Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮುಂಜಾನೆಯೇ ಕಣ್ ಕತ್ತಲೆ ಬಂದರೆ ನಿರ್ಲಕ್ಷ್ಯ ಬೇಡ!

ಬೆಳಿಗ್ಗೆ ಎದ್ದ ತಕ್ಷಣ ಕಣ್ ಮಂಜಾಗಿ ಬಿದ್ದು ಬಿಡುವುದು. ಸ್ವಲ್ಪ ಹೊತ್ತಿನ ನಂತರ ಎಚ್ಚರ ಆದಾಗ ಏನಾಯಿತು ಎಂದು ಅವರಿಗೇ ಗೊತ್ತಿರುವುದಿಲ್ಲ. ಇದನ್ನೇ ಬ್ಲಾಕ್ಡ್ ಔಟ್ ಅಥವಾ ಕಣ್ ಮಂಜಾಗುವುದು ಅಂತ ಹೇಳುವುದು. ಈ ರೀತಿ ಉಂಟಾಗಲು ಕಾರಣದ ಬಗ್ಗೆ ತಿಳಿಯಲು ಮುಂದೆ ಓದಿ.
1. ಮದ್ಯಪಾನ: ರಾತ್ರಿ ಮಿತಿ ಮೀರಿ ಕುಡಿದರೆ ಬೆಳಗ್ಗೆ ಏಳುವಾಗ ಅದರ ಮಬ್ಬು ಇನ್ನೂ ಇರುತ್ತದೆ. ರಾತ್ರಿಯಲ್ಲಿ ಕುಡಿತದಿಂದ ವಾಂತಿಯಾಗಿದ್ದರೆ ದೇಹದ ಶಕ್ತಿ ಮತ್ತಷ್ಟು ಕಡಿಮೆಯಾಗಿರುತ್ತದೆ. ಈ ರೀತಿಯಾದಾಗ ಬೆಳಗ್ಗೆ ಎದ್ದ ಕೂಡಲೇ ಕಣ್ ಕತ್ತಲೆ ಬರುವುದು, ಹಿಂದಿನ ರಾತ್ರಿಯ ಬಗ್ಗೆ ಏನೂ ತಕ್ಷಣ ನೆನಪಿಗೆ ಬರದೆ ತಾತ್ಕಾಲಿಕ ಮರೆವು ಉಂಟಾಗುತ್ತದೆ.
2. ಕಡಿಮೆ ರಕ್ತದೊತ್ತಡ: ದೇಹದಲ್ಲಿ ರಕ್ತದೊತ್ತಡ ಕಡಿಮೆಯಾದಾಗ ಕಣ್ಣು ಮಂಜಾಗಿ ಪ್ರಜ್ಞಾಹೀನರಾಗುತ್ತಾರೆ. ಊಟ ಸರಿಯಾಗಿ ಮಾಡದಿದ್ದರೆ, ಪೌಷ್ಠಿಕ ಆಹಾರದ ಕೊರತೆಯಿದ್ದರೆ, ಉಪವಾಸ ಇವುಗಳಿಂದ ರಕ್ತಸಂಚಲನದಲ್ಲಿ ವ್ಯತ್ಯಾಸ ಉಂಟಾಗಿ ಕಣ್ಣು ಕತ್ತಲಾಗುವುದು.
3. ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗುವುದು: ದೇಹದಲ್ಲಿ ಸಕ್ಕರೆ ಅಂಶ ಜಾಸ್ತಿಯದರೂ ತೊಂದರೆ, ಕಡಿಮೆಯಾದರೂ ತೊಂದರೆ. ಆರೋಗ್ಯವಾಗಿರಲು ಸಕ್ಕರೆ ಅಂಶ ಸಮಪ್ರಮಾಣದಲ್ಲಿರ ಬೇಕು. ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾದರೂ ತುಂಬಾ ಚಳಿಯಾಗುವುದರ ಜೊತೆಗೆ ಕಣ್ಣಿಗೆ ಕತ್ತಲೆ ಆವರಿಸುತ್ತದೆ. ಮೆದುಳಿಗೆ ಸಕ್ಕರೆ ಅಂಶ ಪೂರೈಕೆಯಾಗದಿದ್ದರೆ ಈ ರೀತಿ ಉಂಟಾಗುತ್ತದೆ. ಆದ್ದರಿಂದ ಈ ರೀತಿ ಲಕ್ಷಣ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.
4. ಒತ್ತಡ: ತುಂಬಾ ಮಾನಸಿಕ ಒತ್ತಡ ಅನುಭವಿಸಿದಾಗ ಹಾರ್ಮೋನ್ ಗಳಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಇದರಿಂದ ಕೂಡ ತಲೆಸುತ್ತು ಬರುತ್ತದೆ.
5. ಬಿಗಿಯಾದ ಉಡುಪು ಧರಿಸುವುದು: ತುಂಬಾ ಬಿಗಿಯಾದ ಉಡುಪು ಧರಿಸಿದಾಗ ದೇಹಕ್ಕೆ ಆಮ್ಲಜನಕದ ಪೂರೈಕೆ ಸರಿಯಾಗಿ ಆಗುವುದಿಲ್ಲ. ಇದರಿಂದ ಕೂಡ ತಲೆಸುತ್ತು ಉಂಟಾಗುವುದು.
ಬೆಳಗ್ಗೆ ಎದ್ದಾಗ ಕಣ್ ಮಂಜಾಗುವ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣ ವೈದ್ಯರ ಸಲಹೆಗಳನ್ನು ಪಡೆಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications