Latest Updates
-
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು
ಮುಂಜಾನೆಯೇ ಕಣ್ ಕತ್ತಲೆ ಬಂದರೆ ನಿರ್ಲಕ್ಷ್ಯ ಬೇಡ!

ಬೆಳಿಗ್ಗೆ ಎದ್ದ ತಕ್ಷಣ ಕಣ್ ಮಂಜಾಗಿ ಬಿದ್ದು ಬಿಡುವುದು. ಸ್ವಲ್ಪ ಹೊತ್ತಿನ ನಂತರ ಎಚ್ಚರ ಆದಾಗ ಏನಾಯಿತು ಎಂದು ಅವರಿಗೇ ಗೊತ್ತಿರುವುದಿಲ್ಲ. ಇದನ್ನೇ ಬ್ಲಾಕ್ಡ್ ಔಟ್ ಅಥವಾ ಕಣ್ ಮಂಜಾಗುವುದು ಅಂತ ಹೇಳುವುದು. ಈ ರೀತಿ ಉಂಟಾಗಲು ಕಾರಣದ ಬಗ್ಗೆ ತಿಳಿಯಲು ಮುಂದೆ ಓದಿ.
1. ಮದ್ಯಪಾನ: ರಾತ್ರಿ ಮಿತಿ ಮೀರಿ ಕುಡಿದರೆ ಬೆಳಗ್ಗೆ ಏಳುವಾಗ ಅದರ ಮಬ್ಬು ಇನ್ನೂ ಇರುತ್ತದೆ. ರಾತ್ರಿಯಲ್ಲಿ ಕುಡಿತದಿಂದ ವಾಂತಿಯಾಗಿದ್ದರೆ ದೇಹದ ಶಕ್ತಿ ಮತ್ತಷ್ಟು ಕಡಿಮೆಯಾಗಿರುತ್ತದೆ. ಈ ರೀತಿಯಾದಾಗ ಬೆಳಗ್ಗೆ ಎದ್ದ ಕೂಡಲೇ ಕಣ್ ಕತ್ತಲೆ ಬರುವುದು, ಹಿಂದಿನ ರಾತ್ರಿಯ ಬಗ್ಗೆ ಏನೂ ತಕ್ಷಣ ನೆನಪಿಗೆ ಬರದೆ ತಾತ್ಕಾಲಿಕ ಮರೆವು ಉಂಟಾಗುತ್ತದೆ.
2. ಕಡಿಮೆ ರಕ್ತದೊತ್ತಡ: ದೇಹದಲ್ಲಿ ರಕ್ತದೊತ್ತಡ ಕಡಿಮೆಯಾದಾಗ ಕಣ್ಣು ಮಂಜಾಗಿ ಪ್ರಜ್ಞಾಹೀನರಾಗುತ್ತಾರೆ. ಊಟ ಸರಿಯಾಗಿ ಮಾಡದಿದ್ದರೆ, ಪೌಷ್ಠಿಕ ಆಹಾರದ ಕೊರತೆಯಿದ್ದರೆ, ಉಪವಾಸ ಇವುಗಳಿಂದ ರಕ್ತಸಂಚಲನದಲ್ಲಿ ವ್ಯತ್ಯಾಸ ಉಂಟಾಗಿ ಕಣ್ಣು ಕತ್ತಲಾಗುವುದು.
3. ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗುವುದು: ದೇಹದಲ್ಲಿ ಸಕ್ಕರೆ ಅಂಶ ಜಾಸ್ತಿಯದರೂ ತೊಂದರೆ, ಕಡಿಮೆಯಾದರೂ ತೊಂದರೆ. ಆರೋಗ್ಯವಾಗಿರಲು ಸಕ್ಕರೆ ಅಂಶ ಸಮಪ್ರಮಾಣದಲ್ಲಿರ ಬೇಕು. ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾದರೂ ತುಂಬಾ ಚಳಿಯಾಗುವುದರ ಜೊತೆಗೆ ಕಣ್ಣಿಗೆ ಕತ್ತಲೆ ಆವರಿಸುತ್ತದೆ. ಮೆದುಳಿಗೆ ಸಕ್ಕರೆ ಅಂಶ ಪೂರೈಕೆಯಾಗದಿದ್ದರೆ ಈ ರೀತಿ ಉಂಟಾಗುತ್ತದೆ. ಆದ್ದರಿಂದ ಈ ರೀತಿ ಲಕ್ಷಣ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.
4. ಒತ್ತಡ: ತುಂಬಾ ಮಾನಸಿಕ ಒತ್ತಡ ಅನುಭವಿಸಿದಾಗ ಹಾರ್ಮೋನ್ ಗಳಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಇದರಿಂದ ಕೂಡ ತಲೆಸುತ್ತು ಬರುತ್ತದೆ.
5. ಬಿಗಿಯಾದ ಉಡುಪು ಧರಿಸುವುದು: ತುಂಬಾ ಬಿಗಿಯಾದ ಉಡುಪು ಧರಿಸಿದಾಗ ದೇಹಕ್ಕೆ ಆಮ್ಲಜನಕದ ಪೂರೈಕೆ ಸರಿಯಾಗಿ ಆಗುವುದಿಲ್ಲ. ಇದರಿಂದ ಕೂಡ ತಲೆಸುತ್ತು ಉಂಟಾಗುವುದು.
ಬೆಳಗ್ಗೆ ಎದ್ದಾಗ ಕಣ್ ಮಂಜಾಗುವ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣ ವೈದ್ಯರ ಸಲಹೆಗಳನ್ನು ಪಡೆಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications