Latest Updates
-
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ!
ಸುಟ್ಟ ಗಾಯಗಳಾದಾಗ ಪ್ರಥಮ ಚಿಕಿತ್ಸೆ ಹೀಗಿರಲಿ

ತಣ್ಣೀರು ಹಾಕುವುದು: ಸಣ್ಣ ಪುಟ್ಟ ಸುಟ್ಟಗಾಯಗಳಾದರೂ ಕೂಡ ಪ್ರಥಮ ಚಿಕಿತ್ಸೆಯಾಗಿ ಮೊದಲು ಮಾಡಬೇಕಾದ ಕೆಲಸವೆಂದರೆ ತಣ್ಣೀರನ್ನು ಹಾಕುವುದು. ಉರಿ ಸ್ವಲ್ಪ ಕಡಿಮೆಯಾಗುವವರೆಗೆ ನೀರು ಹಾಕಬೇಕು. ಮೈ ಸುಟ್ಟುಕೊಂಡಿದ್ದರೆ ಸುಟ್ಟ ಬಟ್ಟೆಗಳನ್ನು ಮೈಯಿಂದ ಹಾಗೇ ಎಳೆದು ತೆಗೆಯಬಾರದು. ಬಟ್ಟೆ ಎಳೆದು ತೆಗೆದದರೆ ಬಟ್ಟೆ ಜೊತೆ ಚರ್ಮ ಕೂಡ ಕಿತ್ತುಕೊಂಡು ಬರುತ್ತದೆ. ಅದರ ಬದಲು ಮೈಗೆ ತುಂಬಾ ನೀರು ಹಾಕಬೇಕು.
ಟೂತ್ ಪೇಸ್ಟ್: ಟೂತ್ ಪೇಸ್ಟ್ಯನ್ನು ಹಲ್ಲುಜ್ಜಲು ಅಷ್ಟೆ ಅಲ್ಲ ಸುಟ್ಟ ಗಾಯಗಳ ಚಿಕಿತ್ಸೆಯಲ್ಲಿ ಬಳಸಬಹುದು. ಸುಟ್ಟಗಾಯಾಗಳಾದಾಗ ಟೂತ್ ಪೇಸ್ಟ್ ಹಚ್ಚಿದರೆ ಅದು ಗಾಯ ಗುಳ್ಳೆಗಳಾಗುವುದನ್ನು ತಡೆಯುತ್ತದೆ. ಅಲ್ಲದೆ ಗಾಯದ ಉರಿ ಕೂಡ ಕಡಿಮೆಯಾಗುತ್ತದೆ.
ಲೋಷನ್: ಸುಟ್ಟಗಾಯಾಗಳಾದಾಗ ಯಾವುದೇ ರೀತಿಯ ಲೋಷನ್ ಹಚ್ಚಬಾರದು. ಈ ರೀತಿ ಹಚ್ಚಿದರೆ ಗಾಯ ಮತ್ತಷ್ಟು ಹೆಚ್ಚಾಗುವುದು. ಸುಟ್ಟಗಾಯಾಗಳಾದಾಗ ಬ್ಯಾಂಡೇಜ್ ಸುತ್ತುವುದು ಕೂಡ ಒಳ್ಳೆಯದಲ್ಲ. ಸುಟ್ಟ ಗಾಯಗಳು ಗಾಳಿಗೆ ತೆರೆದುಕೊಂಡಿದ್ದರೆ ಚರ್ಮಕ್ಕೆ ಉಸಿರಾಟಕ್ಕೆ ಅನುಕೂಲವಾಗುತ್ತದೆ.
ಗಾಬರಿ ಬೀಳುವುದು:ಆಕಸ್ಮಿಕ ಬೆಂಕಿ ಕಾಣಿಸಿಕೊಂಡರೆ ಗಾಬರಿ ಬೀಳುವುದರಿಂದ ಅಪಾಯ ಮತ್ತಷ್ಟು ಹೆಚ್ಚಾಗುವುದು. ಬೆಂಕಿ ಮೈಹಚ್ಚಿಕೊಂಡಾಗ ಓಡಾಡಿದರೆ ಅಕ್ಕಪಕ್ಕದಲ್ಲಿ ಬೆಂಕಿ ಹರಡಿ, ಬೆಂಕಿ ಕೆಡುವುದರ ಬದಲು ಮತ್ತಷ್ಟು ಹೆಚ್ಚಾಗುವುದು. ಈ ಸಮಯದಲ್ಲಿ ನೆಲದಲ್ಲಿ ಮಲಗಿ ಹೊರಳಾಡಬೇಕು. ನಂತರ ಸಹಾಯಕ್ಕಾಗಿ ಕೂಗಿ, ಸಹಾಯ ಮಾಡಲು ಬಂದವರು ನೀರು ಅಥವಾ ಬ್ಲಾಂಕೆಟ್ ಹಾಕಿ ಬೆಂಕಿಯನ್ನು ನಂದಿಸುವಂತೆ ಹೇಳಿ. ಅವರು ಅವಸರದಿಂದ ಬಟ್ಟೆ ಎಳೆದರೆ ಚರ್ಮ ಕಿತ್ತು ಗಾಯದೊಡ್ಡದಾಗುವ ಸಾಧ್ಯತೆ ಹೆಚ್ಚು.
ವೈದ್ಯರನ್ನು ಸಂಪರ್ಕಿಸುವುದು: ನಂತರ ಸುಟ್ಟಗಾಯವಾದವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಆಸ್ಪತ್ರೆಗೆ ಕೊಂಡೊಯ್ಯುವಾಗ ಬಟ್ಟೆಯೆಲ್ಲಾ ಸುತ್ತಿಕೊಂಡು ಕೊಂಡೊಯ್ಯಬೇಡಿ. ಚರ್ಮಕ್ಕೆ ಗಾಳಿಯಾಡುವಂತೆ ಇದ್ದರೆ ಉರಿ ಸ್ವಲ್ಪ ಕಡಿಮೆಯಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications