Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಖರ್ಜೂರದಲ್ಲಿದೆ 7 ಪ್ರಮುಖ ಆರೋಗ್ಯವರ್ಧಕ ಗುಣಗಳು
ಖರ್ಜೂರ ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವಂತಹ ಹಣ್ಣಾಗಿದೆ. ಸಿಹಿಯಾದ, ಪುಷ್ಠಿಯಾದ ಈ ಹಣ್ಣಿನಲ್ಲಿ ಆರೋಗ್ಯವರ್ಧಕ ಗುಣಗಳಿರುವುದರಿಂದ ಪ್ರತಿದಿನ ಒಂದು ಅಥವಾ ಎರಡು ಖರ್ಜೂವನ್ನು ಬಾಯಿಗೆ ಹಾಕಿಕೊಳ್ಳುವುದು ಒಳ್ಳೆಯದು. ಇದನ್ನು ತಿಂದರೆ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ರಕ್ತ ಹೀನತೆ ಸಮಸ್ಯೆಯನ್ನು ಹೋಗಲಾಡಿಸಬಹುದು. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಕರ್ಜೂರ ತಿಂದರೆ ಸಾಕು ಕಡಿಮೆಯಾಗುವುದು.
ಖರ್ಜೂರದಲ್ಲಿ ವಿಟಮಿನ್ ಗಳು ಮತ್ತು ಖನಿಜಾಂಶಗಳು ಹೇರಳವಾಗಿರುವುದರಿಂದ ಈ ಕೆಳಗಿನ ಪ್ರಮುಖ ಕಾಯಿಲೆಗಳ ನಿಬವಾರಣೆಗೆ ತುಂಬಾ ಸಹಕಾರಿಯಾಗಿದೆ.

1.ಹೃದ್ರೋಗ ಸಮಸ್ಯೆ ಕಡಿಮೆಮಾಡಲು
ಹೃದ್ರೋಗ ಸಮಸ್ಯೆ ಇರುವವರು ಖರ್ಜೂರವನ್ನು ರಾತ್ರಿಯಲ್ಲಿ ನೀರಿನಲ್ಲಿ ನೆನೆಹಾಕಿ ಬೆಳಗ್ಗೆ ಅದನ್ನು ಜ್ಯೂಸ್ ರೀತಿ ಮಾಡಿ ಕುಡಿದರೆ ತುಂಬಾ ಒಳ್ಳೆಯದು. ಖರ್ಜೂರದಲ್ಲಿ ಕಬ್ಬಿಣದಂಶ ಇರುವುದರಿಂದ ರಕ್ತಹೀನತೆಯನ್ನು ತಡೆಗಟ್ಟಬಹುದು.

2. ಗರ್ಭಿಣಿ, ತಾಯಿ ಮತ್ತು ಮಗು
ಗರ್ಭಿಣಿಯಾದಾಗ ಕೆಲವರಲ್ಲಿ ಹಿಮೋಗ್ಲೋಬಿನ್ ಅಂಶ ಕಡಿಮೆ ಇದ್ದರೆ ಖರ್ಜೂರ ತಿಂದರೆ ಸಾಕು ದೇಹದಲ್ಲಿ ರಕ್ತ ಕಣಗಳು ಹೆಚ್ಚಾಗಿ ಗರ್ಭಿಣಿಯ ಆರೋಗ್ಯ ವೃದ್ಧಿಸುತ್ತದೆ. ಖರ್ಜೂರದಲ್ಲಿರುವ ಖನಿಜಾಂಶಗಳು ಭ್ರೂಣದ ಬೆಳವಣಿಗೆಗೆ ಸಹಕಾರಿಯಾಗಿದೆ. ಹೆರಿಗೆಯ ನಂತರ ಎದೆಯಲ್ಲಿಹಾಲು ಹೆಚ್ಚು ಉತ್ಪತ್ತಿ ಮಾಡುತ್ತದೆ. ಖರ್ಜೂರ ಹಾಕಿ ಕಾಯಿಸಿದ ಹಾಲು ಮಕ್ಕಳಿಗೆ ಅತ್ಯುತ್ತಮವಾದ ಪೋಷಕಾಂಶವಾಗಿದೆ.

3. ಮಲಬದ್ಧತೆ
ಮಲಬದ್ಧತೆ ಸಮಸ್ಯೆಯಿದ್ದರೆ ಖರ್ಜೂರವನ್ನು ರಾತ್ರಿಯಲ್ಲಿ ನೀರಿನಲ್ಲಿ ನೆನೆ ಹಾಕಿ ಬೆಳಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು. ಇದರಲ್ಲಿ ನಾರಿನಂಶ ಅಧಿಕವಿರುವುದರಿಂದ ಮಲಬದ್ಧತೆ ಸಮಸ್ಯೆ ಕಂಡುಬರುವುದಿಲ್ಲ.

4. ಇರುಳು ಕುರುಡು
ಖರ್ಜೂರದಲ್ಲಿ ವಿಟಮಿನ್ ಎ ಹಾಗೂ antioxidant ಪ್ರಮಾಣ ಅಧಿಕವಿರುವುದರಿಂದ ಇರುಳು ಕುರುಡು ಸಮಸ್ಯೆಯ ವಿರುದ್ಧ ಹೋರಾಡುತ್ತದೆ.

5. ಸಂಧಿವಾತ
ಸಂಧಿ ನೋವು ಹೆಚ್ಚಿನವರಲ್ಲಿ ಕಂಡು ಬರುವ ಸಮಸ್ಯೆಯಾಗಿದೆ. ಮೂಳೆಯಲ್ಲಿ ಕ್ಯಾಲ್ಸಿಯಂ ಅಂಶಕಡಿಮೆ ಇರುವುದರಿಂದ ಈ ರೀತಿಯ ಸಮಸ್ಯೆ ಕಂಡು ಬರುತ್ತದೆ. ಖರ್ಜೂರದಲ್ಲಿ ಕ್ಯಾಲ್ಸಿಯಂ ಇರುವುದರಿಂದ ಮೂಳೆಗಳ ಆರೋಗ್ಯವನ್ನು ವೃದ್ಧಿಸುತ್ತದೆ.

6. ವಿಟಮಿನ್ ಗಳ ಕೊರತೆ:
ಇದರಲ್ಲಿ ಕ್ಯಾಲ್ಸಿಯಂ, ವಿಟಮಿನ್ ಬ5, ನಾರಿನಂಶ, ವಿಟಮಿನ್ ಬಿ3, ರಂಜಕ, ಕೊಬ್ಬಿನಂಶ, ಪೊಟಾಷ್ಯಿಯಂ, ತಾಮ್ರದ ಅಂಶವಿರುವುದರಿಂದ ವಿಟಮಿನ್ ಗಳ ಕೊರತೆ ಉಂಟಾಗುವುದಿಲ್ಲ.

7. ಹಲ್ಲಿನ ಆರೋಗ್ಯಕ್ಕೆ
ಹಲ್ಲಿನ ತೊಂದರೆ ಬರುವುದನ್ನು ತಡೆಯಲು ಖರ್ಜೂರ ತಿನ್ನುವುದು ಒಳ್ಳೆಯದು. ಇದರಲ್ಲಿ ಫ್ಲೋರೈನ್ ಅಂಶ ಇರುವುದರಿಂದ ಹಲ್ಲಿನ ಆರೋಗ್ಯ ಕಾಪಾಡುತ್ತದೆ.



Click it and Unblock the Notifications







