Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಎದ್ದ ಕೂಡಲೆ ನ್ಯೂಸ್ ಪೇಪರ್ ಓದಬಾರದು!

ದಿನ ಬೆಳಗಾದರೆ ಟಾರ್ಗೆಟ್, ಡೆಡ್ ಲೈನ್ ಅಂತ ಯೋಚಿಸುತ್ತಾ ಟೆನ್ಷನ್ ಹೆಚ್ಚಿ ಮಾಡುವುದರಿಂದ ಆರೋಗ್ಯ ಹಾಳಾಗುವುದು. ಜೀವನವನ್ನು ಸಂತೋಷದಿಂದ ಕಳೆಯಲು ಮತ್ತು ಸವಾಲುಗಳನ್ನು ಧೈರ್ಯವಾಗಿ ಎದುರಿಸಲು ಅಂತಾರಾಷ್ಟ್ರೀಯ ಖ್ಯಾತಿಯ ಲೀಡರ್ಶಿಪ್ ಗುರು ರಾಬಿನ್ ಶರ್ಮ ಅನುಸರಿಸುವ ಸರಳ ವಿಧಾನ ನೋಡಿ ಇಲ್ಲಿದೆ:
1. ಮುಂಜಾನೆ ಬೇಗನೆ ಏಳುವುದು: ಮುಂಜಾನೆ ಬೇಗನೆ ಏಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹೆಚ್ಚಾಗುವುದು. ಲೇಟಾಗಿ ಎದ್ದು ಅವಸರವಾಗಿ ಕೆಲಸ ಕಾರ್ಯವನ್ನು ಮಾಡುವುದರಿಂದ ಮಾನಸಿಕ ಒತ್ತಡ ಹೆಚ್ಚುವುದು.
2. ಒಂದು ಲೋಟ ನೀರು ಕುಡಿಯುವುದು: ಬೆಳಗ್ಗೆ ಎದ್ದ ಕೂಡಲೇ ಬಾಯಿ ಕೂಡ ತೊಳೆಯದೆ ಒಂದು ಲೋಟ ನೀರು ಕುಡಿದರೆ ದೇಹ ಶುದ್ಧಿಯಾಗುತ್ತದೆ. ಇದರಿಂದ ದೇಹದಲ್ಲಿ ಚೈತನ್ಯ ಹೆಚ್ಚಾಗುವುದು.
3. ನ್ಯೂಸ್ ಪೇಪರ್ ಓದಬಾರದು: ಹೌದು ಇದನ್ನು ಕೇಳಿದರೆ ಆಶ್ಚರ್ಯವಾಗುವುದು ದಿಟ. ಆದರೆ ಬೆಳಗ್ಗೆ ಎದ್ದ ಕೂಡಲೆ ನ್ಯೂಸ್ ಪೇಪರ್ ನೋಡಿದರೆ ಅದರಲ್ಲಿರುವ ವಿಷಯಗಳೇ ಮನಸ್ಸನ್ನು ಕೊರೆಯುವುದು.
ಇದರ ಬಗ್ಗೆ ಒಂದು ಸಮೀಕ್ಷೆಯೊಂದು ನಡೆಸಲಾಗಿದೆ. ಅದರಲ್ಲಿ ದಿನಾ ಬೆಳಗ್ಗೆ ನ್ಯೂಸ್ ಪೇಪರ್ ಓದುವವರಿಗೆ ಮತ್ತು ಓದದವರಿಗೆ ಒಂದೇ ರೀತಿಯ ಪೋಟೊಗಳನ್ನು ತೋರಿಸಲಾಗಿತ್ತು. ಅದರಲ್ಲಿ ನ್ಯೂಸ್ ಪೇಪರ್ ನೋಡಿದವರಿಗಿಂತ ನೋಡದವರು ಆ ಫೋಟೊಗಳನ್ನು ನೋಡಿ ಹೆಚ್ಚು ಆನಂದಿಸುತ್ತಿದ್ದರು.
ಇವರ ಪ್ರಕಾರ ಎದ್ದ ಕೂಡಲೆ ನ್ಯೂಸ್ ಪೇಪರ್ ನಲ್ಲಿ ತಲೆದೂರಿಸುವುದಕ್ಕಿಂತ ಸುತ್ತಮುತ್ತಲಿನ ಸಣ್ಣ-ಪುಟ್ಟ ವಿಷಯಗಳನ್ನು ಮೊದಲು ಆನಂದಿಸಿ. ತಿಂಡಿಯ ನಂತರ ಪೇಪರ್ ನೋಡುವುದು ಒಳ್ಳೆಯದು.
4. 200% ಕೆಲಸ: ಮಾಡುವ ಕೆಲಸ ಯಾವುದೇ ಆಗಿರಲಿ ಅದನ್ನು 200% ಶೃದ್ಧೆಯಿಂದ ಮಾಡಬೇಕು. ಆಗ ಯಶಸ್ವು ತನ್ನಿಂದ ತಾನೆ ಬರುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications