Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಆರೋಗ್ಯಕರ ಜೀವನಕ್ಕಾಗಿ 12 ಸರಳ ಸೂತ್ರಗಳು

ಈ ಕೆಳಗ್ಗೆ ಕೆಲ ಸಲಹೆಗಳನ್ನು ನೀಡಲಾಗಿದೆ. ಅವುಗಳು ನಿಮ್ಮನ್ನು ಆರೋಗ್ಯವಂತರಾಗಿ ಇಡುವಲ್ಲಿ ಸಹಕಾರಿಯಾಗಿದೆ.
1. ಪ್ರತಿದಿನ ಹಸಿ ಕರಿ ಬೇವಿನ ಎಲೆ ತಿಂದರೆ ಅಕಾಲಿಕ ಮುಪ್ಪು ಉಂಟಾಗುವುದಿಲ್ಲ. ಅಲ್ಲದೆ ಇದನ್ನು ತಿಂದರೆ ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ.
2. ಅಧಿಕ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಇದ್ದರೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದರೆ ಉತ್ತಮ ಪ್ರಯೋಜನವನ್ನು ಕಾಣಬಹುದು.
3. ಅಜೀರ್ಣತೆ ಉಂಟಾದರೆ 2-3 ಬೆಳ್ಳುಳ್ಳಿ ಎಸಳುಗಳನ್ನು ತೆಗೆದುಕೊಂಡು ಜಜ್ಜಿ, ಅದನ್ನು ಹಾಲಿನಲ್ಲಿ ಹಾಕಿ ಕುದಿಸಿ ಕುಡಿದರೆ ತಕ್ಷಣ ಗುಣವಾಗುವುದು.
4. ನಿದ್ದೆ ಸರಿಯಾಗಿ ಬರದಿದ್ದರೆ ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ಅರೆದು ಅದರಿಂದ ಜ್ಯೂಸ್ ಮಾಡಿ ಕುಡಿದರೆ ತಕ್ಷಣ ನಿದ್ದೆ ಬರುತ್ತದೆ.
5. ಕೊತ್ತಂಬರಿ ಸೊಪ್ಪಿನ ರಸವನ್ನು ಮೊಸರಿನಲ್ಲಿ ಹಾಕಿ ಮಿಶ್ರ ಮಾಡಿ ಕುಡಿದರೆ ಅಜೀರ್ಣ ಸಮಸ್ಯೆ ನಿವಾರಣೆಯಾಗುವುದು.
6. ರಕ್ತಹೀನತೆ ಉಂಟಾಗಿದ್ದರೆ ಮೆಂತೆಯನ್ನು ನೀರಿನಲ್ಲಿ ನೆನೆ ಹಾಕಿ ಪ್ರತಿದಿನ ಬೆಳಗ್ಗೆ ತಿಂದರೆ ಒಳ್ಳೆಯದು. ಬೀಟ್ ರೂಟ್ ತಿನ್ನುವುದು ಮತ್ತು ಕಬ್ಬಿಣದಂಶವಿರುವ ಆಹಾರಗಳ ಸೇವನೆ ಒಳ್ಳೆಯದು.
7. ಶೀತವಾಗಿದ್ದರೆ ಶುಂಠಿ ರಸವನ್ನು ಜೇನು ಮತ್ತು ತುಳಸಿ ರಸದ ಜೊತೆ ಮಿಶ್ರ ಮಾಡಿ ಅದಕ್ಕೆ ಎರಡು ಕಾಳು ಕರಿಮೆಣಸಿನ ಪುಡಿ ಹಾಕಿ ಮಿಶ್ರ ಮಾಡಿದರೆ ಸೇವಿಸಿದರೆ ಒಳ್ಳೆಯದು.
8. ಅಸಿಡಿಟಿ ಇದ್ದರೆ ನಿಂಬೆ ಪಾನಕದ ಜೊತೆ ಶೂಂಠಿ ರಸ ಮಿಶ್ರ ಮಾಡಿ ಕುಡಿಯುವುದು ಒಳ್ಳೆಯದು.
9. ಪುದೀನಾ ಜೀರ್ಣ ಕ್ರಿಯೆಗೆ ಒಳ್ಳೆಯದು.
10. ಅಸ್ತಮಾ ಖಾಯಿಲೆಗೆ 3-4 ಎಸಳು ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿಗೆ ಹಾಕಿ ಕಾಯಿಸಿ ರಾತ್ರಿ ಕುಡಿಯುವುದು ಒಳ್ಳೆಯದು.
11. ಬಾಳೆ ಹಣ್ಣು ಕಿಡ್ನಿಯಲ್ಲಿರುವ ಕಶ್ಮಲಗಳನ್ನು ತೆಗೆದುಹಾಕಲು ಮತ್ತು ಮಲಬದ್ಧತೆ ಸಮಸ್ಯೆಯನ್ನು ತೊಡೆದು ಹಾಕಲು ಸಹಕಾರಿಯಾಗಿದೆ. ಪ್ರತಿನಿತ್ಯ ಒಂದು ಬಾಳೆಹಣ್ಣು ತಿಂದರೆ ದೇಹಕ್ಕೆ ಉತ್ತಮ ಪೋಷಕಾಂಶ ದೊರೆಯುತ್ತದೆ. ಆದರೆ ತುಂಬಾ ಬಾಳೆಹಣ್ಣು ತಿಂದರೆ ದೇಹದ ತೂಕ ಹೆಚ್ಚಾಗುವುದು. ಬಾಳೆಹಣ್ಣು ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ.
12. ಓಟ್ ಮೀಲ್ಸ್ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆ ಮಾಡಲು ಸಹಕಾರಿಯಾಗಿದೆ.ಇದನ್ನು ಬೆಳಗ್ಗಿನ ತಿಂಡಿಯಾಗಿ ಸೇವಿಸಿದರೆ ಬೇಗನೆ ತೆಳ್ಳಗಾಗಬಹುದು.
ಚಿಕ್ಕ ಪುಟ್ಟ ಕಾಯಿಲೆಗೆ ಆಸ್ಪತ್ರೆಗೆ ಹೋಗುವ ಬದಲು ಈ ಮೇಲಿನ ಸಲಹೆಗಳನ್ನು ಅನುಸರಿಸಿದರೆ ಕಾಯಿಲೆ ಗುಣಮುಖವಾಗುವುದು ಮತ್ತು ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications









