

ಬೆಳಿಗ್ಗೆ ಎದ್ದ ತಕ್ಷಣ ಕಣ್ ಮಂಜಾಗಿ ಬಿದ್ದು ಬಿಡುವುದು. ಸ್ವಲ್ಪ ಹೊತ್ತಿನ ನಂತರ ಎಚ್ಚರ ಆದಾಗ ಏನಾಯಿತು ಎಂದು ಅವರಿಗೇ ಗೊತ್ತಿರುವುದಿಲ್ಲ. ಇದನ್ನೇ ಬ್ಲಾಕ್ಡ್ ಔಟ್ ಅಥವಾ ಕಣ್ ಮಂಜಾಗುವುದು ಅಂತ ಹೇಳುವುದು. ಈ ರೀತಿ ಉಂಟಾಗಲು ಕಾರಣದ ಬಗ್ಗೆ ತಿಳಿಯಲು ಮುಂದೆ ಓದಿ.
1. ಮದ್ಯಪಾನ: ರಾತ್ರಿ ಮಿತಿ ಮೀರಿ ಕುಡಿದರೆ ಬೆಳಗ್ಗೆ ಏಳುವಾಗ ಅದರ ಮಬ್ಬು ಇನ್ನೂ ಇರುತ್ತದೆ. ರಾತ್ರಿಯಲ್ಲಿ ಕುಡಿತದಿಂದ ವಾಂತಿಯಾಗಿದ್ದರೆ ದೇಹದ ಶಕ್ತಿ ಮತ್ತಷ್ಟು ಕಡಿಮೆಯಾಗಿರುತ್ತದೆ. ಈ ರೀತಿಯಾದಾಗ ಬೆಳಗ್ಗೆ ಎದ್ದ ಕೂಡಲೇ ಕಣ್ ಕತ್ತಲೆ ಬರುವುದು, ಹಿಂದಿನ ರಾತ್ರಿಯ ಬಗ್ಗೆ ಏನೂ ತಕ್ಷಣ ನೆನಪಿಗೆ ಬರದೆ ತಾತ್ಕಾಲಿಕ ಮರೆವು ಉಂಟಾಗುತ್ತದೆ.
2. ಕಡಿಮೆ ರಕ್ತದೊತ್ತಡ: ದೇಹದಲ್ಲಿ ರಕ್ತದೊತ್ತಡ ಕಡಿಮೆಯಾದಾಗ ಕಣ್ಣು ಮಂಜಾಗಿ ಪ್ರಜ್ಞಾಹೀನರಾಗುತ್ತಾರೆ. ಊಟ ಸರಿಯಾಗಿ ಮಾಡದಿದ್ದರೆ, ಪೌಷ್ಠಿಕ ಆಹಾರದ ಕೊರತೆಯಿದ್ದರೆ, ಉಪವಾಸ ಇವುಗಳಿಂದ ರಕ್ತಸಂಚಲನದಲ್ಲಿ ವ್ಯತ್ಯಾಸ ಉಂಟಾಗಿ ಕಣ್ಣು ಕತ್ತಲಾಗುವುದು.
3. ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗುವುದು: ದೇಹದಲ್ಲಿ ಸಕ್ಕರೆ ಅಂಶ ಜಾಸ್ತಿಯದರೂ ತೊಂದರೆ, ಕಡಿಮೆಯಾದರೂ ತೊಂದರೆ. ಆರೋಗ್ಯವಾಗಿರಲು ಸಕ್ಕರೆ ಅಂಶ ಸಮಪ್ರಮಾಣದಲ್ಲಿರ ಬೇಕು. ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾದರೂ ತುಂಬಾ ಚಳಿಯಾಗುವುದರ ಜೊತೆಗೆ ಕಣ್ಣಿಗೆ ಕತ್ತಲೆ ಆವರಿಸುತ್ತದೆ. ಮೆದುಳಿಗೆ ಸಕ್ಕರೆ ಅಂಶ ಪೂರೈಕೆಯಾಗದಿದ್ದರೆ ಈ ರೀತಿ ಉಂಟಾಗುತ್ತದೆ. ಆದ್ದರಿಂದ ಈ ರೀತಿ ಲಕ್ಷಣ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.
4. ಒತ್ತಡ: ತುಂಬಾ ಮಾನಸಿಕ ಒತ್ತಡ ಅನುಭವಿಸಿದಾಗ ಹಾರ್ಮೋನ್ ಗಳಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಇದರಿಂದ ಕೂಡ ತಲೆಸುತ್ತು ಬರುತ್ತದೆ.
5. ಬಿಗಿಯಾದ ಉಡುಪು ಧರಿಸುವುದು: ತುಂಬಾ ಬಿಗಿಯಾದ ಉಡುಪು ಧರಿಸಿದಾಗ ದೇಹಕ್ಕೆ ಆಮ್ಲಜನಕದ ಪೂರೈಕೆ ಸರಿಯಾಗಿ ಆಗುವುದಿಲ್ಲ. ಇದರಿಂದ ಕೂಡ ತಲೆಸುತ್ತು ಉಂಟಾಗುವುದು.
ಬೆಳಗ್ಗೆ ಎದ್ದಾಗ ಕಣ್ ಮಂಜಾಗುವ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣ ವೈದ್ಯರ ಸಲಹೆಗಳನ್ನು ಪಡೆಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











