Latest Updates
-
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್
ಸುಟ್ಟ ಗಾಯಗಳಾದಾಗ ಪ್ರಥಮ ಚಿಕಿತ್ಸೆ ಹೀಗಿರಲಿ

ತಣ್ಣೀರು ಹಾಕುವುದು: ಸಣ್ಣ ಪುಟ್ಟ ಸುಟ್ಟಗಾಯಗಳಾದರೂ ಕೂಡ ಪ್ರಥಮ ಚಿಕಿತ್ಸೆಯಾಗಿ ಮೊದಲು ಮಾಡಬೇಕಾದ ಕೆಲಸವೆಂದರೆ ತಣ್ಣೀರನ್ನು ಹಾಕುವುದು. ಉರಿ ಸ್ವಲ್ಪ ಕಡಿಮೆಯಾಗುವವರೆಗೆ ನೀರು ಹಾಕಬೇಕು. ಮೈ ಸುಟ್ಟುಕೊಂಡಿದ್ದರೆ ಸುಟ್ಟ ಬಟ್ಟೆಗಳನ್ನು ಮೈಯಿಂದ ಹಾಗೇ ಎಳೆದು ತೆಗೆಯಬಾರದು. ಬಟ್ಟೆ ಎಳೆದು ತೆಗೆದದರೆ ಬಟ್ಟೆ ಜೊತೆ ಚರ್ಮ ಕೂಡ ಕಿತ್ತುಕೊಂಡು ಬರುತ್ತದೆ. ಅದರ ಬದಲು ಮೈಗೆ ತುಂಬಾ ನೀರು ಹಾಕಬೇಕು.
ಟೂತ್ ಪೇಸ್ಟ್: ಟೂತ್ ಪೇಸ್ಟ್ಯನ್ನು ಹಲ್ಲುಜ್ಜಲು ಅಷ್ಟೆ ಅಲ್ಲ ಸುಟ್ಟ ಗಾಯಗಳ ಚಿಕಿತ್ಸೆಯಲ್ಲಿ ಬಳಸಬಹುದು. ಸುಟ್ಟಗಾಯಾಗಳಾದಾಗ ಟೂತ್ ಪೇಸ್ಟ್ ಹಚ್ಚಿದರೆ ಅದು ಗಾಯ ಗುಳ್ಳೆಗಳಾಗುವುದನ್ನು ತಡೆಯುತ್ತದೆ. ಅಲ್ಲದೆ ಗಾಯದ ಉರಿ ಕೂಡ ಕಡಿಮೆಯಾಗುತ್ತದೆ.
ಲೋಷನ್: ಸುಟ್ಟಗಾಯಾಗಳಾದಾಗ ಯಾವುದೇ ರೀತಿಯ ಲೋಷನ್ ಹಚ್ಚಬಾರದು. ಈ ರೀತಿ ಹಚ್ಚಿದರೆ ಗಾಯ ಮತ್ತಷ್ಟು ಹೆಚ್ಚಾಗುವುದು. ಸುಟ್ಟಗಾಯಾಗಳಾದಾಗ ಬ್ಯಾಂಡೇಜ್ ಸುತ್ತುವುದು ಕೂಡ ಒಳ್ಳೆಯದಲ್ಲ. ಸುಟ್ಟ ಗಾಯಗಳು ಗಾಳಿಗೆ ತೆರೆದುಕೊಂಡಿದ್ದರೆ ಚರ್ಮಕ್ಕೆ ಉಸಿರಾಟಕ್ಕೆ ಅನುಕೂಲವಾಗುತ್ತದೆ.
ಗಾಬರಿ ಬೀಳುವುದು:ಆಕಸ್ಮಿಕ ಬೆಂಕಿ ಕಾಣಿಸಿಕೊಂಡರೆ ಗಾಬರಿ ಬೀಳುವುದರಿಂದ ಅಪಾಯ ಮತ್ತಷ್ಟು ಹೆಚ್ಚಾಗುವುದು. ಬೆಂಕಿ ಮೈಹಚ್ಚಿಕೊಂಡಾಗ ಓಡಾಡಿದರೆ ಅಕ್ಕಪಕ್ಕದಲ್ಲಿ ಬೆಂಕಿ ಹರಡಿ, ಬೆಂಕಿ ಕೆಡುವುದರ ಬದಲು ಮತ್ತಷ್ಟು ಹೆಚ್ಚಾಗುವುದು. ಈ ಸಮಯದಲ್ಲಿ ನೆಲದಲ್ಲಿ ಮಲಗಿ ಹೊರಳಾಡಬೇಕು. ನಂತರ ಸಹಾಯಕ್ಕಾಗಿ ಕೂಗಿ, ಸಹಾಯ ಮಾಡಲು ಬಂದವರು ನೀರು ಅಥವಾ ಬ್ಲಾಂಕೆಟ್ ಹಾಕಿ ಬೆಂಕಿಯನ್ನು ನಂದಿಸುವಂತೆ ಹೇಳಿ. ಅವರು ಅವಸರದಿಂದ ಬಟ್ಟೆ ಎಳೆದರೆ ಚರ್ಮ ಕಿತ್ತು ಗಾಯದೊಡ್ಡದಾಗುವ ಸಾಧ್ಯತೆ ಹೆಚ್ಚು.
ವೈದ್ಯರನ್ನು ಸಂಪರ್ಕಿಸುವುದು: ನಂತರ ಸುಟ್ಟಗಾಯವಾದವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಆಸ್ಪತ್ರೆಗೆ ಕೊಂಡೊಯ್ಯುವಾಗ ಬಟ್ಟೆಯೆಲ್ಲಾ ಸುತ್ತಿಕೊಂಡು ಕೊಂಡೊಯ್ಯಬೇಡಿ. ಚರ್ಮಕ್ಕೆ ಗಾಳಿಯಾಡುವಂತೆ ಇದ್ದರೆ ಉರಿ ಸ್ವಲ್ಪ ಕಡಿಮೆಯಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications