Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಎದ್ದ ಕೂಡಲೆ ನ್ಯೂಸ್ ಪೇಪರ್ ಓದಬಾರದು!

ದಿನ ಬೆಳಗಾದರೆ ಟಾರ್ಗೆಟ್, ಡೆಡ್ ಲೈನ್ ಅಂತ ಯೋಚಿಸುತ್ತಾ ಟೆನ್ಷನ್ ಹೆಚ್ಚಿ ಮಾಡುವುದರಿಂದ ಆರೋಗ್ಯ ಹಾಳಾಗುವುದು. ಜೀವನವನ್ನು ಸಂತೋಷದಿಂದ ಕಳೆಯಲು ಮತ್ತು ಸವಾಲುಗಳನ್ನು ಧೈರ್ಯವಾಗಿ ಎದುರಿಸಲು ಅಂತಾರಾಷ್ಟ್ರೀಯ ಖ್ಯಾತಿಯ ಲೀಡರ್ಶಿಪ್ ಗುರು ರಾಬಿನ್ ಶರ್ಮ ಅನುಸರಿಸುವ ಸರಳ ವಿಧಾನ ನೋಡಿ ಇಲ್ಲಿದೆ:
1. ಮುಂಜಾನೆ ಬೇಗನೆ ಏಳುವುದು: ಮುಂಜಾನೆ ಬೇಗನೆ ಏಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹೆಚ್ಚಾಗುವುದು. ಲೇಟಾಗಿ ಎದ್ದು ಅವಸರವಾಗಿ ಕೆಲಸ ಕಾರ್ಯವನ್ನು ಮಾಡುವುದರಿಂದ ಮಾನಸಿಕ ಒತ್ತಡ ಹೆಚ್ಚುವುದು.
2. ಒಂದು ಲೋಟ ನೀರು ಕುಡಿಯುವುದು: ಬೆಳಗ್ಗೆ ಎದ್ದ ಕೂಡಲೇ ಬಾಯಿ ಕೂಡ ತೊಳೆಯದೆ ಒಂದು ಲೋಟ ನೀರು ಕುಡಿದರೆ ದೇಹ ಶುದ್ಧಿಯಾಗುತ್ತದೆ. ಇದರಿಂದ ದೇಹದಲ್ಲಿ ಚೈತನ್ಯ ಹೆಚ್ಚಾಗುವುದು.
3. ನ್ಯೂಸ್ ಪೇಪರ್ ಓದಬಾರದು: ಹೌದು ಇದನ್ನು ಕೇಳಿದರೆ ಆಶ್ಚರ್ಯವಾಗುವುದು ದಿಟ. ಆದರೆ ಬೆಳಗ್ಗೆ ಎದ್ದ ಕೂಡಲೆ ನ್ಯೂಸ್ ಪೇಪರ್ ನೋಡಿದರೆ ಅದರಲ್ಲಿರುವ ವಿಷಯಗಳೇ ಮನಸ್ಸನ್ನು ಕೊರೆಯುವುದು.
ಇದರ ಬಗ್ಗೆ ಒಂದು ಸಮೀಕ್ಷೆಯೊಂದು ನಡೆಸಲಾಗಿದೆ. ಅದರಲ್ಲಿ ದಿನಾ ಬೆಳಗ್ಗೆ ನ್ಯೂಸ್ ಪೇಪರ್ ಓದುವವರಿಗೆ ಮತ್ತು ಓದದವರಿಗೆ ಒಂದೇ ರೀತಿಯ ಪೋಟೊಗಳನ್ನು ತೋರಿಸಲಾಗಿತ್ತು. ಅದರಲ್ಲಿ ನ್ಯೂಸ್ ಪೇಪರ್ ನೋಡಿದವರಿಗಿಂತ ನೋಡದವರು ಆ ಫೋಟೊಗಳನ್ನು ನೋಡಿ ಹೆಚ್ಚು ಆನಂದಿಸುತ್ತಿದ್ದರು.
ಇವರ ಪ್ರಕಾರ ಎದ್ದ ಕೂಡಲೆ ನ್ಯೂಸ್ ಪೇಪರ್ ನಲ್ಲಿ ತಲೆದೂರಿಸುವುದಕ್ಕಿಂತ ಸುತ್ತಮುತ್ತಲಿನ ಸಣ್ಣ-ಪುಟ್ಟ ವಿಷಯಗಳನ್ನು ಮೊದಲು ಆನಂದಿಸಿ. ತಿಂಡಿಯ ನಂತರ ಪೇಪರ್ ನೋಡುವುದು ಒಳ್ಳೆಯದು.
4. 200% ಕೆಲಸ: ಮಾಡುವ ಕೆಲಸ ಯಾವುದೇ ಆಗಿರಲಿ ಅದನ್ನು 200% ಶೃದ್ಧೆಯಿಂದ ಮಾಡಬೇಕು. ಆಗ ಯಶಸ್ವು ತನ್ನಿಂದ ತಾನೆ ಬರುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications