Latest Updates
-
ಮಳೆಗಾಲದ ಮದುವೆ: ನಿಮ್ಮ ಸಂಭ್ರಮಕ್ಕೆ ಅಡ್ಡಿಯಾಗದಂತೆ ಪ್ಲಾನ್ ಮಾಡುವುದು ಹೇಗೆ? -
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್
ಆರೋಗ್ಯಕರ ಜೀವನಕ್ಕಾಗಿ 12 ಸರಳ ಸೂತ್ರಗಳು

ಈ ಕೆಳಗ್ಗೆ ಕೆಲ ಸಲಹೆಗಳನ್ನು ನೀಡಲಾಗಿದೆ. ಅವುಗಳು ನಿಮ್ಮನ್ನು ಆರೋಗ್ಯವಂತರಾಗಿ ಇಡುವಲ್ಲಿ ಸಹಕಾರಿಯಾಗಿದೆ.
1. ಪ್ರತಿದಿನ ಹಸಿ ಕರಿ ಬೇವಿನ ಎಲೆ ತಿಂದರೆ ಅಕಾಲಿಕ ಮುಪ್ಪು ಉಂಟಾಗುವುದಿಲ್ಲ. ಅಲ್ಲದೆ ಇದನ್ನು ತಿಂದರೆ ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ.
2. ಅಧಿಕ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಇದ್ದರೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದರೆ ಉತ್ತಮ ಪ್ರಯೋಜನವನ್ನು ಕಾಣಬಹುದು.
3. ಅಜೀರ್ಣತೆ ಉಂಟಾದರೆ 2-3 ಬೆಳ್ಳುಳ್ಳಿ ಎಸಳುಗಳನ್ನು ತೆಗೆದುಕೊಂಡು ಜಜ್ಜಿ, ಅದನ್ನು ಹಾಲಿನಲ್ಲಿ ಹಾಕಿ ಕುದಿಸಿ ಕುಡಿದರೆ ತಕ್ಷಣ ಗುಣವಾಗುವುದು.
4. ನಿದ್ದೆ ಸರಿಯಾಗಿ ಬರದಿದ್ದರೆ ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ಅರೆದು ಅದರಿಂದ ಜ್ಯೂಸ್ ಮಾಡಿ ಕುಡಿದರೆ ತಕ್ಷಣ ನಿದ್ದೆ ಬರುತ್ತದೆ.
5. ಕೊತ್ತಂಬರಿ ಸೊಪ್ಪಿನ ರಸವನ್ನು ಮೊಸರಿನಲ್ಲಿ ಹಾಕಿ ಮಿಶ್ರ ಮಾಡಿ ಕುಡಿದರೆ ಅಜೀರ್ಣ ಸಮಸ್ಯೆ ನಿವಾರಣೆಯಾಗುವುದು.
6. ರಕ್ತಹೀನತೆ ಉಂಟಾಗಿದ್ದರೆ ಮೆಂತೆಯನ್ನು ನೀರಿನಲ್ಲಿ ನೆನೆ ಹಾಕಿ ಪ್ರತಿದಿನ ಬೆಳಗ್ಗೆ ತಿಂದರೆ ಒಳ್ಳೆಯದು. ಬೀಟ್ ರೂಟ್ ತಿನ್ನುವುದು ಮತ್ತು ಕಬ್ಬಿಣದಂಶವಿರುವ ಆಹಾರಗಳ ಸೇವನೆ ಒಳ್ಳೆಯದು.
7. ಶೀತವಾಗಿದ್ದರೆ ಶುಂಠಿ ರಸವನ್ನು ಜೇನು ಮತ್ತು ತುಳಸಿ ರಸದ ಜೊತೆ ಮಿಶ್ರ ಮಾಡಿ ಅದಕ್ಕೆ ಎರಡು ಕಾಳು ಕರಿಮೆಣಸಿನ ಪುಡಿ ಹಾಕಿ ಮಿಶ್ರ ಮಾಡಿದರೆ ಸೇವಿಸಿದರೆ ಒಳ್ಳೆಯದು.
8. ಅಸಿಡಿಟಿ ಇದ್ದರೆ ನಿಂಬೆ ಪಾನಕದ ಜೊತೆ ಶೂಂಠಿ ರಸ ಮಿಶ್ರ ಮಾಡಿ ಕುಡಿಯುವುದು ಒಳ್ಳೆಯದು.
9. ಪುದೀನಾ ಜೀರ್ಣ ಕ್ರಿಯೆಗೆ ಒಳ್ಳೆಯದು.
10. ಅಸ್ತಮಾ ಖಾಯಿಲೆಗೆ 3-4 ಎಸಳು ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿಗೆ ಹಾಕಿ ಕಾಯಿಸಿ ರಾತ್ರಿ ಕುಡಿಯುವುದು ಒಳ್ಳೆಯದು.
11. ಬಾಳೆ ಹಣ್ಣು ಕಿಡ್ನಿಯಲ್ಲಿರುವ ಕಶ್ಮಲಗಳನ್ನು ತೆಗೆದುಹಾಕಲು ಮತ್ತು ಮಲಬದ್ಧತೆ ಸಮಸ್ಯೆಯನ್ನು ತೊಡೆದು ಹಾಕಲು ಸಹಕಾರಿಯಾಗಿದೆ. ಪ್ರತಿನಿತ್ಯ ಒಂದು ಬಾಳೆಹಣ್ಣು ತಿಂದರೆ ದೇಹಕ್ಕೆ ಉತ್ತಮ ಪೋಷಕಾಂಶ ದೊರೆಯುತ್ತದೆ. ಆದರೆ ತುಂಬಾ ಬಾಳೆಹಣ್ಣು ತಿಂದರೆ ದೇಹದ ತೂಕ ಹೆಚ್ಚಾಗುವುದು. ಬಾಳೆಹಣ್ಣು ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ.
12. ಓಟ್ ಮೀಲ್ಸ್ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆ ಮಾಡಲು ಸಹಕಾರಿಯಾಗಿದೆ.ಇದನ್ನು ಬೆಳಗ್ಗಿನ ತಿಂಡಿಯಾಗಿ ಸೇವಿಸಿದರೆ ಬೇಗನೆ ತೆಳ್ಳಗಾಗಬಹುದು.
ಚಿಕ್ಕ ಪುಟ್ಟ ಕಾಯಿಲೆಗೆ ಆಸ್ಪತ್ರೆಗೆ ಹೋಗುವ ಬದಲು ಈ ಮೇಲಿನ ಸಲಹೆಗಳನ್ನು ಅನುಸರಿಸಿದರೆ ಕಾಯಿಲೆ ಗುಣಮುಖವಾಗುವುದು ಮತ್ತು ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications