Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಸುಟ್ಟ ಗಾಯಗಳಾದಾಗ ಪ್ರಥಮ ಚಿಕಿತ್ಸೆ ಹೀಗಿರಲಿ

ತಣ್ಣೀರು ಹಾಕುವುದು: ಸಣ್ಣ ಪುಟ್ಟ ಸುಟ್ಟಗಾಯಗಳಾದರೂ ಕೂಡ ಪ್ರಥಮ ಚಿಕಿತ್ಸೆಯಾಗಿ ಮೊದಲು ಮಾಡಬೇಕಾದ ಕೆಲಸವೆಂದರೆ ತಣ್ಣೀರನ್ನು ಹಾಕುವುದು. ಉರಿ ಸ್ವಲ್ಪ ಕಡಿಮೆಯಾಗುವವರೆಗೆ ನೀರು ಹಾಕಬೇಕು. ಮೈ ಸುಟ್ಟುಕೊಂಡಿದ್ದರೆ ಸುಟ್ಟ ಬಟ್ಟೆಗಳನ್ನು ಮೈಯಿಂದ ಹಾಗೇ ಎಳೆದು ತೆಗೆಯಬಾರದು. ಬಟ್ಟೆ ಎಳೆದು ತೆಗೆದದರೆ ಬಟ್ಟೆ ಜೊತೆ ಚರ್ಮ ಕೂಡ ಕಿತ್ತುಕೊಂಡು ಬರುತ್ತದೆ. ಅದರ ಬದಲು ಮೈಗೆ ತುಂಬಾ ನೀರು ಹಾಕಬೇಕು.
ಟೂತ್ ಪೇಸ್ಟ್: ಟೂತ್ ಪೇಸ್ಟ್ಯನ್ನು ಹಲ್ಲುಜ್ಜಲು ಅಷ್ಟೆ ಅಲ್ಲ ಸುಟ್ಟ ಗಾಯಗಳ ಚಿಕಿತ್ಸೆಯಲ್ಲಿ ಬಳಸಬಹುದು. ಸುಟ್ಟಗಾಯಾಗಳಾದಾಗ ಟೂತ್ ಪೇಸ್ಟ್ ಹಚ್ಚಿದರೆ ಅದು ಗಾಯ ಗುಳ್ಳೆಗಳಾಗುವುದನ್ನು ತಡೆಯುತ್ತದೆ. ಅಲ್ಲದೆ ಗಾಯದ ಉರಿ ಕೂಡ ಕಡಿಮೆಯಾಗುತ್ತದೆ.
ಲೋಷನ್: ಸುಟ್ಟಗಾಯಾಗಳಾದಾಗ ಯಾವುದೇ ರೀತಿಯ ಲೋಷನ್ ಹಚ್ಚಬಾರದು. ಈ ರೀತಿ ಹಚ್ಚಿದರೆ ಗಾಯ ಮತ್ತಷ್ಟು ಹೆಚ್ಚಾಗುವುದು. ಸುಟ್ಟಗಾಯಾಗಳಾದಾಗ ಬ್ಯಾಂಡೇಜ್ ಸುತ್ತುವುದು ಕೂಡ ಒಳ್ಳೆಯದಲ್ಲ. ಸುಟ್ಟ ಗಾಯಗಳು ಗಾಳಿಗೆ ತೆರೆದುಕೊಂಡಿದ್ದರೆ ಚರ್ಮಕ್ಕೆ ಉಸಿರಾಟಕ್ಕೆ ಅನುಕೂಲವಾಗುತ್ತದೆ.
ಗಾಬರಿ ಬೀಳುವುದು:ಆಕಸ್ಮಿಕ ಬೆಂಕಿ ಕಾಣಿಸಿಕೊಂಡರೆ ಗಾಬರಿ ಬೀಳುವುದರಿಂದ ಅಪಾಯ ಮತ್ತಷ್ಟು ಹೆಚ್ಚಾಗುವುದು. ಬೆಂಕಿ ಮೈಹಚ್ಚಿಕೊಂಡಾಗ ಓಡಾಡಿದರೆ ಅಕ್ಕಪಕ್ಕದಲ್ಲಿ ಬೆಂಕಿ ಹರಡಿ, ಬೆಂಕಿ ಕೆಡುವುದರ ಬದಲು ಮತ್ತಷ್ಟು ಹೆಚ್ಚಾಗುವುದು. ಈ ಸಮಯದಲ್ಲಿ ನೆಲದಲ್ಲಿ ಮಲಗಿ ಹೊರಳಾಡಬೇಕು. ನಂತರ ಸಹಾಯಕ್ಕಾಗಿ ಕೂಗಿ, ಸಹಾಯ ಮಾಡಲು ಬಂದವರು ನೀರು ಅಥವಾ ಬ್ಲಾಂಕೆಟ್ ಹಾಕಿ ಬೆಂಕಿಯನ್ನು ನಂದಿಸುವಂತೆ ಹೇಳಿ. ಅವರು ಅವಸರದಿಂದ ಬಟ್ಟೆ ಎಳೆದರೆ ಚರ್ಮ ಕಿತ್ತು ಗಾಯದೊಡ್ಡದಾಗುವ ಸಾಧ್ಯತೆ ಹೆಚ್ಚು.
ವೈದ್ಯರನ್ನು ಸಂಪರ್ಕಿಸುವುದು: ನಂತರ ಸುಟ್ಟಗಾಯವಾದವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಆಸ್ಪತ್ರೆಗೆ ಕೊಂಡೊಯ್ಯುವಾಗ ಬಟ್ಟೆಯೆಲ್ಲಾ ಸುತ್ತಿಕೊಂಡು ಕೊಂಡೊಯ್ಯಬೇಡಿ. ಚರ್ಮಕ್ಕೆ ಗಾಳಿಯಾಡುವಂತೆ ಇದ್ದರೆ ಉರಿ ಸ್ವಲ್ಪ ಕಡಿಮೆಯಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











