Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಸುಟ್ಟ ಗಾಯಗಳಾದಾಗ ಪ್ರಥಮ ಚಿಕಿತ್ಸೆ ಹೀಗಿರಲಿ

ತಣ್ಣೀರು ಹಾಕುವುದು: ಸಣ್ಣ ಪುಟ್ಟ ಸುಟ್ಟಗಾಯಗಳಾದರೂ ಕೂಡ ಪ್ರಥಮ ಚಿಕಿತ್ಸೆಯಾಗಿ ಮೊದಲು ಮಾಡಬೇಕಾದ ಕೆಲಸವೆಂದರೆ ತಣ್ಣೀರನ್ನು ಹಾಕುವುದು. ಉರಿ ಸ್ವಲ್ಪ ಕಡಿಮೆಯಾಗುವವರೆಗೆ ನೀರು ಹಾಕಬೇಕು. ಮೈ ಸುಟ್ಟುಕೊಂಡಿದ್ದರೆ ಸುಟ್ಟ ಬಟ್ಟೆಗಳನ್ನು ಮೈಯಿಂದ ಹಾಗೇ ಎಳೆದು ತೆಗೆಯಬಾರದು. ಬಟ್ಟೆ ಎಳೆದು ತೆಗೆದದರೆ ಬಟ್ಟೆ ಜೊತೆ ಚರ್ಮ ಕೂಡ ಕಿತ್ತುಕೊಂಡು ಬರುತ್ತದೆ. ಅದರ ಬದಲು ಮೈಗೆ ತುಂಬಾ ನೀರು ಹಾಕಬೇಕು.
ಟೂತ್ ಪೇಸ್ಟ್: ಟೂತ್ ಪೇಸ್ಟ್ಯನ್ನು ಹಲ್ಲುಜ್ಜಲು ಅಷ್ಟೆ ಅಲ್ಲ ಸುಟ್ಟ ಗಾಯಗಳ ಚಿಕಿತ್ಸೆಯಲ್ಲಿ ಬಳಸಬಹುದು. ಸುಟ್ಟಗಾಯಾಗಳಾದಾಗ ಟೂತ್ ಪೇಸ್ಟ್ ಹಚ್ಚಿದರೆ ಅದು ಗಾಯ ಗುಳ್ಳೆಗಳಾಗುವುದನ್ನು ತಡೆಯುತ್ತದೆ. ಅಲ್ಲದೆ ಗಾಯದ ಉರಿ ಕೂಡ ಕಡಿಮೆಯಾಗುತ್ತದೆ.
ಲೋಷನ್: ಸುಟ್ಟಗಾಯಾಗಳಾದಾಗ ಯಾವುದೇ ರೀತಿಯ ಲೋಷನ್ ಹಚ್ಚಬಾರದು. ಈ ರೀತಿ ಹಚ್ಚಿದರೆ ಗಾಯ ಮತ್ತಷ್ಟು ಹೆಚ್ಚಾಗುವುದು. ಸುಟ್ಟಗಾಯಾಗಳಾದಾಗ ಬ್ಯಾಂಡೇಜ್ ಸುತ್ತುವುದು ಕೂಡ ಒಳ್ಳೆಯದಲ್ಲ. ಸುಟ್ಟ ಗಾಯಗಳು ಗಾಳಿಗೆ ತೆರೆದುಕೊಂಡಿದ್ದರೆ ಚರ್ಮಕ್ಕೆ ಉಸಿರಾಟಕ್ಕೆ ಅನುಕೂಲವಾಗುತ್ತದೆ.
ಗಾಬರಿ ಬೀಳುವುದು:ಆಕಸ್ಮಿಕ ಬೆಂಕಿ ಕಾಣಿಸಿಕೊಂಡರೆ ಗಾಬರಿ ಬೀಳುವುದರಿಂದ ಅಪಾಯ ಮತ್ತಷ್ಟು ಹೆಚ್ಚಾಗುವುದು. ಬೆಂಕಿ ಮೈಹಚ್ಚಿಕೊಂಡಾಗ ಓಡಾಡಿದರೆ ಅಕ್ಕಪಕ್ಕದಲ್ಲಿ ಬೆಂಕಿ ಹರಡಿ, ಬೆಂಕಿ ಕೆಡುವುದರ ಬದಲು ಮತ್ತಷ್ಟು ಹೆಚ್ಚಾಗುವುದು. ಈ ಸಮಯದಲ್ಲಿ ನೆಲದಲ್ಲಿ ಮಲಗಿ ಹೊರಳಾಡಬೇಕು. ನಂತರ ಸಹಾಯಕ್ಕಾಗಿ ಕೂಗಿ, ಸಹಾಯ ಮಾಡಲು ಬಂದವರು ನೀರು ಅಥವಾ ಬ್ಲಾಂಕೆಟ್ ಹಾಕಿ ಬೆಂಕಿಯನ್ನು ನಂದಿಸುವಂತೆ ಹೇಳಿ. ಅವರು ಅವಸರದಿಂದ ಬಟ್ಟೆ ಎಳೆದರೆ ಚರ್ಮ ಕಿತ್ತು ಗಾಯದೊಡ್ಡದಾಗುವ ಸಾಧ್ಯತೆ ಹೆಚ್ಚು.
ವೈದ್ಯರನ್ನು ಸಂಪರ್ಕಿಸುವುದು: ನಂತರ ಸುಟ್ಟಗಾಯವಾದವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಆಸ್ಪತ್ರೆಗೆ ಕೊಂಡೊಯ್ಯುವಾಗ ಬಟ್ಟೆಯೆಲ್ಲಾ ಸುತ್ತಿಕೊಂಡು ಕೊಂಡೊಯ್ಯಬೇಡಿ. ಚರ್ಮಕ್ಕೆ ಗಾಳಿಯಾಡುವಂತೆ ಇದ್ದರೆ ಉರಿ ಸ್ವಲ್ಪ ಕಡಿಮೆಯಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications