Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಎದ್ದ ಕೂಡಲೆ ನ್ಯೂಸ್ ಪೇಪರ್ ಓದಬಾರದು!

ದಿನ ಬೆಳಗಾದರೆ ಟಾರ್ಗೆಟ್, ಡೆಡ್ ಲೈನ್ ಅಂತ ಯೋಚಿಸುತ್ತಾ ಟೆನ್ಷನ್ ಹೆಚ್ಚಿ ಮಾಡುವುದರಿಂದ ಆರೋಗ್ಯ ಹಾಳಾಗುವುದು. ಜೀವನವನ್ನು ಸಂತೋಷದಿಂದ ಕಳೆಯಲು ಮತ್ತು ಸವಾಲುಗಳನ್ನು ಧೈರ್ಯವಾಗಿ ಎದುರಿಸಲು ಅಂತಾರಾಷ್ಟ್ರೀಯ ಖ್ಯಾತಿಯ ಲೀಡರ್ಶಿಪ್ ಗುರು ರಾಬಿನ್ ಶರ್ಮ ಅನುಸರಿಸುವ ಸರಳ ವಿಧಾನ ನೋಡಿ ಇಲ್ಲಿದೆ:
1. ಮುಂಜಾನೆ ಬೇಗನೆ ಏಳುವುದು: ಮುಂಜಾನೆ ಬೇಗನೆ ಏಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹೆಚ್ಚಾಗುವುದು. ಲೇಟಾಗಿ ಎದ್ದು ಅವಸರವಾಗಿ ಕೆಲಸ ಕಾರ್ಯವನ್ನು ಮಾಡುವುದರಿಂದ ಮಾನಸಿಕ ಒತ್ತಡ ಹೆಚ್ಚುವುದು.
2. ಒಂದು ಲೋಟ ನೀರು ಕುಡಿಯುವುದು: ಬೆಳಗ್ಗೆ ಎದ್ದ ಕೂಡಲೇ ಬಾಯಿ ಕೂಡ ತೊಳೆಯದೆ ಒಂದು ಲೋಟ ನೀರು ಕುಡಿದರೆ ದೇಹ ಶುದ್ಧಿಯಾಗುತ್ತದೆ. ಇದರಿಂದ ದೇಹದಲ್ಲಿ ಚೈತನ್ಯ ಹೆಚ್ಚಾಗುವುದು.
3. ನ್ಯೂಸ್ ಪೇಪರ್ ಓದಬಾರದು: ಹೌದು ಇದನ್ನು ಕೇಳಿದರೆ ಆಶ್ಚರ್ಯವಾಗುವುದು ದಿಟ. ಆದರೆ ಬೆಳಗ್ಗೆ ಎದ್ದ ಕೂಡಲೆ ನ್ಯೂಸ್ ಪೇಪರ್ ನೋಡಿದರೆ ಅದರಲ್ಲಿರುವ ವಿಷಯಗಳೇ ಮನಸ್ಸನ್ನು ಕೊರೆಯುವುದು.
ಇದರ ಬಗ್ಗೆ ಒಂದು ಸಮೀಕ್ಷೆಯೊಂದು ನಡೆಸಲಾಗಿದೆ. ಅದರಲ್ಲಿ ದಿನಾ ಬೆಳಗ್ಗೆ ನ್ಯೂಸ್ ಪೇಪರ್ ಓದುವವರಿಗೆ ಮತ್ತು ಓದದವರಿಗೆ ಒಂದೇ ರೀತಿಯ ಪೋಟೊಗಳನ್ನು ತೋರಿಸಲಾಗಿತ್ತು. ಅದರಲ್ಲಿ ನ್ಯೂಸ್ ಪೇಪರ್ ನೋಡಿದವರಿಗಿಂತ ನೋಡದವರು ಆ ಫೋಟೊಗಳನ್ನು ನೋಡಿ ಹೆಚ್ಚು ಆನಂದಿಸುತ್ತಿದ್ದರು.
ಇವರ ಪ್ರಕಾರ ಎದ್ದ ಕೂಡಲೆ ನ್ಯೂಸ್ ಪೇಪರ್ ನಲ್ಲಿ ತಲೆದೂರಿಸುವುದಕ್ಕಿಂತ ಸುತ್ತಮುತ್ತಲಿನ ಸಣ್ಣ-ಪುಟ್ಟ ವಿಷಯಗಳನ್ನು ಮೊದಲು ಆನಂದಿಸಿ. ತಿಂಡಿಯ ನಂತರ ಪೇಪರ್ ನೋಡುವುದು ಒಳ್ಳೆಯದು.
4. 200% ಕೆಲಸ: ಮಾಡುವ ಕೆಲಸ ಯಾವುದೇ ಆಗಿರಲಿ ಅದನ್ನು 200% ಶೃದ್ಧೆಯಿಂದ ಮಾಡಬೇಕು. ಆಗ ಯಶಸ್ವು ತನ್ನಿಂದ ತಾನೆ ಬರುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
