Latest Updates
-
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್
ಆರೋಗ್ಯಕ್ಕಾಗಿ 10 ಮುಖ್ಯ ಮನೆ ಔಷಧಿ

ಆದರೆ ಈ ರೀತಿಯ ಅಭ್ಯಾಸಕ್ಕಿಂತ ಸಣ್ಣ ಪುಟ್ಟ ಕಾಯಿಲೆಗಳಿಗೆ ಮನೆ ಮದ್ದು ಬಳಸುವುದು ಒಳ್ಳೆಯದು. ಇದರಿಂದ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ, ಕಾಯಿಲೆ ಕೂಡ ಗುಣಮುಖವಾಗುವುದು. ಆದ್ದರಿಂದ ಈ ಕೆಳಗಿನ ಸಲಹೆಯು ತುಂಬಾ ಸಹಕಾರಿಯಾಗುವುದು.
1. ನೀರು: ದೇಹದಲ್ಲಿ ನೀರಿನಂಶ ಕಡಿಮೆಯಾದರೆ ತಲೆಸುತ್ತು, ಸುಸ್ತು ಕಂಡು ಬರುತ್ತದೆ, ದೇಹದಲ್ಲಿ ನೀರಿನಂಶ ಕಡಿಮೆಯಾದರೆ ಹೃದಯ ಬಡಿತ ಹೆಚ್ಚಾಗುವುದು, ಮೂತ್ರದ ಬಣ್ಣದಲ್ಲಿ ವ್ಯತ್ಯಾಸ, ಕೈ ಕಾಲುಗಳ ಸ್ನಾಯುಗಳಲ್ಲಿ ಸೆಳತ, ತಲೆ ಸುತ್ತು ಕಂಡು ಬರುತ್ತದೆ. ಇದನ್ನೆಲ್ಲಾ ತಡೆಯಲು ಪ್ರತಿದಿನ 8-10 ಲೋಟ ನೀರನ್ನು ಕಡ್ಡಾಯವಾಗಿ ಕುಡಿಯಬೇಕು.
2. ಕ್ಲಬ್ ಸೋಡಾ: ಈ ಸೋಡಾ ಬಳಸಿದರೆ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ. ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾದಾಗ (dehydration) ಅಥವಾ ಹೊಟ್ಟೆ ಕೆಟ್ಟಾಗ ಇದನ್ನು ನೀರಿನಲ್ಲಿ ಕಲೆಸಿ ಕುಡಿದರೆ ಒಳ್ಳೆಯದು.
3. ಚಾಕಲೇಟ್ ಮಿಲ್ಕ್: ಚಾಕಲೇಟ್ ಮಿಲ್ಕ್ ಕುಡಿದರೆ ಸುಸ್ತು ನಿವಾರಣೆಯಾಗುತ್ತದೆ, ಆದ್ದರಿಂದ ಇದನ್ನು ಎನರ್ಜಿ ಡ್ರಿಂಕ್ ಆಗಿ ಉಪಯೋಗಿಸಬಹುದು.
4. ಜೇನು: ಮನೆ ಅಂದ ಮೇಲೆ ಜೇನು ಇಡುವುದು ಅವಶ್ಯಕ. ಜೇನನ್ನು ಅನೇಕ ಕಾಯಿಲೆಗಳನ್ನು ಗುಣಪಡಿಸಲು ಉಪಯೋಗಿಸಬಹುದು. ಅಜೀರ್ಣ, ಬೇಧಿ ಉಂಟಾದಾಗ ಹರಿವೆ ಸೊಪ್ಪಿನ ರಸಕ್ಕೆ ಚಿಟಿಕೆ ಏಲಕ್ಕಿ ಪುಡಿ ಮತ್ತು ಜೇನು ಬೆರೆಸಿ ಕುಡಿಯುವುದರಿಂದ ಬೇಧಿ ಕಡಿಮೆಯಾಗುತ್ತದೆ, ಇದನ್ನು ಮಕ್ಕಳಿಗೂ ಕೊಡಬಹುದಾಗಿದೆ. ಕೆಮ್ಮು ಕಾಣಿಸಿಕೊಂಡಾಗ ಜೇನಿಗೆ ಸ್ವಲ್ಪ ಕಾಳು ಮೆಣಸಿನ ಪುಡಿ ಮತ್ತು ತುಳಸಿ ರಸ ಸೇರಿಸಿ ಕುಡಿದರೆ ಗಂಟಲು ಕೆರತ, ಕೆಮ್ಮು ನಿವಾರಣೆಯಾಗುವುದು.
5. ಆಪಲ್ ಸೈಡರ್ ವಿನಿಗರ್: ಕೆಲವೊಮ್ಮೆ ಹೊಟ್ಟೆಯಲ್ಲಿ ಗ್ಯಾಸ್ ತುಂಬಿದಾಗ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ. ಅಗ 2 ಚಮಚ ಆಪಲ್ ಸೈಡರ್ ವಿನಿಗರ್ ಅನ್ನು ಒಂದು ಲೋಟ ಬಿಸಿ ನೀರಿನಲ್ಲಿ ಹಾಕಿ ಕುಡಿದರೆ ನೋವು ಕಡಿಮೆಯಾಗುವುದು. ದೇಹದಲ್ಲಿ ನಿಶ್ಯಕ್ತಿ ಉಂಟಾದಾಗ ಕೂಡ ಈ ರೀತಿ ಕುಡಿದರೆ ಶಕ್ತಿ ದೊರೆಯುತ್ತದೆ.
6. ನಿಂಬೆ ರಸ: ಪ್ರತಿದಿನ ನಿಂಬೆ ಪಾನಕ ಕುಡಿದರೆ ಅಸಿಡಿಟಿ ಸಮಸ್ಯೆ ಉಂಟಾಗುವುದಿಲ್ಲ. ನಿಂಬೆ ಪಾನಕವು ದೇಹದಲ್ಲಿ ರಕ್ತ ಸಂಚಾರ ಸರಿಯಾದ ರೀತಿಯಲ್ಲಿ ನಡೆಯಲು ಸಹಾಯಮಾಡುವುದು.
7. ಚಕ್ಕೆ: ಪ್ರತಿದಿನ ಅರ್ಧ ಚಮಚದಷ್ಟು ಚಕ್ಕೆ ತಿನ್ನುತ್ತಾ ಬಂದರೆ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್(ಬೊಜ್ಜು) ಕಡಿಮೆಯಾಗುವುದು. ಇದು ಮಧುಮೇಹ, ಮಂಡಿ ನೋವು, ಲುಕೆಮಿಯಾ ಮುಂತಾದ ಸಮಸ್ಯೆಗಳನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.
8. ಶುಂಠಿ: ಕೆಮ್ಮು ಕಫ ಸಮಸ್ಯೆ ಇದ್ದರೆ ಶುಂಠಿ ಕಷಾಯ ಮಾಡಿ ಕುಡಿದರೆ ಒಳ್ಳೆಯದು. ಶುಂಠಿ ಜೀರ್ಣಕ್ರಿಯೆಗೆ ತುಂಬಾ ಸಹಕಾರಿಯಾಗಿದೆ. ದೇಹದಲ್ಲಿ ಜೀರ್ಣಶಕ್ತಿ ಕುಂದಿದಾಗ, ಅಮದೋಷದಿಂದ ವಾಯುನೋವು ಉಂಟಾಗುವುದು. ಇದನ್ನು ಹೋಗಲಾಡಿಸಲು ಶುಂಠಿ ತಿಂದರೆ ಪಚನಕ್ರಿಯೆ ಸರಿಯಾಗಿ ಆಗುವುದರಿಂದ ನೋವು ನಿವಾರಣೆಯಾಗುವುದು.
9. ಬೆಳ್ಳುಳ್ಳಿ: ಆರೋಗ್ಯ ಹೆಚ್ಚಿಸುವಲ್ಲಿ ಬೆಳ್ಳುಳ್ಳಿ ಪಾತ್ರವನ್ನು ನಿರಾಕರಿಸುವಂತೆ ಇಲ್ಲ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ರಕ್ತವನ್ನು ಶುದ್ಧೀಕರಿಸುತ್ತದೆ. ಇದನ್ನು ಹಸಿಯಾಗಿ ಬೆಳಗ್ಗೆ ತಿಂದರೆ ದೇಹದಲ್ಲಿರುವ ಅಧಿಕ ಬೊಜ್ಜು ಕಡಿಮೆಯಾಗುವುದು.
10. ಹೈಡ್ರೋಜನ್ ಪೆರಾಕ್ಸೈಡ್: ಅಲರ್ಜಿಯಿಂದ ತಲೆನೋವು ಉಂಟಾಗಿದ್ದರೆ , ಗಂಟಲಿನಲ್ಲಿ ಕೆರತ, ಮುಟ್ಟಿನ ತೊಂದರೆ ಈ ಸಮಸ್ಯೆಗಳ ನಿವಾರಣೆಗೆ ಹೈಡ್ರೋಜನ್ ಪರಾಕ್ಸೈಡ್ ತುಂಬಾ ಸಹಕಾರಿಯಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications