Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
ಖರ್ಜೂರದಲ್ಲಿದೆ 7 ಪ್ರಮುಖ ಆರೋಗ್ಯವರ್ಧಕ ಗುಣಗಳು
ಖರ್ಜೂರ ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವಂತಹ ಹಣ್ಣಾಗಿದೆ. ಸಿಹಿಯಾದ, ಪುಷ್ಠಿಯಾದ ಈ ಹಣ್ಣಿನಲ್ಲಿ ಆರೋಗ್ಯವರ್ಧಕ ಗುಣಗಳಿರುವುದರಿಂದ ಪ್ರತಿದಿನ ಒಂದು ಅಥವಾ ಎರಡು ಖರ್ಜೂವನ್ನು ಬಾಯಿಗೆ ಹಾಕಿಕೊಳ್ಳುವುದು ಒಳ್ಳೆಯದು. ಇದನ್ನು ತಿಂದರೆ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ರಕ್ತ ಹೀನತೆ ಸಮಸ್ಯೆಯನ್ನು ಹೋಗಲಾಡಿಸಬಹುದು. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಕರ್ಜೂರ ತಿಂದರೆ ಸಾಕು ಕಡಿಮೆಯಾಗುವುದು.
ಖರ್ಜೂರದಲ್ಲಿ ವಿಟಮಿನ್ ಗಳು ಮತ್ತು ಖನಿಜಾಂಶಗಳು ಹೇರಳವಾಗಿರುವುದರಿಂದ ಈ ಕೆಳಗಿನ ಪ್ರಮುಖ ಕಾಯಿಲೆಗಳ ನಿಬವಾರಣೆಗೆ ತುಂಬಾ ಸಹಕಾರಿಯಾಗಿದೆ.

1.ಹೃದ್ರೋಗ ಸಮಸ್ಯೆ ಕಡಿಮೆಮಾಡಲು
ಹೃದ್ರೋಗ ಸಮಸ್ಯೆ ಇರುವವರು ಖರ್ಜೂರವನ್ನು ರಾತ್ರಿಯಲ್ಲಿ ನೀರಿನಲ್ಲಿ ನೆನೆಹಾಕಿ ಬೆಳಗ್ಗೆ ಅದನ್ನು ಜ್ಯೂಸ್ ರೀತಿ ಮಾಡಿ ಕುಡಿದರೆ ತುಂಬಾ ಒಳ್ಳೆಯದು. ಖರ್ಜೂರದಲ್ಲಿ ಕಬ್ಬಿಣದಂಶ ಇರುವುದರಿಂದ ರಕ್ತಹೀನತೆಯನ್ನು ತಡೆಗಟ್ಟಬಹುದು.

2. ಗರ್ಭಿಣಿ, ತಾಯಿ ಮತ್ತು ಮಗು
ಗರ್ಭಿಣಿಯಾದಾಗ ಕೆಲವರಲ್ಲಿ ಹಿಮೋಗ್ಲೋಬಿನ್ ಅಂಶ ಕಡಿಮೆ ಇದ್ದರೆ ಖರ್ಜೂರ ತಿಂದರೆ ಸಾಕು ದೇಹದಲ್ಲಿ ರಕ್ತ ಕಣಗಳು ಹೆಚ್ಚಾಗಿ ಗರ್ಭಿಣಿಯ ಆರೋಗ್ಯ ವೃದ್ಧಿಸುತ್ತದೆ. ಖರ್ಜೂರದಲ್ಲಿರುವ ಖನಿಜಾಂಶಗಳು ಭ್ರೂಣದ ಬೆಳವಣಿಗೆಗೆ ಸಹಕಾರಿಯಾಗಿದೆ. ಹೆರಿಗೆಯ ನಂತರ ಎದೆಯಲ್ಲಿಹಾಲು ಹೆಚ್ಚು ಉತ್ಪತ್ತಿ ಮಾಡುತ್ತದೆ. ಖರ್ಜೂರ ಹಾಕಿ ಕಾಯಿಸಿದ ಹಾಲು ಮಕ್ಕಳಿಗೆ ಅತ್ಯುತ್ತಮವಾದ ಪೋಷಕಾಂಶವಾಗಿದೆ.

3. ಮಲಬದ್ಧತೆ
ಮಲಬದ್ಧತೆ ಸಮಸ್ಯೆಯಿದ್ದರೆ ಖರ್ಜೂರವನ್ನು ರಾತ್ರಿಯಲ್ಲಿ ನೀರಿನಲ್ಲಿ ನೆನೆ ಹಾಕಿ ಬೆಳಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು. ಇದರಲ್ಲಿ ನಾರಿನಂಶ ಅಧಿಕವಿರುವುದರಿಂದ ಮಲಬದ್ಧತೆ ಸಮಸ್ಯೆ ಕಂಡುಬರುವುದಿಲ್ಲ.

4. ಇರುಳು ಕುರುಡು
ಖರ್ಜೂರದಲ್ಲಿ ವಿಟಮಿನ್ ಎ ಹಾಗೂ antioxidant ಪ್ರಮಾಣ ಅಧಿಕವಿರುವುದರಿಂದ ಇರುಳು ಕುರುಡು ಸಮಸ್ಯೆಯ ವಿರುದ್ಧ ಹೋರಾಡುತ್ತದೆ.

5. ಸಂಧಿವಾತ
ಸಂಧಿ ನೋವು ಹೆಚ್ಚಿನವರಲ್ಲಿ ಕಂಡು ಬರುವ ಸಮಸ್ಯೆಯಾಗಿದೆ. ಮೂಳೆಯಲ್ಲಿ ಕ್ಯಾಲ್ಸಿಯಂ ಅಂಶಕಡಿಮೆ ಇರುವುದರಿಂದ ಈ ರೀತಿಯ ಸಮಸ್ಯೆ ಕಂಡು ಬರುತ್ತದೆ. ಖರ್ಜೂರದಲ್ಲಿ ಕ್ಯಾಲ್ಸಿಯಂ ಇರುವುದರಿಂದ ಮೂಳೆಗಳ ಆರೋಗ್ಯವನ್ನು ವೃದ್ಧಿಸುತ್ತದೆ.

6. ವಿಟಮಿನ್ ಗಳ ಕೊರತೆ:
ಇದರಲ್ಲಿ ಕ್ಯಾಲ್ಸಿಯಂ, ವಿಟಮಿನ್ ಬ5, ನಾರಿನಂಶ, ವಿಟಮಿನ್ ಬಿ3, ರಂಜಕ, ಕೊಬ್ಬಿನಂಶ, ಪೊಟಾಷ್ಯಿಯಂ, ತಾಮ್ರದ ಅಂಶವಿರುವುದರಿಂದ ವಿಟಮಿನ್ ಗಳ ಕೊರತೆ ಉಂಟಾಗುವುದಿಲ್ಲ.

7. ಹಲ್ಲಿನ ಆರೋಗ್ಯಕ್ಕೆ
ಹಲ್ಲಿನ ತೊಂದರೆ ಬರುವುದನ್ನು ತಡೆಯಲು ಖರ್ಜೂರ ತಿನ್ನುವುದು ಒಳ್ಳೆಯದು. ಇದರಲ್ಲಿ ಫ್ಲೋರೈನ್ ಅಂಶ ಇರುವುದರಿಂದ ಹಲ್ಲಿನ ಆರೋಗ್ಯ ಕಾಪಾಡುತ್ತದೆ.



Click it and Unblock the Notifications