Latest Updates
-
ಆಗಸ್ಟ್ 27 ಅಥವಾ 28? ರಾಖಿ ಹಬ್ಬದ ಗೊಂದಲಕ್ಕೆ ಇಲ್ಲಿದೆ ಬೆಸ್ಟ್ ಪ್ಲಾನ್! -
ಗುಡುಗು-ಸಿಡಿಲು ಮಳೆ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು 15 ನಿಮಿಷಗಳ ತುರ್ತು ಕ್ರಮಗಳು -
ರಕ್ಷಾಬಂಧನಕ್ಕೆ ಸಿಹಿ ಖರೀದಿಸ್ತಿದ್ದೀರಾ? ಈ ತಪ್ಪು ಮಾಡಿದ್ರೆ ಆರೋಗ್ಯಕ್ಕೆ ಕುತ್ತು, ನಕಲಿ ಸ್ವೀಟ್ಸ್ ಪತ್ತೆ! -
ರಕ್ಷಾಬಂಧನಕ್ಕೆ ಚಿನ್ನ ಖರೀದಿಸುವ ಮುನ್ನ ಎಚ್ಚರ! ಇಂದಿನ ದರ ಮತ್ತು ಲಾಭದಾಯಕ ಟಿಪ್ಸ್ ಇಲ್ಲಿದೆ -
ರಾಷ್ಟ್ರೀಯ ಕ್ರೀಡಾ ದಿನ: 29 ನಿಮಿಷಗಳ ಸರಳ ವರ್ಕೌಟ್ ಮೂಲಕ ಫಿಟ್ ಆಗಿ! -
ಕುಟುಂಬದಲ್ಲಿ ಉಡುಪಿನ ಬಗ್ಗೆ ಟೀಕೆಗಳೇ? ಈ 7 ವಾಕ್ಯಗಳ ಮೂಲಕ ಗೌರವಯುತವಾಗಿ ಉತ್ತರಿಸಿ! -
ಈರುಳ್ಳಿ ಬೆಲೆ ಏರಿಕೆ: ಅಡುಗೆಮನೆಯ ಬಜೆಟ್ ಉಳಿಸಲು ಸರಳ ಟಿಪ್ಸ್ ಮತ್ತು ಪರ್ಯಾಯಗಳು! -
ಪ್ಯಾಕೆಟ್ ಆಹಾರದ ಮೇಲೆ ಕಡ್ಡಾಯ ಎಚ್ಚರಿಕೆ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಅಂತಿಮ ಗಡುವು! -
ಇಂದಿನ ಪೆಟ್ರೋಲ್ ದರ ಸ್ಥಿರ: ಪ್ರಯಾಣದ ವೆಚ್ಚ ಉಳಿಸಲು ಈ 5 ಸಿಂಪಲ್ ಟಿಪ್ಸ್ ಫಾಲೋ ಮಾಡಿ! -
ದೆಹಲಿ ವಾಯು ಮಾಲಿನ್ಯ: ಆರೋಗ್ಯ ಕಾಪಾಡಿಕೊಳ್ಳಲು 12 ನಿಮಿಷದ ವರ್ಕೌಟ್ ಮತ್ತು ಸುರಕ್ಷತಾ ಟಿಪ್ಸ್
ಮುಂಜಾನೆಯೇ ಕಣ್ ಕತ್ತಲೆ ಬಂದರೆ ನಿರ್ಲಕ್ಷ್ಯ ಬೇಡ!

ಬೆಳಿಗ್ಗೆ ಎದ್ದ ತಕ್ಷಣ ಕಣ್ ಮಂಜಾಗಿ ಬಿದ್ದು ಬಿಡುವುದು. ಸ್ವಲ್ಪ ಹೊತ್ತಿನ ನಂತರ ಎಚ್ಚರ ಆದಾಗ ಏನಾಯಿತು ಎಂದು ಅವರಿಗೇ ಗೊತ್ತಿರುವುದಿಲ್ಲ. ಇದನ್ನೇ ಬ್ಲಾಕ್ಡ್ ಔಟ್ ಅಥವಾ ಕಣ್ ಮಂಜಾಗುವುದು ಅಂತ ಹೇಳುವುದು. ಈ ರೀತಿ ಉಂಟಾಗಲು ಕಾರಣದ ಬಗ್ಗೆ ತಿಳಿಯಲು ಮುಂದೆ ಓದಿ.
1. ಮದ್ಯಪಾನ: ರಾತ್ರಿ ಮಿತಿ ಮೀರಿ ಕುಡಿದರೆ ಬೆಳಗ್ಗೆ ಏಳುವಾಗ ಅದರ ಮಬ್ಬು ಇನ್ನೂ ಇರುತ್ತದೆ. ರಾತ್ರಿಯಲ್ಲಿ ಕುಡಿತದಿಂದ ವಾಂತಿಯಾಗಿದ್ದರೆ ದೇಹದ ಶಕ್ತಿ ಮತ್ತಷ್ಟು ಕಡಿಮೆಯಾಗಿರುತ್ತದೆ. ಈ ರೀತಿಯಾದಾಗ ಬೆಳಗ್ಗೆ ಎದ್ದ ಕೂಡಲೇ ಕಣ್ ಕತ್ತಲೆ ಬರುವುದು, ಹಿಂದಿನ ರಾತ್ರಿಯ ಬಗ್ಗೆ ಏನೂ ತಕ್ಷಣ ನೆನಪಿಗೆ ಬರದೆ ತಾತ್ಕಾಲಿಕ ಮರೆವು ಉಂಟಾಗುತ್ತದೆ.
2. ಕಡಿಮೆ ರಕ್ತದೊತ್ತಡ: ದೇಹದಲ್ಲಿ ರಕ್ತದೊತ್ತಡ ಕಡಿಮೆಯಾದಾಗ ಕಣ್ಣು ಮಂಜಾಗಿ ಪ್ರಜ್ಞಾಹೀನರಾಗುತ್ತಾರೆ. ಊಟ ಸರಿಯಾಗಿ ಮಾಡದಿದ್ದರೆ, ಪೌಷ್ಠಿಕ ಆಹಾರದ ಕೊರತೆಯಿದ್ದರೆ, ಉಪವಾಸ ಇವುಗಳಿಂದ ರಕ್ತಸಂಚಲನದಲ್ಲಿ ವ್ಯತ್ಯಾಸ ಉಂಟಾಗಿ ಕಣ್ಣು ಕತ್ತಲಾಗುವುದು.
3. ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗುವುದು: ದೇಹದಲ್ಲಿ ಸಕ್ಕರೆ ಅಂಶ ಜಾಸ್ತಿಯದರೂ ತೊಂದರೆ, ಕಡಿಮೆಯಾದರೂ ತೊಂದರೆ. ಆರೋಗ್ಯವಾಗಿರಲು ಸಕ್ಕರೆ ಅಂಶ ಸಮಪ್ರಮಾಣದಲ್ಲಿರ ಬೇಕು. ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾದರೂ ತುಂಬಾ ಚಳಿಯಾಗುವುದರ ಜೊತೆಗೆ ಕಣ್ಣಿಗೆ ಕತ್ತಲೆ ಆವರಿಸುತ್ತದೆ. ಮೆದುಳಿಗೆ ಸಕ್ಕರೆ ಅಂಶ ಪೂರೈಕೆಯಾಗದಿದ್ದರೆ ಈ ರೀತಿ ಉಂಟಾಗುತ್ತದೆ. ಆದ್ದರಿಂದ ಈ ರೀತಿ ಲಕ್ಷಣ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.
4. ಒತ್ತಡ: ತುಂಬಾ ಮಾನಸಿಕ ಒತ್ತಡ ಅನುಭವಿಸಿದಾಗ ಹಾರ್ಮೋನ್ ಗಳಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಇದರಿಂದ ಕೂಡ ತಲೆಸುತ್ತು ಬರುತ್ತದೆ.
5. ಬಿಗಿಯಾದ ಉಡುಪು ಧರಿಸುವುದು: ತುಂಬಾ ಬಿಗಿಯಾದ ಉಡುಪು ಧರಿಸಿದಾಗ ದೇಹಕ್ಕೆ ಆಮ್ಲಜನಕದ ಪೂರೈಕೆ ಸರಿಯಾಗಿ ಆಗುವುದಿಲ್ಲ. ಇದರಿಂದ ಕೂಡ ತಲೆಸುತ್ತು ಉಂಟಾಗುವುದು.
ಬೆಳಗ್ಗೆ ಎದ್ದಾಗ ಕಣ್ ಮಂಜಾಗುವ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣ ವೈದ್ಯರ ಸಲಹೆಗಳನ್ನು ಪಡೆಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications