Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
ಆರೋಗ್ಯಕರ ಜೀವನಕ್ಕಾಗಿ 12 ಸರಳ ಸೂತ್ರಗಳು

ಈ ಕೆಳಗ್ಗೆ ಕೆಲ ಸಲಹೆಗಳನ್ನು ನೀಡಲಾಗಿದೆ. ಅವುಗಳು ನಿಮ್ಮನ್ನು ಆರೋಗ್ಯವಂತರಾಗಿ ಇಡುವಲ್ಲಿ ಸಹಕಾರಿಯಾಗಿದೆ.
1. ಪ್ರತಿದಿನ ಹಸಿ ಕರಿ ಬೇವಿನ ಎಲೆ ತಿಂದರೆ ಅಕಾಲಿಕ ಮುಪ್ಪು ಉಂಟಾಗುವುದಿಲ್ಲ. ಅಲ್ಲದೆ ಇದನ್ನು ತಿಂದರೆ ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ.
2. ಅಧಿಕ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಇದ್ದರೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದರೆ ಉತ್ತಮ ಪ್ರಯೋಜನವನ್ನು ಕಾಣಬಹುದು.
3. ಅಜೀರ್ಣತೆ ಉಂಟಾದರೆ 2-3 ಬೆಳ್ಳುಳ್ಳಿ ಎಸಳುಗಳನ್ನು ತೆಗೆದುಕೊಂಡು ಜಜ್ಜಿ, ಅದನ್ನು ಹಾಲಿನಲ್ಲಿ ಹಾಕಿ ಕುದಿಸಿ ಕುಡಿದರೆ ತಕ್ಷಣ ಗುಣವಾಗುವುದು.
4. ನಿದ್ದೆ ಸರಿಯಾಗಿ ಬರದಿದ್ದರೆ ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ಅರೆದು ಅದರಿಂದ ಜ್ಯೂಸ್ ಮಾಡಿ ಕುಡಿದರೆ ತಕ್ಷಣ ನಿದ್ದೆ ಬರುತ್ತದೆ.
5. ಕೊತ್ತಂಬರಿ ಸೊಪ್ಪಿನ ರಸವನ್ನು ಮೊಸರಿನಲ್ಲಿ ಹಾಕಿ ಮಿಶ್ರ ಮಾಡಿ ಕುಡಿದರೆ ಅಜೀರ್ಣ ಸಮಸ್ಯೆ ನಿವಾರಣೆಯಾಗುವುದು.
6. ರಕ್ತಹೀನತೆ ಉಂಟಾಗಿದ್ದರೆ ಮೆಂತೆಯನ್ನು ನೀರಿನಲ್ಲಿ ನೆನೆ ಹಾಕಿ ಪ್ರತಿದಿನ ಬೆಳಗ್ಗೆ ತಿಂದರೆ ಒಳ್ಳೆಯದು. ಬೀಟ್ ರೂಟ್ ತಿನ್ನುವುದು ಮತ್ತು ಕಬ್ಬಿಣದಂಶವಿರುವ ಆಹಾರಗಳ ಸೇವನೆ ಒಳ್ಳೆಯದು.
7. ಶೀತವಾಗಿದ್ದರೆ ಶುಂಠಿ ರಸವನ್ನು ಜೇನು ಮತ್ತು ತುಳಸಿ ರಸದ ಜೊತೆ ಮಿಶ್ರ ಮಾಡಿ ಅದಕ್ಕೆ ಎರಡು ಕಾಳು ಕರಿಮೆಣಸಿನ ಪುಡಿ ಹಾಕಿ ಮಿಶ್ರ ಮಾಡಿದರೆ ಸೇವಿಸಿದರೆ ಒಳ್ಳೆಯದು.
8. ಅಸಿಡಿಟಿ ಇದ್ದರೆ ನಿಂಬೆ ಪಾನಕದ ಜೊತೆ ಶೂಂಠಿ ರಸ ಮಿಶ್ರ ಮಾಡಿ ಕುಡಿಯುವುದು ಒಳ್ಳೆಯದು.
9. ಪುದೀನಾ ಜೀರ್ಣ ಕ್ರಿಯೆಗೆ ಒಳ್ಳೆಯದು.
10. ಅಸ್ತಮಾ ಖಾಯಿಲೆಗೆ 3-4 ಎಸಳು ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿಗೆ ಹಾಕಿ ಕಾಯಿಸಿ ರಾತ್ರಿ ಕುಡಿಯುವುದು ಒಳ್ಳೆಯದು.
11. ಬಾಳೆ ಹಣ್ಣು ಕಿಡ್ನಿಯಲ್ಲಿರುವ ಕಶ್ಮಲಗಳನ್ನು ತೆಗೆದುಹಾಕಲು ಮತ್ತು ಮಲಬದ್ಧತೆ ಸಮಸ್ಯೆಯನ್ನು ತೊಡೆದು ಹಾಕಲು ಸಹಕಾರಿಯಾಗಿದೆ. ಪ್ರತಿನಿತ್ಯ ಒಂದು ಬಾಳೆಹಣ್ಣು ತಿಂದರೆ ದೇಹಕ್ಕೆ ಉತ್ತಮ ಪೋಷಕಾಂಶ ದೊರೆಯುತ್ತದೆ. ಆದರೆ ತುಂಬಾ ಬಾಳೆಹಣ್ಣು ತಿಂದರೆ ದೇಹದ ತೂಕ ಹೆಚ್ಚಾಗುವುದು. ಬಾಳೆಹಣ್ಣು ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ.
12. ಓಟ್ ಮೀಲ್ಸ್ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆ ಮಾಡಲು ಸಹಕಾರಿಯಾಗಿದೆ.ಇದನ್ನು ಬೆಳಗ್ಗಿನ ತಿಂಡಿಯಾಗಿ ಸೇವಿಸಿದರೆ ಬೇಗನೆ ತೆಳ್ಳಗಾಗಬಹುದು.
ಚಿಕ್ಕ ಪುಟ್ಟ ಕಾಯಿಲೆಗೆ ಆಸ್ಪತ್ರೆಗೆ ಹೋಗುವ ಬದಲು ಈ ಮೇಲಿನ ಸಲಹೆಗಳನ್ನು ಅನುಸರಿಸಿದರೆ ಕಾಯಿಲೆ ಗುಣಮುಖವಾಗುವುದು ಮತ್ತು ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications