Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಈ ಖಾರಗಳನ್ನು ತಿನ್ನದಿದ್ದರೆ ಆರೋಗ್ಯಕ್ಕೆ ನಷ್ಟ
ಊಟಕ್ಕೆ ಸ್ವಲ್ಪ ಖಾರವಿದ್ದರೆ ಮಾತ್ರ ಊಟ ರುಚಿಸುವುದು. ಆದರೆ ಕೆಲವರು ಖಾರ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಹೇಳುತ್ತಾರೆ. ತುಂಬಾ ಖಾರ ತಿಂದರೆ ಹೊಟ್ಟೆ ಉರಿ ಕಾಣಿಸಿಕೊಳ್ಳುವುದು. ಆದರೆ ದೇಹದ ಆರೋಗ್ಯಕ್ಕೆ ಸ್ವಲ್ಪವಾದರೂ ಖಾರ ತಿನ್ನಬೇಕು! ಯಾವ ಬಗೆಯ ಖಾರದ ಸಾಮಾಗ್ರಿಗಳು ಆರೋಗ್ಯಕ್ಕೆ ಒಳ್ಳೆಯದು ಮತ್ತು ಅದು ಏಕೆ ಒಳ್ಳೆಯದು ಎಂಬ ಅಂಶಗಳನ್ನು ಇಲ್ಲಿ ನೀಡಲಾಗಿದೆ ನೋಡಿ:

ದೊಡ್ಡ ಮೆಣಸಿನ ಕಾಯಿ: ಕೆಂಪು ಮೆಣಸಿನ ಕಾಯಿ antioxidants ಗುಣವನ್ನು ಹೊಂದಿದ್ದು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ದೇಹದಲ್ಲಿ ಜೀರ್ಣಕ್ರಿಯೆಯನ್ನು ಹೆಚ್ಚು ಮಾಡುವುದರ ಜೊತೆಗೆ ಡಯಾರಿಯಾ ರೋಗದ ವಿರುದ್ಧ ಹೋರಾಡುವ ಸಾಮಾರ್ಥ್ಯವನ್ನು ಹೊಂದಿದೆ. ಆಹಾರ ವಿಷಮಯವಾದರೆ (ಫುಟ್ ಪಾಯಿಷನ್) ದೊಡ್ಡ ಮೆಣಸಿನ ಕಾಯಿ ತಿನ್ನುವುದು ಒಳ್ಳೆಯದು.
ಅರಿಶಿಣ: ಯಾವುದೇ ಆಹಾರವಾಗಿರಲಿ ಅದಕ್ಕೆ ಸ್ವಲ್ಪ ಅರಿಶಿಣ ಸೇರಿಸಿದರೆ ಆಹಾರದ ರುಚಿ ಹೆಚ್ಚಾಗುವುದು. ಇದು ಆಹಾರದ ರುಚಿಯಷ್ಟೇ ಅಲ್ಲ ಆರೋಗ್ಯವನ್ನು ಕೂಡ ಹೆಚ್ಚಿಸುತ್ತದೆ. ಗಂಟಲಿನಲ್ಲಿ ಕೆರತ ಉಂಟಾದರೆ ಬಿಸಿ ಹಾಲಿಗೆ ಸ್ವಲ್ಪ ಅರಿಶಿಣ ಹಾಕಿ ಕುಡಿದರೆ ಸಾಕು ಕೂಡಲೇ ನಿವಾರಣೆ ಆಗುವುದು. ಗಾಯಗಳು ಉಂಟಾದರೆ ಬೇಗನೆ ಒಣಗಲು, ಜೀರ್ಣಕ್ರಿಯೆ ಸುಲಭವಾಗಿ ಆಗಲು, ದೇಹದಲ್ಲಿರುವ ಕಷ್ಮಲಗಳನ್ನು ತೆಗೆದು ಹಾಕಲು ಅರಿಶಿಣ ಸಹಾಯ ಮಾಡುತ್ತದೆ. ಅರಿಶಿಣ ಕ್ಯಾನ್ಸರ್ ರೋಗದ ವಿರುದ್ಧ ಹೋರಾಡುವ ಸಾಮಾರ್ಥ್ಯವನ್ನು ಹೊಂದಿದೆ.
ಬೆಳ್ಳುಳ್ಳಿ: ಹೊಟ್ಟೆಗೆ ಏನಾದರೂ ಸೋಂಕು ತಾಗಿದ್ದರೆ ಬೆಳ್ಳುಳ್ಳಿ ತಿಂದರೆ ಗುಣಮುಖವಾಗುವುದು. ಇದನ್ನು ಟೀಯಲ್ಲಿ ಹಾಕಿ ಕುಡಿದರೆ ತಲೆ ನೋವು ತಕ್ಷಣ ಕಡಿಮೆಯಾಗುತ್ತದೆ. ಕೆಮ್ಮು ಮತ್ತು ಶೀತವನ್ನು ಹೋಗಲಾಡಿಸುತ್ತದೆ. ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಖಿನ್ನತೆಯನ್ನು ಹೋಗಲಾಡಿಸುವಲ್ಲಿ ಬೆಳ್ಳುಳ್ಳಿ ಸಹಕರಿಯಾಗಿದೆ.
ಕೆಂಪು ಮೆಣಸಿನ ಕಾಯಿ: ದೇಹದಲ್ಲಿರುವ ಕಷ್ಮಲಗಳನ್ನು ಹೋಗಲಾಡಿಸುವಲ್ಲಿ ಕೆಂಪು ಮೆಣಸಿನಕಾಯಿ ತುಂಬಾ ಸಹಕಾರಿಯಾಗಿದೆ.
ಚಕ್ಕೆ: ಚಕ್ಕೆ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಲು ಸಹಕಾರಿಯಾಗಿದೆ. ಅಜೀರ್ಣ ಸಮಸ್ಯೆ ಇದ್ದರೆ ಟೀಗೆ ಚಕ್ಕೆ ಹಾಕಿ ಕುಡಿದರೆ ಆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಹಲ್ಲು ನೋವು ಉಂಟಾದರೆ ಚಕ್ಕೆ ಪುಡಿ ಮಾಡಿ ಸ್ವಲ್ಪ ಹೊತ್ತು ಹಲ್ಲಿನಲ್ಲಿಟ್ಟರೆ ನೋವು ಕಡಿಮೆಯಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications